AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶಾಸ್ತ್ರಿ ಪಾರ್ಕ್​ ಬಳಿ ಜನ ನಿಬಿಡ ಪ್ರದೇಶದಲ್ಲಿ ವ್ಯಕ್ತಿಗೆ ನಾಲ್ವರಿಂದ ಚಾಕು ಇರಿತ, ಗುಂಡಿನ ದಾಳಿ

ದೆಹಲಿಯ ಶಾಸ್ತ್ರಿ ಪಾರ್ಕ್​ ಬಳಿಕ ಜನನಿಬಿಡ ಪ್ರದೇಶದಲ್ಲಿ ಯುವಕನ ಮೇಲೆ ನಾಲ್ವರು ದಾಳಿ ನಡೆಸಿರುವ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಾರ್ಕ್​ ಬಳಿ ಎಲ್ಲೆರೆದುರೆ ಯುವಕನ ಮೇಲೆ ನಾಲ್ವರು ಚಾಕುವಿನಿಂದ ಇರಿದಿದ್ದಾರೆ ಜತೆಗೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೆಹಲಿ ಶಾಸ್ತ್ರಿ ಪಾರ್ಕ್​ ಬಳಿ ಜನ ನಿಬಿಡ ಪ್ರದೇಶದಲ್ಲಿ ವ್ಯಕ್ತಿಗೆ ನಾಲ್ವರಿಂದ ಚಾಕು ಇರಿತ, ಗುಂಡಿನ ದಾಳಿ
ಅಪರಾಧ
ನಯನಾ ರಾಜೀವ್
|

Updated on: Jan 28, 2024 | 9:57 AM

Share

ದೆಹಲಿಯ ಶಾಸ್ತ್ರಿ ಪಾರ್ಕ್​ ಬಳಿಕ ಜನನಿಬಿಡ ಪ್ರದೇಶದಲ್ಲಿ ಯುವಕನ ಮೇಲೆ ನಾಲ್ವರು ದಾಳಿ ನಡೆಸಿರುವ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಾರ್ಕ್​ ಬಳಿ ಎಲ್ಲೆರೆದುರೆ ಯುವಕನ ಮೇಲೆ ನಾಲ್ವರು ಚಾಕುವಿನಿಂದ ಇರಿದಿದ್ದಾರೆ ಜತೆಗೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾಲ್ವರು ಬ್ಯಾಗ್​ ತಯಾರಕರಾದ ಸಮೀರ್ ಅಹ್ಮದ್​ ಅವರನ್ನು ಹಿಂಬಾಲಿಸಿದ್ದರು ಮತ್ತು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ, ದಾಳಿಕೋರರು ಎರಡೂ ಕಾಲುಗಳಿಗೆ ಗುಂಡು ಹಾರಿಸಿದ್ದಾರೆ. ಸಮೀರ್‌ಗೆ ಎರಡೂ ಕಾಲುಗಳಿಗೆ ಗಾಯಗಳಾಗಿದ್ದು, ಆರಂಭದಲ್ಲಿ ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಜಿಟಿಬಿ ಆಸ್ಪತ್ರೆಗೆ ಮತ್ತು ನಂತರ ಆರ್‌ಎಂಎಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಿಕ್ಕಿರಿದ ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಜನರು ಓಡಿಹೋಗುವುದನ್ನು ಕಾಣಬಹುದಾಗಿದೆ. ವ್ಯಕ್ತಿಗೆ ಓಡಲಾಗದೆ ನೆಲದ ಮೇಲೆ ಮಲಗಿದ್ದ, ಆರೋಪಿಗಳಲ್ಲಿ ಓರ್ವ ಸ್ಕೂಟಿಯಲ್ಲಿ ಓಡಿ ಹೋದರೆ ಉಳಿದ ಮೂವರು ಆರೋಪಿಗಳು ಅದೇ ಸ್ಕೂಟಿ ಹಿಂಬಾಲಿಸಿ ಓಡಿ ಹೋಗಿದ್ದಾರೆ.

ಮತ್ತಷ್ಟು ಓದಿ: ಗಾಜಿಯಾಬಾದ್: ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ಪ್ರಕರಣದಲ್ಲಿ ನಾಲ್ವರು ಶಂಕಿತರನ್ನು ಪೊಲೀಸರು ಗುರುತಿಸಿದ್ದಾರೆ- ಬಿಲಾಲ್, ಸೌದ್, ಫಿರೋಜ್ ಮತ್ತು ಸಲೀಂ. ಆರೋಪಿಗಳ ಮೇಲೆ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಯುವಕ ಹಾಗೂ ನಾಲ್ವರು ಆರೋಪಿಗಳು ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದಾಗ ಸಮೀರ್ ಬಿಲಾಲ್‌ಗೆ ಕಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಬಿಲಾಲ್ ಮತ್ತು ಆತನ ಮೂವರು ಸ್ನೇಹಿತರು ಸಮೀರ್ ಮೇಲೆ ದಾಳಿ ನಡೆಸಿ ಗುಂಡು ಹಾರಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​