AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇ ರಾಜಮನೆತನದೊಂದಿಗೆ ನಂಟು ಇದೆ ಎಂದು 5 ಸ್ಟಾರ್ ಹೋಟೆಲ್​​ನಲ್ಲಿ ವಾಸ್ತವ್ಯ; ₹23 ಲಕ್ಷ ಬಿಲ್ ಪಾವತಿಸದೆ ವ್ಯಕ್ತಿ ಪರಾರಿ

ಶನಿವಾರದಂದು ಲೀಲಾ ಪ್ಯಾಲೇಸ್ ಹೋಟೆಲ್ ಆಡಳಿತವು ನೀಡಿದ ದೂರಿನ ಮೇರೆಗೆ ವಂಚನೆ ಮತ್ತು ಕಳ್ಳತನದ ಆರೋಪ ಹೊತ್ತಿರುವ ಮೊಹಮ್ಮದ್ ಷರೀಫ್  ಎಂಬಾತನನ್ನು ದೆಹಲಿ ಪೊಲೀಸರು ಹುಡುಕುತ್ತಿದ್ದಾರೆ.

ಯುಎಇ ರಾಜಮನೆತನದೊಂದಿಗೆ ನಂಟು ಇದೆ ಎಂದು 5 ಸ್ಟಾರ್ ಹೋಟೆಲ್​​ನಲ್ಲಿ ವಾಸ್ತವ್ಯ; ₹23 ಲಕ್ಷ ಬಿಲ್ ಪಾವತಿಸದೆ ವ್ಯಕ್ತಿ ಪರಾರಿ
ಲೀಲಾ ಪ್ಯಾಲೇಸ್ ಹೋಟೆಲ್Image Credit source: leela palace delhi
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 17, 2023 | 1:58 PM

Share

ದೆಹಲಿ: ನಾಲ್ಕು ತಿಂಗಳ ಕಾಲ ದೆಹಲಿಯ (Delhi) ಐಷಾರಾಮಿ ಹೋಟೆಲ್‌ನಲ್ಲಿ ತಂಗಲು ಅಬುಧಾಬಿ ರಾಜಮನೆತನದ ಉದ್ಯೋಗಿಯಂತೆ ನಟಿಸಿದ ವ್ಯಕ್ತಿಯೊಬ್ಬರು ₹ 23 ಲಕ್ಷ ಬಿಲ್ ಪಾವತಿ ಮಾಡದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಶನಿವಾರದಂದು ಲೀಲಾ ಪ್ಯಾಲೇಸ್(Leela Palace) ಹೋಟೆಲ್ ಆಡಳಿತವು ನೀಡಿದ ದೂರಿನ ಮೇರೆಗೆ ವಂಚನೆ ಮತ್ತು ಕಳ್ಳತನದ ಆರೋಪ ಹೊತ್ತಿರುವ ಮೊಹಮ್ಮದ್ ಷರೀಫ್  ಎಂಬಾತನನ್ನು ದೆಹಲಿ ಪೊಲೀಸರು ಹುಡುಕುತ್ತಿದ್ದಾರೆ. ಷರೀಫ್ ಆಗಸ್ಟ್ 1 ರಂದು ಲೀಲಾ ಪ್ಯಾಲೇಸ್‌ನ 427 ನೇ ಕೊಠಡಿಗೆ ಚೆಕ್ ಇನ್ ಆಗಿದ್ದು ನವೆಂಬರ್ 20 ರಂದು ಯಾರಿಗೂ ಹೇಳದೆ ಅಲ್ಲಿಂದ ಓಡಿ ಹೋಗಿದ್ದ. ಈತ ಕೊಠಡಿಯಿಂದ ಬೆಳ್ಳಿ ಪಾತ್ರೆಗಳು ಮತ್ತು ಮುತ್ತಿನ ತಟ್ಟೆ ಸೇರಿದಂತೆ ಹಲವಾರು ವಸ್ತುಗಳನ್ನು ಕದ್ದಿದ್ದಾನೆ ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಹೋಟೆಲ್‌ಗೆ ಆಗಮಿಸಿದಾಗ ಷರೀಫ್  ತಾನು ಯುಎಇ ನಿವಾಸಿ ಮತ್ತು ಅಬುಧಾಬಿ ರಾಜಮನೆತನದ ಶೇಖ್ ಫಲಾಹ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದಾಗಿ ಸಿಬ್ಬಂದಿಗೆ ತಿಳಿಸಿದ್ದ .ತಾನು ಶೇಖ್ ಅವರೊಂದಿಗೆ ವೈಯಕ್ತಿಕವಾಗಿ ಕೆಲಸ ಮಾಡಿದ್ದೇನೆ.ಅವರು ಅಧಿಕೃತ ವ್ಯವಹಾರಕ್ಕಾಗಿ ಭಾರತದಲ್ಲಿದ್ದರು ಎಂದು ಷರೀಫ್ ಹೇಳಿದ್ದಾನೆ. ತಾನು ಹೇಳಿದ್ದು ನಿಜ ಎಂದು ದೃಢೀಕರಿಸಲು ಬ್ಯುಸಿನೆಸ್ ಕಾರ್ಡ್, ಯುಎಇ ನಿವಾಸಿ ಕಾರ್ಡ್ ಮತ್ತು ಇತರ ದಾಖಲೆಗಳನ್ನು ಸಹ ಆತ ತಯಾರಿಸಿದ್ದ. ಈತ ಯುಎಇಯಲ್ಲಿನ ತನ್ನ ಜೀವನದ ಬಗ್ಗೆ ಹೋಟೆಲ್ ಸಿಬ್ಬಂದಿಯೊಂದಿಗೆ ಮಾತನಾಡುತ್ತಲೇ ಇರುತ್ತಿದ್ದ ಎಂದು ಹೇಳಲಾಗಿದೆ.

ಇದನ್ನೂ ಓದಿ: Viral News: ದುಬಾರಿ ಗಿಫ್ಟ್​ ಕೊಡಲಿಲ್ಲವೆಂದು ಹೆಂಡತಿ ಮಾನಸಿಕ ಹಿಂಸೆ ನೀಡುತ್ತಾಳೆ; ಪೊಲೀಸರಿಗೆ ಗಂಡನಿಂದ ದೂರು

ಈ ದಾಖಲೆಗಳು ನಕಲಿ ಎಂದು ಶಂಕಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಷರೀಫ್ ನಾಲ್ಕು ತಿಂಗಳ ವಾಸ್ತವ್ಯದ ಕೊಠಡಿ ಮತ್ತು ಸೇವೆಗಳ ಬಿಲ್ ₹ 35 ಲಕ್ಷ ಆಗಿದೆ. ₹ 11.5 ಲಕ್ಷ ಪಾವತಿಸಿ ಉಳಿದ ಹಣವನ್ನು ನೀಡದೆ ಆತ ಹೋಟೆಲ್ ಬಿಟ್ಟಿದ್ದಾನೆ. ನ.20ರಂದು ಹೋಟೆಲ್ ನಿಂದ ಪರಾರಿಯಾಗಿದ್ದ ದಿನ ₹ 20 ಲಕ್ಷದ ಚೆಕ್ ಅನ್ನು ಸಿಬ್ಬಂದಿಗೆ ನೀಡಿದ್ದ. ವ್ಯಕ್ತಿಯನ್ನು ಗುರುತಿಸಲು ದೆಹಲಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ಮತ್ತಷ್ಟು  ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ