AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ

ಆಗ್ರಾದ ಗೆಸ್ಟ್​ಹೌಸ್​ನಲ್ಲಿ 32 ವರ್ಷದ ನರ್ಸ್ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಿಳೆ ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎಸಿಪಿ ನ್ಯೂ ಆಗ್ರಾ ಆದಿತ್ಯ ಸಿಂಗ್ ಪ್ರಕಾರ, ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿ ಮಾಡಲು ಬಂದಿದ್ದರು. ನಂತರದಲ್ಲಿ ಆಕೆ ಎಲ್ಲಿಗೆ ಹೋಗುತ್ತಿದ್ದೇನೆಂದು ಯಾರಿಗೂ ತಿಳಿಸದೆ ಮನೆಯಿಂದ ಹೋಗಿದ್ದರು.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ
ನಯನಾ ರಾಜೀವ್
|

Updated on: Feb 06, 2024 | 7:55 AM

Share

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ದೆಹಲಿಯ ನರ್ಸ್​ ಒಬ್ಬರು ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿಯಾಗಲು ಬಂದಿದ್ದರು. ಅವರನ್ನು ಭೇಟಿಯಾದ ಬಳಿಕ ಅವರು ಎಲ್ಲಿಗೆ ಹೋಗುತ್ತಿದ್ದಾರೆಂದಯ ಯಾರಿಗೂ ತಿಳಿಸದೆ ಮನೆಯಿಂದ ಹೊರಟುಹೋಗಿದ್ದಳು. ಕೆಲವು ಗಂಟೆಗಳ ನಂತರ, ಕಮಲಾ ನಗರ ಪ್ರದೇಶದಲ್ಲಿರುವ ತೋರನ್ ಅತಿಥಿ ಗೃಹದ ಕೊಠಡಿಯೊಳಗೆ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.

ಮಹಿಳೆಯೊಬ್ಬರು ತಮ್ಮ ರೈಲು ತಡವಾಗಿದ್ದರಿಂದ ಕೆಲವು ಗಂಟೆಗಳ ಕಾಲ ವಿಶ್ರಾಂತಿ ಬೇಕು ಎಂದು ಹೇಳಿ ಕೆಲವು ಗಂಟೆಗಳ ಕಾಲ ಕೊಠಡಿಯನ್ನು ಕಾಯ್ದಿರಿಸಿದ್ದರು ಎಂದು ಅತಿಥಿ ಗೃಹದ ಸಿಬ್ಬಂದಿಯಿಂದ ಪೊಲೀಸರು ಮಾಹಿತಿ ಪಡೆದಿದ್ದಾರೆ ಎಂದು ಸಿಂಗ್ ಹೇಳಿದರು. ಚೆಕ್‌ಔಟ್‌ ಸಮಯ ಕಳೆದು ಹಲವು ಗಂಟೆಗಳಾದರೂ ಆಕೆ ಕೊಠಡಿಯಿಂದ ಹೊರಗೆ ಬರದ ಹಿನ್ನೆಲೆಯಲ್ಲಿ ಅತಿಥಿ ಗೃಹದ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಗ ಕುಸುಮ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿದ್ದಾರೆ. ಆಕೆಯ ಸಾವಿನ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಆಕೆ ಅತಿಥಿ ಗೃಹದಲ್ಲಿ ಯಾರನ್ನಾದರೂ ಭೇಟಿಯಾಗಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸುಮ್ ಅವರ ಪತಿ ಗಬ್ಬರ್ ದೆಹಲಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಆಕೆಯೊಂದಿಗೆ ಹೋಗಲು ಸಾಧ್ಯವಾಗದ ಕಾರಣ ಆಕೆ ಒಬ್ಬಳೇ ಆಗ್ರಾಕ್ಕೆ ಬಂದಿದ್ದರು ಎಂದು ಆಕೆಯ ಪೋಷಕರು ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ

ಪ್ರಾಥಮಿಕ ತನಿಖೆಯ ಪ್ರಕಾರ, ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸುತ್ತಿದ್ದಾರೆ ಆದರೆ ಅತಿಥಿ ಗೃಹದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ