AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಆಫ್ತಾಬ್ ಗೆ ನಾರ್ಕೋ ಪರೀಕ್ಷೆಗೆ ಕೋರ್ಟ್ ಅನುಮತಿ

ದೆಹಲಿಯ ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್​ಗೆ 5 ದಿನ ಪೊಲೀಸ್ ಕಸ್ಟಡಿ ವಿಸ್ತರಣೆಯಾಗಿದ್ದು, ಜೊತೆಗೆ ನಾರ್ಕೋ ಟೆಸ್ಟ್​ಗೆ ಕೋರ್ಟ್ ಅನುಮತಿ ಕೊಟ್ಟಿದೆ.

ದೆಹಲಿ  ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಆಫ್ತಾಬ್ ಗೆ ನಾರ್ಕೋ ಪರೀಕ್ಷೆಗೆ ಕೋರ್ಟ್ ಅನುಮತಿ
ಅಫ್ತಾಬ್- ಶ್ರದ್ಧಾ
TV9 Web
| Edited By: |

Updated on:Nov 17, 2022 | 6:08 PM

Share

ನವದೆಹಲಿ: ಇಡೀ ದೇಶವೇ ಬಿಚ್ಚಿಬೀಳಿಸಿದ ದೆಹಲಿಯ ಶ್ರದ್ಧಾ ವಾಕರ್ (Shraddha Walkar) ಕೊಲೆ ಪ್ರಕರಣದ ಆರೋಪಿ ಅಫ್ತಾಬ್​ಗೆ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ಬಂಧಿತ ಪ್ರಿಯಕರ ಅಫ್ತಾಬ್‌ಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ನವದೆಹಲಿಯ ಸಾಕೇತ್ ಕೋರ್ಟ್‌ ಇಂದು(ನವೆಂಬರ್ 17) ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಯನ್ನು ಮಾದಕ ದ್ರವ್ಯ ಸೇವನೆ (ನಾರ್ಕೋ) ಪರೀಕ್ಷೆಗೆ ಒಳಪಡಿಸಲು ಅವಕಾಶ ನೀಡಿದೆ.

ಶ್ರದ್ಧಾ ವಾಕರ್ ಪ್ರಿಯಕರ ಅಫ್ತಾಬ್​ನನ್ನು ಪೊಲೀಸರು ವರ್ಚುವಲ್​ ಮೂಲಕ ಕೋರ್ಟ್‌ಗೆ ಹಾಜರುಪಡಿಸಿದ್ದ. ವಿಚಾರಣೆ ವೇಳೆ ಅಫ್ತಾಬ್​ ಕೊಲೆ ಬಗ್ಗೆ ಒಂದೊಂದೇ ರಹಸ್ಯ ಬಾಯ್ಬಿಡುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಇನ್ನಷ್ಟು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಅದರಂತೆ ಸಾಕೇತ್ ಕೋರ್ಟ್‌, ಅಫ್ತಾಬ್​ಗೆ ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

Delhi Murder Case: ದೆಹಲಿ ಕೊಲೆ ಪ್ರಕರಣ; ಶ್ರದ್ಧಾಳ ದೇಹದ 13 ಭಾಗ ಪತ್ತೆ; ತಲೆ, ಹತ್ಯೆಯ ಆಯುಧಕ್ಕಾಗಿ ಹುಡುಕಾಟ

ಘಟನೆ ಹಿನ್ನೆಲೆ

ದೆಹಲಿಯ ಅಪಾರ್ಟ್​ಮೆಂಟ್​​ನಲ್ಲಿ ತನ್ನೊಂದಿಗೆ ವಾಸವಾಗಿದ್ದ ಲಿವ್-ಇನ್ ಪಾರ್ಟನರ್​ ಶ್ರದ್ಧಾ ವಾಕರ್ ಎಂಬ 26 ವರ್ಷದ ಯುವತಿಯನ್ನು ಅಫ್ತಾಬ್ ಎಂಬ ಯುವಕ ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು 35 ಭಾಗಗಳಾಗಿ ತುಂಡು ಮಾಡಿ, ದೆಹಲಿ ಹಾಗೂ ಸುತ್ತಮುತ್ತ ಬಿಸಾಡಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. 6 ತಿಂಗಳ ಹಿಂದೆ ಅಂದರೆ ಕಳೆದ ಮೇನಲ್ಲಿ ನಡೆದ ಕೊಲೆ (Murder) ವಿಷಯ ಇದೀಗ ಬೆಳಕಿಗೆ ಬಂದಿದ್ದು, ಅಫ್ತಾಬ್​ ತಾನು ಮಾಡಿದ ಕೃತ್ಯವನ್ನು ಒಪ್ಪಿಕೊಂಡ ಬಳಿಕ ಪೊಲೀಸರು ಶ್ರದ್ಧಾಳ ಶವದ (Shraddha Murder) 35 ಭಾಗಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಈಗಾಗಲೇ ಆಕೆಯ ದೇಹದ 13 ಭಾಗಗಳು ಪತ್ತೆಯಾಗಿವೆ.

Published On - 6:08 pm, Thu, 17 November 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ