AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ

ಆಗ್ರಾದ ಗೆಸ್ಟ್​ಹೌಸ್​ನಲ್ಲಿ 32 ವರ್ಷದ ನರ್ಸ್ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಿಳೆ ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎಸಿಪಿ ನ್ಯೂ ಆಗ್ರಾ ಆದಿತ್ಯ ಸಿಂಗ್ ಪ್ರಕಾರ, ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿ ಮಾಡಲು ಬಂದಿದ್ದರು. ನಂತರದಲ್ಲಿ ಆಕೆ ಎಲ್ಲಿಗೆ ಹೋಗುತ್ತಿದ್ದೇನೆಂದು ಯಾರಿಗೂ ತಿಳಿಸದೆ ಮನೆಯಿಂದ ಹೋಗಿದ್ದರು.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ
ನಯನಾ ರಾಜೀವ್
|

Updated on: Feb 06, 2024 | 7:55 AM

Share

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ದೆಹಲಿಯ ನರ್ಸ್​ ಒಬ್ಬರು ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿಯಾಗಲು ಬಂದಿದ್ದರು. ಅವರನ್ನು ಭೇಟಿಯಾದ ಬಳಿಕ ಅವರು ಎಲ್ಲಿಗೆ ಹೋಗುತ್ತಿದ್ದಾರೆಂದಯ ಯಾರಿಗೂ ತಿಳಿಸದೆ ಮನೆಯಿಂದ ಹೊರಟುಹೋಗಿದ್ದಳು. ಕೆಲವು ಗಂಟೆಗಳ ನಂತರ, ಕಮಲಾ ನಗರ ಪ್ರದೇಶದಲ್ಲಿರುವ ತೋರನ್ ಅತಿಥಿ ಗೃಹದ ಕೊಠಡಿಯೊಳಗೆ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.

ಮಹಿಳೆಯೊಬ್ಬರು ತಮ್ಮ ರೈಲು ತಡವಾಗಿದ್ದರಿಂದ ಕೆಲವು ಗಂಟೆಗಳ ಕಾಲ ವಿಶ್ರಾಂತಿ ಬೇಕು ಎಂದು ಹೇಳಿ ಕೆಲವು ಗಂಟೆಗಳ ಕಾಲ ಕೊಠಡಿಯನ್ನು ಕಾಯ್ದಿರಿಸಿದ್ದರು ಎಂದು ಅತಿಥಿ ಗೃಹದ ಸಿಬ್ಬಂದಿಯಿಂದ ಪೊಲೀಸರು ಮಾಹಿತಿ ಪಡೆದಿದ್ದಾರೆ ಎಂದು ಸಿಂಗ್ ಹೇಳಿದರು. ಚೆಕ್‌ಔಟ್‌ ಸಮಯ ಕಳೆದು ಹಲವು ಗಂಟೆಗಳಾದರೂ ಆಕೆ ಕೊಠಡಿಯಿಂದ ಹೊರಗೆ ಬರದ ಹಿನ್ನೆಲೆಯಲ್ಲಿ ಅತಿಥಿ ಗೃಹದ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಗ ಕುಸುಮ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿದ್ದಾರೆ. ಆಕೆಯ ಸಾವಿನ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಆಕೆ ಅತಿಥಿ ಗೃಹದಲ್ಲಿ ಯಾರನ್ನಾದರೂ ಭೇಟಿಯಾಗಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸುಮ್ ಅವರ ಪತಿ ಗಬ್ಬರ್ ದೆಹಲಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಆಕೆಯೊಂದಿಗೆ ಹೋಗಲು ಸಾಧ್ಯವಾಗದ ಕಾರಣ ಆಕೆ ಒಬ್ಬಳೇ ಆಗ್ರಾಕ್ಕೆ ಬಂದಿದ್ದರು ಎಂದು ಆಕೆಯ ಪೋಷಕರು ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ

ಪ್ರಾಥಮಿಕ ತನಿಖೆಯ ಪ್ರಕಾರ, ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸುತ್ತಿದ್ದಾರೆ ಆದರೆ ಅತಿಥಿ ಗೃಹದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ