AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಯ ಮನೆಗೆ ನುಗ್ಗಿ ಕುಟುಂಬವನ್ನು ಒತ್ತೆಯಾಳಾಗಿರಿಸಿ 1.3 ಕೋಟಿ ರೂ. ದೋಚಿದ ಶಸ್ತ್ರಸಜ್ಜಿತ ದರೋಡೆಕೋರರು

ಶಸ್ತ್ರಸಜ್ಜಿತ ದರೋಡೆಕೋರರು ಉದ್ಯಮಿಯ ಮನೆಗೆ ನುಗ್ಗಿ ಕುಟುಂಬದವರನ್ನು ಒತ್ತೆಯಾಳಾಗಿರಿಸಿಕೊಂಡು 1.3 ಕೋಟಿ ರೂ. ದೋಚಿ ಪರಾರಿಯಾಗಿದ್ದಾರೆ.

ಉದ್ಯಮಿಯ ಮನೆಗೆ ನುಗ್ಗಿ ಕುಟುಂಬವನ್ನು ಒತ್ತೆಯಾಳಾಗಿರಿಸಿ 1.3 ಕೋಟಿ ರೂ. ದೋಚಿದ ಶಸ್ತ್ರಸಜ್ಜಿತ ದರೋಡೆಕೋರರು
ಪೊಲೀಸ್Image Credit source: India.com
ನಯನಾ ರಾಜೀವ್
|

Updated on: May 09, 2023 | 8:12 AM

Share

ಶಸ್ತ್ರಸಜ್ಜಿತ ದರೋಡೆಕೋರರು ಉದ್ಯಮಿಯ ಮನೆಗೆ ನುಗ್ಗಿ ಕುಟುಂಬದವರನ್ನು ಒತ್ತೆಯಾಳಾಗಿರಿಸಿಕೊಂಡು 1.3 ಕೋಟಿ ರೂ. ದೋಚಿ ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೆ 2 ಕೆಜಿ ಚಿನ್ನವನ್ನು ಕೂಡ ಕದ್ದೊಯ್ದಿದ್ದಾರೆ, ಭಾನುವಾರ ಬೆಳಗ್ಗೆ ಮನೆಯ ಕಿಟಕಿ ಗ್ರಿಲ್​ಗಳನ್ನು ಕತ್ತರಿಸಿ ಬಳಿಕ ಮನೆಗೆ ನುಗ್ಗಿದ್ದಾರೆ. ಅಶೋಕ್ ವಿಹಾರ್ 2 ನೇ ಹಂತದಲ್ಲಿ ವಾಸಿಸುವ ಉದ್ಯಮಿಯು ಪೇಪರ್ ವ್ಯಾಪಾರವನ್ನು ಹೊಂದಿದ್ದಾರೆ ಮತ್ತು ಅವರ ತಂದೆ ಗುತ್ತಿಗೆದಾರರಾಗಿದ್ದಾರೆ.

ಬಂದೂಕು ತೋರಿಸಿ ಕುಟುಂಬದ ಸದಸ್ಯರನ್ನು ರೂಮಿನಲ್ಲಿ ಕೂಡಹಾಕಿ, ಬಳಿಕ ಚಾಕು ಹಾಗೂ ಗನ್ ಹಿಡಿದು ಚಿನ್ನಾಭರಣ ಹಣವನ್ನು ಎಲ್ಲಿ ಇಟ್ಟಿದ್ದಾರೆ ಎಂದು ತೋರಿಸುವಂತೆ ಒತ್ತಾಯಿಸಿದರು. ಮಧ್ಯಾಹ್ನ 1.30 ರ ವೇಳೆಗೆ ದರೋಡೆಕೋರರು ಮನೆಗೆ ನುಗ್ಗಿದ್ದಾರೆ. ಕುಟುಂಬದವರನ್ನು ಸುಮಾರು 1 ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡಿದ್ದರು.

ಮತ್ತಷ್ಟು ಓದಿ: ವಿಜಯಪುರ ನಗರದಲ್ಲಿ ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ; ಸ್ಥಳದಲ್ಲಿ ಭಯದ ವಾತಾವರಣ

ದರೋಡೆಕೋರರು ಮನೆಯಿಂದ ಹೋಗುವ ಮುನ್ನ ಒಂದೊಮ್ಮೆ ವಿಷಯ ಪೊಲೀಸರಿಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳು ಶಂಕಿತರು 2.45 ರ ಸುಮಾರಿಗೆ ಮನೆಯಿಂದ ಹೊರಹೋಗುವುದನ್ನು ತೋರಿಸಿದೆ.

ಅಪರಾಧ ಎಸಗಿದ ನಂತರ ಆರೋಪಿಗಳು ರೈಲು ನಿಲ್ದಾಣದಿಂದ ಪರಾರಿಯಾಗಿರಬಹುದು ಎಂದು ಹೇಳಲಾಗಿದೆ. ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ, ಎರಡು ಬ್ಯಾಗ್‌ಗಳನ್ನು ಹೊತ್ತಿರುವ ಪುರುಷರ ಗುಂಪು ರೈಲು ಹಳಿಗಳ ಮೇಲೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ