AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಬಾಲಕಿ ಮೇಲೆ ಆ್ಯಸಿಡ್ ಎರಚಿದ ಅತ್ಯಾಚಾರ ಪ್ರಕರಣ ಆರೋಪಿ; ಕೃತ್ಯವೆಸಗಿದ ನಂತರ ಆತ್ಮಹತ್ಯೆ

ಅತ್ಯಾಚಾರ ಪ್ರಕರಣದ ಆರೋಪಿ ಜಾಮೀನು ಪಡೆದು ಹೊರಗಿದ್ದ. ಆತ ಗುರುವಾರ ಸಂಜೆ, ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಗೆ ತನ್ನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ ಆ ವ್ಯಕ್ತಿ ಆಕೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿ ತಾನೂ ಕುಡಿದಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ದೆಹಲಿ: ಬಾಲಕಿ ಮೇಲೆ ಆ್ಯಸಿಡ್ ಎರಚಿದ ಅತ್ಯಾಚಾರ ಪ್ರಕರಣ ಆರೋಪಿ; ಕೃತ್ಯವೆಸಗಿದ ನಂತರ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 08, 2023 | 2:31 PM

Share

ದೆಹಲಿ ಡಿಸೆಂಬರ್  08: ಆತ ಅತ್ಯಾಚಾರ ಆರೋಪಿ(Rape accused), ಜಾಮೀನಿನ ಮೇಲೆ ಜೈಲಿನಿಂದ ಹೊರಬಂದು ದೂರುದಾರರ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ (Acid Attack)ದಾಳಿ ನಡೆಸಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯ ದೆಹಲಿಯಲ್ಲಿ (Delhi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಪ್ರೇಮ್ ಸಿಂಗ್ ಎಂಬಾತನಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು.

ಆತ ಗುರುವಾರ ಸಂಜೆ, ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಗೆ ತನ್ನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ ಆ ವ್ಯಕ್ತಿ ಆಕೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿ ತಾನೂ ಕುಡಿದಿದ್ದಾನೆ.

ಪ್ರೇಮ್ ಸಿಂಗ್ ಮತ್ತು ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಯ ತಾಯಿಗೆ ಬೆದರಿಕೆ ಹಾಕಿದಾಗ ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದ. ಆಕೆ ನಿರಾಕರಿಸಿದಾಗ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ವಕೀಲನ ಹತ್ಯೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು

ಆರೋಪಿ ಮತ್ತು ಹದಿಹರೆಯದ ಬಾಲಕಿಯನ್ನು ಕಾಲೋನಿಯಲ್ಲಿದ್ದ ಜನರು ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ವೇಳೆ ಪ್ರೇಮ್ ಸಿಂಗ್ ಮೃತಪಟ್ಟರೆ, ಚಿಕಿತ್ಸೆ ನಂತರ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು  ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Fri, 8 December 23

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ