ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ದೆಹಲಿಯ ಅಂಗಡಿಯ ಮಾಲೀಕನೊಬ್ಬ ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ವ್ಯಕ್ತಿಯನ್ನು ಕಬ್ಬಿಣದ ರಾಡ್​ನಿಂದು ಹೊಡೆದು, ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ
ಸಾಂದರ್ಭಿಕ ಚಿತ್ರ

Updated on: Jul 03, 2024 | 9:36 PM

ನವದೆಹಲಿ: ವಾಯುವ್ಯ ದೆಹಲಿಯ ಶಕುರ್‌ಪುರದಲ್ಲಿ ತಮ್ಮ ಅಂಗಡಿಯಿಂದ ದಿನಸಿಯನ್ನು ಖರೀದಿಸಲಿಲ್ಲ ಎಂಬ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಿರಾಣಿ ಅಂಗಡಿ ಮಾಲೀಕರು ಮತ್ತು ಅವರ ಪುತ್ರರು ಗ್ರಾಹಕನನ್ನು ಕೊಲೆ ಮಾಡಿದ್ದಾರೆ ಇರಿದಿದ್ದಾರೆ.

ಪೊಲೀಸರ ಪ್ರಕಾರ, ಜೂನ್ 30ರಂದು ಈ ಘಟನೆ ನಡೆದಿದ್ದು, ಮೃತನನ್ನು ವಿಕ್ರಮ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಲೋಕೇಶ್ ಗುಪ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪ್ರಿಯಾಂಶ್ ಮತ್ತು ಹರ್ಷ್ ಅವರನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದ್ದರು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಲೋಕೇಶ್ ಗುಪ್ತಾ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ವಿಕ್ರಮ್ ಅವರ ಕುಟುಂಬದವರು ಗುಪ್ತಾರ ಅಂಗಡಿಯಲ್ಲೇ ದಿನಸಿ ಖರೀದಿಸುತ್ತಿದ್ದರು. ಅವರು ಗುಪ್ತಾರ ಹಳೆಯ ಸಾಮಾನ್ಯ ಗ್ರಾಹಕರಾಗಿದ್ದರು. ಸುಮಾರು 1 ತಿಂಗಳ ಹಿಂದೆ, ಕುಟುಂಬದವರ ನಡುವೆ ಕೆಲವು ಸಮಸ್ಯೆಗಳಿಂದಾಗಿ ಗುಪ್ತಾ ಅವರ ಅಂಗಡಿಯಿಂದ ಆಹಾರ ಪದಾರ್ಥಗಳನ್ನು ಖರೀದಿಸುವುದನ್ನು ನಿಲ್ಲಿಸಿದರು. ಇದು ಅವರನ್ನು ಕೆರಳಿಸಿತು.

ಇದನ್ನೂ ಓದಿ: Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅವರ ನಡುವೆ ಜಗಳ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಜಗಳದ ವೇಳೆ ಗುಪ್ತಾ ಮತ್ತು ಅವರ ಮಕ್ಕಳು ವಿಕ್ರಮ್ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಕುತ್ತಿಗೆಗೆ ಇರಿದಿದ್ದಾರೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us