AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಯ ಮನೆಗೆ ನುಗ್ಗಿ ಕುಟುಂಬವನ್ನು ಒತ್ತೆಯಾಳಾಗಿರಿಸಿ 1.3 ಕೋಟಿ ರೂ. ದೋಚಿದ ಶಸ್ತ್ರಸಜ್ಜಿತ ದರೋಡೆಕೋರರು

ಶಸ್ತ್ರಸಜ್ಜಿತ ದರೋಡೆಕೋರರು ಉದ್ಯಮಿಯ ಮನೆಗೆ ನುಗ್ಗಿ ಕುಟುಂಬದವರನ್ನು ಒತ್ತೆಯಾಳಾಗಿರಿಸಿಕೊಂಡು 1.3 ಕೋಟಿ ರೂ. ದೋಚಿ ಪರಾರಿಯಾಗಿದ್ದಾರೆ.

ಉದ್ಯಮಿಯ ಮನೆಗೆ ನುಗ್ಗಿ ಕುಟುಂಬವನ್ನು ಒತ್ತೆಯಾಳಾಗಿರಿಸಿ 1.3 ಕೋಟಿ ರೂ. ದೋಚಿದ ಶಸ್ತ್ರಸಜ್ಜಿತ ದರೋಡೆಕೋರರು
ಪೊಲೀಸ್Image Credit source: India.com
ನಯನಾ ರಾಜೀವ್
|

Updated on: May 09, 2023 | 8:12 AM

Share

ಶಸ್ತ್ರಸಜ್ಜಿತ ದರೋಡೆಕೋರರು ಉದ್ಯಮಿಯ ಮನೆಗೆ ನುಗ್ಗಿ ಕುಟುಂಬದವರನ್ನು ಒತ್ತೆಯಾಳಾಗಿರಿಸಿಕೊಂಡು 1.3 ಕೋಟಿ ರೂ. ದೋಚಿ ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೆ 2 ಕೆಜಿ ಚಿನ್ನವನ್ನು ಕೂಡ ಕದ್ದೊಯ್ದಿದ್ದಾರೆ, ಭಾನುವಾರ ಬೆಳಗ್ಗೆ ಮನೆಯ ಕಿಟಕಿ ಗ್ರಿಲ್​ಗಳನ್ನು ಕತ್ತರಿಸಿ ಬಳಿಕ ಮನೆಗೆ ನುಗ್ಗಿದ್ದಾರೆ. ಅಶೋಕ್ ವಿಹಾರ್ 2 ನೇ ಹಂತದಲ್ಲಿ ವಾಸಿಸುವ ಉದ್ಯಮಿಯು ಪೇಪರ್ ವ್ಯಾಪಾರವನ್ನು ಹೊಂದಿದ್ದಾರೆ ಮತ್ತು ಅವರ ತಂದೆ ಗುತ್ತಿಗೆದಾರರಾಗಿದ್ದಾರೆ.

ಬಂದೂಕು ತೋರಿಸಿ ಕುಟುಂಬದ ಸದಸ್ಯರನ್ನು ರೂಮಿನಲ್ಲಿ ಕೂಡಹಾಕಿ, ಬಳಿಕ ಚಾಕು ಹಾಗೂ ಗನ್ ಹಿಡಿದು ಚಿನ್ನಾಭರಣ ಹಣವನ್ನು ಎಲ್ಲಿ ಇಟ್ಟಿದ್ದಾರೆ ಎಂದು ತೋರಿಸುವಂತೆ ಒತ್ತಾಯಿಸಿದರು. ಮಧ್ಯಾಹ್ನ 1.30 ರ ವೇಳೆಗೆ ದರೋಡೆಕೋರರು ಮನೆಗೆ ನುಗ್ಗಿದ್ದಾರೆ. ಕುಟುಂಬದವರನ್ನು ಸುಮಾರು 1 ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡಿದ್ದರು.

ಮತ್ತಷ್ಟು ಓದಿ: ವಿಜಯಪುರ ನಗರದಲ್ಲಿ ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ; ಸ್ಥಳದಲ್ಲಿ ಭಯದ ವಾತಾವರಣ

ದರೋಡೆಕೋರರು ಮನೆಯಿಂದ ಹೋಗುವ ಮುನ್ನ ಒಂದೊಮ್ಮೆ ವಿಷಯ ಪೊಲೀಸರಿಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳು ಶಂಕಿತರು 2.45 ರ ಸುಮಾರಿಗೆ ಮನೆಯಿಂದ ಹೊರಹೋಗುವುದನ್ನು ತೋರಿಸಿದೆ.

ಅಪರಾಧ ಎಸಗಿದ ನಂತರ ಆರೋಪಿಗಳು ರೈಲು ನಿಲ್ದಾಣದಿಂದ ಪರಾರಿಯಾಗಿರಬಹುದು ಎಂದು ಹೇಳಲಾಗಿದೆ. ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ, ಎರಡು ಬ್ಯಾಗ್‌ಗಳನ್ನು ಹೊತ್ತಿರುವ ಪುರುಷರ ಗುಂಪು ರೈಲು ಹಳಿಗಳ ಮೇಲೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ