AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ

ಆಗ್ರಾದ ಗೆಸ್ಟ್​ಹೌಸ್​ನಲ್ಲಿ 32 ವರ್ಷದ ನರ್ಸ್ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಿಳೆ ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎಸಿಪಿ ನ್ಯೂ ಆಗ್ರಾ ಆದಿತ್ಯ ಸಿಂಗ್ ಪ್ರಕಾರ, ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿ ಮಾಡಲು ಬಂದಿದ್ದರು. ನಂತರದಲ್ಲಿ ಆಕೆ ಎಲ್ಲಿಗೆ ಹೋಗುತ್ತಿದ್ದೇನೆಂದು ಯಾರಿಗೂ ತಿಳಿಸದೆ ಮನೆಯಿಂದ ಹೋಗಿದ್ದರು.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ
ನಯನಾ ರಾಜೀವ್
|

Updated on: Feb 06, 2024 | 7:55 AM

Share

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ದೆಹಲಿಯ ನರ್ಸ್​ ಒಬ್ಬರು ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿಯಾಗಲು ಬಂದಿದ್ದರು. ಅವರನ್ನು ಭೇಟಿಯಾದ ಬಳಿಕ ಅವರು ಎಲ್ಲಿಗೆ ಹೋಗುತ್ತಿದ್ದಾರೆಂದಯ ಯಾರಿಗೂ ತಿಳಿಸದೆ ಮನೆಯಿಂದ ಹೊರಟುಹೋಗಿದ್ದಳು. ಕೆಲವು ಗಂಟೆಗಳ ನಂತರ, ಕಮಲಾ ನಗರ ಪ್ರದೇಶದಲ್ಲಿರುವ ತೋರನ್ ಅತಿಥಿ ಗೃಹದ ಕೊಠಡಿಯೊಳಗೆ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.

ಮಹಿಳೆಯೊಬ್ಬರು ತಮ್ಮ ರೈಲು ತಡವಾಗಿದ್ದರಿಂದ ಕೆಲವು ಗಂಟೆಗಳ ಕಾಲ ವಿಶ್ರಾಂತಿ ಬೇಕು ಎಂದು ಹೇಳಿ ಕೆಲವು ಗಂಟೆಗಳ ಕಾಲ ಕೊಠಡಿಯನ್ನು ಕಾಯ್ದಿರಿಸಿದ್ದರು ಎಂದು ಅತಿಥಿ ಗೃಹದ ಸಿಬ್ಬಂದಿಯಿಂದ ಪೊಲೀಸರು ಮಾಹಿತಿ ಪಡೆದಿದ್ದಾರೆ ಎಂದು ಸಿಂಗ್ ಹೇಳಿದರು. ಚೆಕ್‌ಔಟ್‌ ಸಮಯ ಕಳೆದು ಹಲವು ಗಂಟೆಗಳಾದರೂ ಆಕೆ ಕೊಠಡಿಯಿಂದ ಹೊರಗೆ ಬರದ ಹಿನ್ನೆಲೆಯಲ್ಲಿ ಅತಿಥಿ ಗೃಹದ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಗ ಕುಸುಮ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿದ್ದಾರೆ. ಆಕೆಯ ಸಾವಿನ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಆಕೆ ಅತಿಥಿ ಗೃಹದಲ್ಲಿ ಯಾರನ್ನಾದರೂ ಭೇಟಿಯಾಗಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸುಮ್ ಅವರ ಪತಿ ಗಬ್ಬರ್ ದೆಹಲಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಆಕೆಯೊಂದಿಗೆ ಹೋಗಲು ಸಾಧ್ಯವಾಗದ ಕಾರಣ ಆಕೆ ಒಬ್ಬಳೇ ಆಗ್ರಾಕ್ಕೆ ಬಂದಿದ್ದರು ಎಂದು ಆಕೆಯ ಪೋಷಕರು ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ

ಪ್ರಾಥಮಿಕ ತನಿಖೆಯ ಪ್ರಕಾರ, ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸುತ್ತಿದ್ದಾರೆ ಆದರೆ ಅತಿಥಿ ಗೃಹದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!