AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮತ್ತೆ ಬೆಚ್ಚಿಬಿದ್ದ ದೆಹಲಿ, ಡ್ರಗ್ಸ್ ಸೇವಿಸಿ ತನ್ನ ಮನೆಯ 4 ಮಂದಿಯನ್ನು ಕೊಂದ ಯುವಕ

ಮಾದಕ ವ್ಯಸನ ಸೇವನೆ ಮಾಡಿದ ಯುವಕನೊಬ್ಬ ತನ್ನ ಇಡೀ ಕುಟುಂಬವನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ದೆಹಲಿಯನ್ನು ಮತ್ತೆ ಬೆಚ್ಚಿಬೀಳಿಸಿದೆ. 25 ವರ್ಷದ ಕೇಶವ್ ತನ್ನ ಪೋಷಕರೊಂದಿಗೆ ಜಗಳ ಮಾಡಿದ ನಂತರ ತನ್ನ ಪೋಷಕರು, ಸಹೋದರಿ ಮತ್ತು ಅಜ್ಜಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

Crime News: ಮತ್ತೆ ಬೆಚ್ಚಿಬಿದ್ದ ದೆಹಲಿ, ಡ್ರಗ್ಸ್ ಸೇವಿಸಿ ತನ್ನ ಮನೆಯ 4 ಮಂದಿಯನ್ನು ಕೊಂದ ಯುವಕ
Crime
TV9 Web
| Edited By: |

Updated on:Nov 23, 2022 | 1:15 PM

Share

ದೆಹಲಿ: ಮಾದಕ ವ್ಯಸನ ಸೇವನೆ ಮಾಡಿದ ಯುವಕನೊಬ್ಬ ತನ್ನ ಇಡೀ ಕುಟುಂಬವನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ದೆಹಲಿಯನ್ನು ಮತ್ತೆ ಬೆಚ್ಚಿಬೀಳಿಸಿದೆ. 25 ವರ್ಷದ ಕೇಶವ್ ತನ್ನ ಪೋಷಕರೊಂದಿಗೆ ಜಗಳ ಮಾಡಿದ ನಂತರ ತನ್ನ ಪೋಷಕರು, ಸಹೋದರಿ ಮತ್ತು ಅಜ್ಜಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನೈಋತ್ಯ ದೆಹಲಿಯ ಪಾಲಮ್‌ನ ಮನೆಯಲ್ಲಿ ನಿನ್ನೆ ರಾತ್ರಿ ಮೃತದೇಹಗಳು ಪತ್ತೆಯಾಗಿದೆ, ಆರೋಪಿ ಕೇಶವ್​ನ್ನು ಬಂಧಿಸಲಾಗಿದೆ, ಮನೆ ಪೂರ್ತಿ ರಕ್ತದಿಂದ ಕೂಡಿತ್ತು. ಕೇಶವ್ ತೀಕ್ಷ್ಣವಾದ ವಸ್ತುವನ್ನು ಬಳಸಿ ಅವರ ಕತ್ತು ಸೀಳಿದ್ದಾನೆ ಮತ್ತು ಅನೇಕ ಬಾರಿ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಶವ್ ಅವರ ಅಜ್ಜಿ ದೀವಾನಾ ದೇವಿ (75), ತಂದೆ ದಿನೇಶ್ (50), ತಾಯಿ ದರ್ಶನಾ ಮತ್ತು ಸಹೋದರಿ ಊರ್ವಶಿ (18) ರಕ್ತಸಿಕ್ತ ಶವಗಳು ಪ್ರತ್ಯೇಕ ಕೊಠಡಿಗಳಲ್ಲಿ ಪತ್ತೆಯಾಗಿವೆ. ಆದರೆ ಆತ ಹೆತ್ತವರ ಶವಗಳು ಸ್ನಾನಗೃಹದಲ್ಲಿ ಮತ್ತು ಅವರ ಸಹೋದರಿ ಮತ್ತು ಅಜ್ಜಿಯ ಮೃತದೇಹಗಳು ಇತರ ಕೊಠಡಿಗಳಲ್ಲಿ ಕಂಡುಬಂದಿವೆ. ಪೊಲೀಸರು ತಿಳಿಸಿರುವಂತೆ ಇವರು ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇನ್ ಸ್ಟಾಗ್ರಾಂನಲ್ಲಿ ಖಾಸಗಿ ಫೋಟೋ ಹರಿಬಿಟ್ಟವರ ವಿರುದ್ಧ ನೊಂದ ಯುವತಿಯಿಂದ ದೂರು ದಾಖಲು

ಆರೋಪಿ ಕೇಶವ್ ಒಂದು ತಿಂಗಳ ಹಿಂದೆ ದೀಪಾವಳಿ ಸಮಯದಂದು ಗುರ್ಗಾಂವ್‌ನಲ್ಲಿ ಕೆಲಸ ಬಿಟ್ಟು ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡುವಾಗ ಆತ ಡ್ರಗ್ಸ್ ನ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ

ರಾತ್ರಿ 10.30ರ ಸುಮಾರಿಗೆ ಮನೆಯಿಂದ ಕಿರುಚಾಟ ಕೇಳಿ ಬಂದಿದೆ ಎಂದು ಅದೇ ಕಟ್ಟಡದಲ್ಲಿದ್ದ ನೆರೆಹೊರೆಯವರು ಹಾಗೂ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ಕೇಶವ್ ಕೊಲೆ ಮಾಡಿದ ನಂತರ ಪರಾರಿಯಾಗಲು ಯೋಜನೆ ರೂಪಿಸಿದ್ದು, ಸಂಬಂಧಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದೆಹಲಿಯ ಶ್ರದ್ಧಾ ವಾಕರ್ ಅವರನ್ನು ಆಕೆಯ ಸಂಗಾತಿ ಆಫ್ತಾಬ್ ಪೂನಾವಾಲಾ ಆಘಾತಕಾರಿ ಕೊಂದ ಸುದ್ದಿ ಹೊರಬಿದ್ದ ಒಂದು ವಾರದ ನಂತರ ಈ ಕೊಲೆಗಳು ನಡೆದಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Wed, 23 November 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ