AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಆಫ್ತಾಬ್ ಗೆ ನಾರ್ಕೋ ಪರೀಕ್ಷೆಗೆ ಕೋರ್ಟ್ ಅನುಮತಿ

ದೆಹಲಿಯ ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್​ಗೆ 5 ದಿನ ಪೊಲೀಸ್ ಕಸ್ಟಡಿ ವಿಸ್ತರಣೆಯಾಗಿದ್ದು, ಜೊತೆಗೆ ನಾರ್ಕೋ ಟೆಸ್ಟ್​ಗೆ ಕೋರ್ಟ್ ಅನುಮತಿ ಕೊಟ್ಟಿದೆ.

ದೆಹಲಿ  ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಆಫ್ತಾಬ್ ಗೆ ನಾರ್ಕೋ ಪರೀಕ್ಷೆಗೆ ಕೋರ್ಟ್ ಅನುಮತಿ
ಅಫ್ತಾಬ್- ಶ್ರದ್ಧಾ
TV9 Web
| Edited By: |

Updated on:Nov 17, 2022 | 6:08 PM

Share

ನವದೆಹಲಿ: ಇಡೀ ದೇಶವೇ ಬಿಚ್ಚಿಬೀಳಿಸಿದ ದೆಹಲಿಯ ಶ್ರದ್ಧಾ ವಾಕರ್ (Shraddha Walkar) ಕೊಲೆ ಪ್ರಕರಣದ ಆರೋಪಿ ಅಫ್ತಾಬ್​ಗೆ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ಬಂಧಿತ ಪ್ರಿಯಕರ ಅಫ್ತಾಬ್‌ಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ನವದೆಹಲಿಯ ಸಾಕೇತ್ ಕೋರ್ಟ್‌ ಇಂದು(ನವೆಂಬರ್ 17) ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಯನ್ನು ಮಾದಕ ದ್ರವ್ಯ ಸೇವನೆ (ನಾರ್ಕೋ) ಪರೀಕ್ಷೆಗೆ ಒಳಪಡಿಸಲು ಅವಕಾಶ ನೀಡಿದೆ.

ಶ್ರದ್ಧಾ ವಾಕರ್ ಪ್ರಿಯಕರ ಅಫ್ತಾಬ್​ನನ್ನು ಪೊಲೀಸರು ವರ್ಚುವಲ್​ ಮೂಲಕ ಕೋರ್ಟ್‌ಗೆ ಹಾಜರುಪಡಿಸಿದ್ದ. ವಿಚಾರಣೆ ವೇಳೆ ಅಫ್ತಾಬ್​ ಕೊಲೆ ಬಗ್ಗೆ ಒಂದೊಂದೇ ರಹಸ್ಯ ಬಾಯ್ಬಿಡುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಇನ್ನಷ್ಟು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಅದರಂತೆ ಸಾಕೇತ್ ಕೋರ್ಟ್‌, ಅಫ್ತಾಬ್​ಗೆ ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

Delhi Murder Case: ದೆಹಲಿ ಕೊಲೆ ಪ್ರಕರಣ; ಶ್ರದ್ಧಾಳ ದೇಹದ 13 ಭಾಗ ಪತ್ತೆ; ತಲೆ, ಹತ್ಯೆಯ ಆಯುಧಕ್ಕಾಗಿ ಹುಡುಕಾಟ

ಘಟನೆ ಹಿನ್ನೆಲೆ

ದೆಹಲಿಯ ಅಪಾರ್ಟ್​ಮೆಂಟ್​​ನಲ್ಲಿ ತನ್ನೊಂದಿಗೆ ವಾಸವಾಗಿದ್ದ ಲಿವ್-ಇನ್ ಪಾರ್ಟನರ್​ ಶ್ರದ್ಧಾ ವಾಕರ್ ಎಂಬ 26 ವರ್ಷದ ಯುವತಿಯನ್ನು ಅಫ್ತಾಬ್ ಎಂಬ ಯುವಕ ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು 35 ಭಾಗಗಳಾಗಿ ತುಂಡು ಮಾಡಿ, ದೆಹಲಿ ಹಾಗೂ ಸುತ್ತಮುತ್ತ ಬಿಸಾಡಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. 6 ತಿಂಗಳ ಹಿಂದೆ ಅಂದರೆ ಕಳೆದ ಮೇನಲ್ಲಿ ನಡೆದ ಕೊಲೆ (Murder) ವಿಷಯ ಇದೀಗ ಬೆಳಕಿಗೆ ಬಂದಿದ್ದು, ಅಫ್ತಾಬ್​ ತಾನು ಮಾಡಿದ ಕೃತ್ಯವನ್ನು ಒಪ್ಪಿಕೊಂಡ ಬಳಿಕ ಪೊಲೀಸರು ಶ್ರದ್ಧಾಳ ಶವದ (Shraddha Murder) 35 ಭಾಗಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಈಗಾಗಲೇ ಆಕೆಯ ದೇಹದ 13 ಭಾಗಗಳು ಪತ್ತೆಯಾಗಿವೆ.

Published On - 6:08 pm, Thu, 17 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು