AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪ್ರೀತಿಸಿದ ವ್ಯಕ್ತಿಯೊಂದಿಗೆ ಮದುವೆಯಾಗಲು ಅಡ್ಡಿಯಾದ 5 ವರ್ಷದ ಮಗಳನ್ನೇ ಕೊಂದ ತಾಯಿ!

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾನು ಪ್ರೀತಿಸುತ್ತಿದ್ದ ಪುರುಷ ತನ್ನ ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಎಂಬ ಕಾರಣಕ್ಕೆ ತಾಯಿಯೊಬ್ಬಳು ಆತನನ್ನು ಮದುವೆಯಾಗುವ ಸಲುವಾಗಿ ತನ್ನ 5 ​​ವರ್ಷದ ಮಗಳ ಕತ್ತು ಹಿಸುಕಿ ಕೊಂದಿದ್ದಾಳೆ. ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

Shocking News: ಪ್ರೀತಿಸಿದ ವ್ಯಕ್ತಿಯೊಂದಿಗೆ ಮದುವೆಯಾಗಲು ಅಡ್ಡಿಯಾದ 5 ವರ್ಷದ ಮಗಳನ್ನೇ ಕೊಂದ ತಾಯಿ!
ಮಗು
ಸುಷ್ಮಾ ಚಕ್ರೆ
|

Updated on: Nov 23, 2024 | 9:11 PM

Share

ನವದೆಹಲಿ: ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದ ವ್ಯಕ್ತಿಯನ್ನು ಆಕೆ ಮದುವೆಯಾಗಲು ಬಯಸಿದ್ದಳು. ಆದರೆ, ಆತ ಆಕೆಯ ಮಗಳನ್ನು ಸ್ವೀಕರಿಸಲು ಸಿದ್ಧನಿರಲಿಲ್ಲ. ಹೀಗಾಗಿ, ಆತನ ಜೊತೆ ಹೋಗುವ ಸಲುವಾಗಿ ಆಕೆ ಹೆತ್ತ ಮಗಳನ್ನೇ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪ್ ಚಂದ್ ಬಂಧು ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋದಾಗ ಮಗು ಸತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಶವದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ಮಗುವಿನ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿವೆ.

ಇದನ್ನೂ ಓದಿ: ನಿಜ್ಜರ್​ ಹತ್ಯೆಯಲ್ಲಿ ಮೋದಿ, ದೋವಲ್ ಕೈವಾಡ ಆರೋಪ: ವರದಿಯಲ್ಲಿ ಹುರುಳಿಲ್ಲವೆಂದ ಕೆನಡಾ

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಮತ್ತು ಮಗುವಿನ ತಾಯಿ ಮತ್ತು ಇತರ ಸಂಬಂಧಿಕರನ್ನು ವಿಚಾರಣೆಗಾಗಿ ಕರೆಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ತೀವ್ರ ವಿಚಾರಣೆಯ ಸಮಯದಲ್ಲಿ ತಾಯಿ ತನ್ನ ಸ್ವಂತ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ

ಆಕೆಯ ಮೊದಲ ಪತಿ ಅವಳನ್ನು ತೊರೆದ ನಂತರ, ಮಹಿಳೆ ಇನ್​ಸ್ಟಾಗ್ರಾಂನಲ್ಲಿ ರಾಹುಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಿ ಸ್ನೇಹ ಬೆಳೆಸಿದ್ದಳು. ಇದರ ನಂತರ, ಮಹಿಳೆ ತನ್ನ ಇನ್​ಸ್ಟಾಗ್ರಾಂ ಸ್ನೇಹಿತನನ್ನು ಮದುವೆಯಾಗಲು ದೆಹಲಿಗೆ ತೆರಳಲು ನಿರ್ಧರಿಸಿದಳು. ಆದರೆ ಆ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮಗುವನ್ನು ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಹತಾಶಳಾದ ಮಹಿಳೆ ತನ್ನ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ