AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

JNU ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು , ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ

ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಸಾಂಕೇತಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 03, 2022 | 10:01 PM

Share

ದೆಹಲಿ: ಜವಾಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯದ (JNU) ಆವರಣದಲ್ಲಿರುವ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ  ಮೃತದೇಹವೊಂದು ಪತ್ತೆಯಾಗಿದೆ. ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿ ಪೊಲೀಸರ ಅಪರಾಧ ಮತ್ತು ಫಾರೆನ್ಸಿಕ್ ತಂಡ ಸ್ಥಳಕ್ಕೆ ತಲುಪಿ ತಪಾಸಣೆ ನಡೆಸಿದೆ. ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಈ ವಿಷಯದ ಕುರಿತು ಮಾಹಿತಿ ನೀಡಿ ದೆಹಲಿ ಪೊಲೀಸರು ಇಂದು ಬೆಳಿಗ್ಗೆ 6:30 ರ ಸುಮಾರಿಗೆ ಪಿಸಿಆರ್ ಕರೆ ಬಂದಿದೆ. ಅದರಲ್ಲಿ “ಜೆಎನ್‌ಯು ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ” ಎಂದು ತಿಳಿಸಲಾಗಿದೆ. ಅದರಂತೆ ಎಸ್‌ಎಚ್‌ಒ ವಿಕೆ ನಾರ್ತ್ ನೇತೃತ್ವದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಂಡ ಪರಿಶೀಲನೆ ನಡೆಸಿದಾಗ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತೀರಾ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರ ವಯಸ್ಸು ಸುಮಾರು 40-45 ವರ್ಷಗಳಾಗಿರಬೇಕು ಎಂದು ಹೇಳಿರುವುದಾಗಿ  ಇಂಡಿಯಾ ಟಿವಿ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:51 pm, Fri, 3 June 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!