AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!

ಫ್ರಿಡ್ಜ್​ನಲ್ಲಿ ಶವ ನೋಡಿ ಗಾಬರಿಯಾದ ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಶವವನ್ನು ರೆಫ್ರಿಜರೇಟರ್‌ನಲ್ಲಿ ತುಂಬಿಟ್ಟಿರುವುದು ಕಂಡುಬಂದಿದೆ.

Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!
ಪೊಲೀಸ್Image Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on: Jul 23, 2022 | 9:19 AM

Share

ನವದೆಹಲಿ: ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯನ್ನು ಕೊಂದು (Murder), ಅವರ ಮನೆಯ ಫ್ರಿಡ್ಜ್​​​ನಲ್ಲಿ ಶವವನ್ನು ಇಡಲಾಗಿತ್ತು. ಮೃತಪಟ್ಟ ವ್ಯಕ್ತಿಯನ್ನು ದೆಹಲಿಯ ಗೌತಮಪುರಿಯಲ್ಲಿ ವಾಸವಾಗಿದ್ದ ಜಾಕಿರ್ (50) ಎಂದು ಗುರುತಿಸಲಾಗಿದೆ. ಹಲವು ದಿನಗಳಿಂದ ಜಾಕಿರ್​​ಗೆ ಅವರ ಸಂಬಂಧಿಕರು ಫೋನ್ ಮಾಡಿದರೂ ಅವರು ಕರೆಯನ್ನು ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಅವರು ಜಾಕಿರ್​​ ಅವರ ಮನೆಗೆ ಹೋಗಿ ನೋಡಿದ್ದರು. ಇಡೀ ಮನೆ ಹುಡುಕಾಡಿದರೂ ಅವರಿಗೆ ಯಾರೂ ಕಂಡಿರಲಿಲ್ಲ. ಬಳಿಕ ರೂಮಿನ ಕಪಾಟು, ಬಾತ್​ರೂಂ ಎಲ್ಲ ಹುಡುಕಾಡಿ ಅಡುಗೆಮನೆಯ ಫ್ರಿಡ್ಜ್ ಓಪನ್ ಮಾಡಿದಾಗ ಅದರೊಳಗೆ ಜಾಕಿರ್​ ಶವವನ್ನು ಇಡಲಾಗಿತ್ತು.

ಫ್ರಿಡ್ಜ್​ನಲ್ಲಿ ಶವ ನೋಡಿ ಗಾಬರಿಯಾದ ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಶವವನ್ನು ರೆಫ್ರಿಜರೇಟರ್‌ನಲ್ಲಿ ತುಂಬಿಟ್ಟಿರುವುದು ಕಂಡುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪರಾಧ ತನಿಖೆ ಮತ್ತು ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ತಂಡಗಳನ್ನು ಅಪರಾಧದ ಸ್ಥಳದ ಪರಿಶೀಲನೆಗೆ ಕರೆಯಲಾಯಿತು.

ಇದನ್ನೂ ಓದಿ: Shocking News: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಕೊಂದ ಕ್ರೂರ ಪತಿ

ಜಾಕಿರ್ ಮನೆಯಲ್ಲಿ ಒಬ್ಬರೇ ವಾಸವಿದ್ದು, ಅವರ ಪತ್ನಿ ಮತ್ತು ಮಕ್ಕಳು ಬೇರೆ ಕಡೆ ವಾಸಿಸುತ್ತಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಕೊಲೆ ಆರೋಪಿಯ ಸುಳಿವು ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಜಾಕಿರ್ ಅವರನ್ನು ಆಸ್ತಿ ಸಂಬಂಧಿತ ವಿವಾದದಿಂದ ಅವರ ಸಂಬಂಧಿಕರೊಬ್ಬರು ಥಳಿಸಿದ್ದಾರೆ. ಆಗ ಜಾಕಿರ್ ಅವರ ತಲೆಗೆ ಪೆಟ್ಟು ಬಿದ್ದು, ಸಾವನ್ನಪ್ಪಿದ್ದಾರೆ. ನಂತರ ಅವರು ಆ ಶವವನ್ನು ಫ್ರಿಡ್ಜ್‌ನಲ್ಲಿ ಅಡಗಿಸಿಟ್ಟು, ಪರಾರಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ