AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಪ್ಪನ ರೋಗ ಗುಣಪಡಿಸುತ್ತೇನೆಂದು ಕರೆಸಿ ಸ್ಮಶಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮಂತ್ರವಾದಿ

ದೆಹಲಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ 12 ವರ್ಷದ ಬಾಲಕಿಯೊಬ್ಬಳ ತಂದೆಯನ್ನು ಗುಣಪಡಿಸಲು ಮಾಟ ಮಾಡುವ ನೆಪದಲ್ಲಿ ಆ ಅಪ್ರಾಪ್ತ ಬಾಲಕಿಯನ್ನು ಸ್ಮಶಾನಕ್ಕೆ ಕರೆಸಿಕೊಂಡ ಮಂತ್ರವಾದಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

Crime News: ಅಪ್ಪನ ರೋಗ ಗುಣಪಡಿಸುತ್ತೇನೆಂದು ಕರೆಸಿ ಸ್ಮಶಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮಂತ್ರವಾದಿ
ಅತ್ಯಾಚಾರ
Follow us
ಸುಷ್ಮಾ ಚಕ್ರೆ
|

Updated on: Aug 28, 2024 | 8:08 PM

ನವದೆಹಲಿ: ಪಶ್ಚಿಮ ದೆಹಲಿಯ ರೋಹಿಣಿಯಲ್ಲಿ ಅತೀಂದ್ರಿಯ ಆಚರಣೆಗಳನ್ನು ಮಾಡುವ ನೆಪದಲ್ಲಿ 12 ವರ್ಷದ ಬಾಲಕಿಯ ಮೇಲೆ ಸ್ಮಶಾನದಲ್ಲಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಂತ್ರವಾದಿಯಂತೆ ನಟಿಸಿ ಬಾಲಕಿಯನ್ನು ಕಾಂಝಾವಾಲಾದ ಸ್ಮಶಾನಕ್ಕೆ ಕರೆದೊಯ್ದ ಆತ ಆಕೆಯ ಅನಾರೋಗ್ಯಪೀಡಿತ ತಂದೆಯನ್ನು ‘ಮಾಟ-ಮಂತ್ರ’ ಪದ್ಧತಿಗಳ ಮೂಲಕ ಗುಣಪಡಿಸಬಹುದೆಂದು ನಂಬಿಸಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಆರೋಪಿಯು ಆರಂಭದಲ್ಲಿ ಬಾಲಕಿಯ ಮನೆಗೆ ಭೇಟಿ ನೀಡಿ, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವ ತರಕಾರಿ ಮಾರಾಟಗಾರನಾಗಿದ್ದ ಆಕೆಯ ತಂದೆಗೆ ತನ್ನ ಮಗಳನ್ನು ತನ್ನೊಂದಿಗೆ ಧಾರ್ಮಿಕ ಕ್ರಿಯೆಗೆ ಕಳುಹಿಸುವಂತೆ ಮನವೊಲಿಸಿದ್ದ. ಅದರಂತೆ ಆಕೆಯ ತಂದೆ ತನ್ನ 12 ವರ್ಷದ ಮಗಳನ್ನು ಮಂತ್ರವಾದಿಯ ಬಳಿಗೆ ಕಳುಹಿಸಿದ್ದ. ಸೋಮವಾರ ಈ ಘಟನೆ ನಡೆದಿದೆ. ಆ ಹುಡುಗಿ ಆ ದಿನ ರಾತ್ರಿ ಮನೆಗೆ ಮರಳಿದವಳು ಬಹಳ ಮೌನವಾಗಿದ್ದಳು. ಮರುದಿನ ಅನಾರೋಗ್ಯಕ್ಕೆ ಒಳಗಾದಳು.

ಇದನ್ನೂ ಓದಿ: Crime News: ಆಟೋ ಹತ್ತಿದ ನರ್ಸಿಂಗ್ ವಿದ್ಯಾರ್ಥಿನಿಗೆ ಅಮಲು ಬರುವ ನೀರು ಕುಡಿಸಿ ಅತ್ಯಾಚಾರವೆಸಗಿದ ಚಾಲಕ

ಇದರಿಂದ ಚಿಂತೆಗೀಡಾದ ಆಕೆಯ ಮನೆಯವರು ವಿಚಾರಣೆ ಮಾಡಿದರೂ ಆಕೆ ಏನೂ ಹೇಳಿರಲಿಲ್ಲ. ಆರೋಪಿ ಆ ಬಾಲಕಿಗೆ ಬೆದರಿಕೆ ಹಾಕಿದ್ದು, ಅತ್ಯಾಚಾರ ನಡೆಸಿದ್ದನ್ನು ಯಾರಿಗೂ ಹೇಳಬೇಡ. ಒಂದುವೇಳೆ ಹೇಳಿದರೆ ನಿನ್ನ ತಂದೆ ಸಾಯುವುದಾಗಿ ಎಚ್ಚರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.

ಇದನ್ನೂ ಓದಿ: Crime News: ತನ್ನ ಮೇಲೆ ಅತ್ಯಾಚಾರವೆಸಗಿದವನನ್ನು ಬಂಧಿಸಲು ಬಟ್ಟೆ ಬಿಚ್ಚಿ ಪ್ರತಿಭಟಿಸಿದ ಯುವತಿ

ಬಾಲಕಿಯ ಕುಟುಂಬವು ಮಂಗಳವಾರ ಪೊಲೀಸರಿಗೆ ಈ ಕೃತ್ಯದ ಬಗ್ಗೆ ದೂರು ನೀಡಿದ್ದು, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 65(2) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ವರದಿಯಾದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?