AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ದೆಹಲಿಯ ಅಂಗಡಿಯ ಮಾಲೀಕನೊಬ್ಬ ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ವ್ಯಕ್ತಿಯನ್ನು ಕಬ್ಬಿಣದ ರಾಡ್​ನಿಂದು ಹೊಡೆದು, ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 03, 2024 | 9:36 PM

Share

ನವದೆಹಲಿ: ವಾಯುವ್ಯ ದೆಹಲಿಯ ಶಕುರ್‌ಪುರದಲ್ಲಿ ತಮ್ಮ ಅಂಗಡಿಯಿಂದ ದಿನಸಿಯನ್ನು ಖರೀದಿಸಲಿಲ್ಲ ಎಂಬ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಿರಾಣಿ ಅಂಗಡಿ ಮಾಲೀಕರು ಮತ್ತು ಅವರ ಪುತ್ರರು ಗ್ರಾಹಕನನ್ನು ಕೊಲೆ ಮಾಡಿದ್ದಾರೆ ಇರಿದಿದ್ದಾರೆ.

ಪೊಲೀಸರ ಪ್ರಕಾರ, ಜೂನ್ 30ರಂದು ಈ ಘಟನೆ ನಡೆದಿದ್ದು, ಮೃತನನ್ನು ವಿಕ್ರಮ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಲೋಕೇಶ್ ಗುಪ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪ್ರಿಯಾಂಶ್ ಮತ್ತು ಹರ್ಷ್ ಅವರನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದ್ದರು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಲೋಕೇಶ್ ಗುಪ್ತಾ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ವಿಕ್ರಮ್ ಅವರ ಕುಟುಂಬದವರು ಗುಪ್ತಾರ ಅಂಗಡಿಯಲ್ಲೇ ದಿನಸಿ ಖರೀದಿಸುತ್ತಿದ್ದರು. ಅವರು ಗುಪ್ತಾರ ಹಳೆಯ ಸಾಮಾನ್ಯ ಗ್ರಾಹಕರಾಗಿದ್ದರು. ಸುಮಾರು 1 ತಿಂಗಳ ಹಿಂದೆ, ಕುಟುಂಬದವರ ನಡುವೆ ಕೆಲವು ಸಮಸ್ಯೆಗಳಿಂದಾಗಿ ಗುಪ್ತಾ ಅವರ ಅಂಗಡಿಯಿಂದ ಆಹಾರ ಪದಾರ್ಥಗಳನ್ನು ಖರೀದಿಸುವುದನ್ನು ನಿಲ್ಲಿಸಿದರು. ಇದು ಅವರನ್ನು ಕೆರಳಿಸಿತು.

ಇದನ್ನೂ ಓದಿ: Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅವರ ನಡುವೆ ಜಗಳ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಜಗಳದ ವೇಳೆ ಗುಪ್ತಾ ಮತ್ತು ಅವರ ಮಕ್ಕಳು ವಿಕ್ರಮ್ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಕುತ್ತಿಗೆಗೆ ಇರಿದಿದ್ದಾರೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!