AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಬಾಲಕಿ ಮೇಲೆ ಆ್ಯಸಿಡ್ ಎರಚಿದ ಅತ್ಯಾಚಾರ ಪ್ರಕರಣ ಆರೋಪಿ; ಕೃತ್ಯವೆಸಗಿದ ನಂತರ ಆತ್ಮಹತ್ಯೆ

ಅತ್ಯಾಚಾರ ಪ್ರಕರಣದ ಆರೋಪಿ ಜಾಮೀನು ಪಡೆದು ಹೊರಗಿದ್ದ. ಆತ ಗುರುವಾರ ಸಂಜೆ, ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಗೆ ತನ್ನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ ಆ ವ್ಯಕ್ತಿ ಆಕೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿ ತಾನೂ ಕುಡಿದಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ದೆಹಲಿ: ಬಾಲಕಿ ಮೇಲೆ ಆ್ಯಸಿಡ್ ಎರಚಿದ ಅತ್ಯಾಚಾರ ಪ್ರಕರಣ ಆರೋಪಿ; ಕೃತ್ಯವೆಸಗಿದ ನಂತರ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Dec 08, 2023 | 2:31 PM

Share

ದೆಹಲಿ ಡಿಸೆಂಬರ್  08: ಆತ ಅತ್ಯಾಚಾರ ಆರೋಪಿ(Rape accused), ಜಾಮೀನಿನ ಮೇಲೆ ಜೈಲಿನಿಂದ ಹೊರಬಂದು ದೂರುದಾರರ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ (Acid Attack)ದಾಳಿ ನಡೆಸಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯ ದೆಹಲಿಯಲ್ಲಿ (Delhi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಪ್ರೇಮ್ ಸಿಂಗ್ ಎಂಬಾತನಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು.

ಆತ ಗುರುವಾರ ಸಂಜೆ, ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಗೆ ತನ್ನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ ಆ ವ್ಯಕ್ತಿ ಆಕೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿ ತಾನೂ ಕುಡಿದಿದ್ದಾನೆ.

ಪ್ರೇಮ್ ಸಿಂಗ್ ಮತ್ತು ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಯ ತಾಯಿಗೆ ಬೆದರಿಕೆ ಹಾಕಿದಾಗ ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದ. ಆಕೆ ನಿರಾಕರಿಸಿದಾಗ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ವಕೀಲನ ಹತ್ಯೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು

ಆರೋಪಿ ಮತ್ತು ಹದಿಹರೆಯದ ಬಾಲಕಿಯನ್ನು ಕಾಲೋನಿಯಲ್ಲಿದ್ದ ಜನರು ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ವೇಳೆ ಪ್ರೇಮ್ ಸಿಂಗ್ ಮೃತಪಟ್ಟರೆ, ಚಿಕಿತ್ಸೆ ನಂತರ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು  ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Fri, 8 December 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!