AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪ್ರೀತಿಸಿದ ವ್ಯಕ್ತಿಯೊಂದಿಗೆ ಮದುವೆಯಾಗಲು ಅಡ್ಡಿಯಾದ 5 ವರ್ಷದ ಮಗಳನ್ನೇ ಕೊಂದ ತಾಯಿ!

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾನು ಪ್ರೀತಿಸುತ್ತಿದ್ದ ಪುರುಷ ತನ್ನ ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಎಂಬ ಕಾರಣಕ್ಕೆ ತಾಯಿಯೊಬ್ಬಳು ಆತನನ್ನು ಮದುವೆಯಾಗುವ ಸಲುವಾಗಿ ತನ್ನ 5 ​​ವರ್ಷದ ಮಗಳ ಕತ್ತು ಹಿಸುಕಿ ಕೊಂದಿದ್ದಾಳೆ. ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

Shocking News: ಪ್ರೀತಿಸಿದ ವ್ಯಕ್ತಿಯೊಂದಿಗೆ ಮದುವೆಯಾಗಲು ಅಡ್ಡಿಯಾದ 5 ವರ್ಷದ ಮಗಳನ್ನೇ ಕೊಂದ ತಾಯಿ!
ಮಗು
ಸುಷ್ಮಾ ಚಕ್ರೆ
|

Updated on: Nov 23, 2024 | 9:11 PM

Share

ನವದೆಹಲಿ: ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದ ವ್ಯಕ್ತಿಯನ್ನು ಆಕೆ ಮದುವೆಯಾಗಲು ಬಯಸಿದ್ದಳು. ಆದರೆ, ಆತ ಆಕೆಯ ಮಗಳನ್ನು ಸ್ವೀಕರಿಸಲು ಸಿದ್ಧನಿರಲಿಲ್ಲ. ಹೀಗಾಗಿ, ಆತನ ಜೊತೆ ಹೋಗುವ ಸಲುವಾಗಿ ಆಕೆ ಹೆತ್ತ ಮಗಳನ್ನೇ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪ್ ಚಂದ್ ಬಂಧು ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋದಾಗ ಮಗು ಸತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಶವದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ಮಗುವಿನ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿವೆ.

ಇದನ್ನೂ ಓದಿ: ನಿಜ್ಜರ್​ ಹತ್ಯೆಯಲ್ಲಿ ಮೋದಿ, ದೋವಲ್ ಕೈವಾಡ ಆರೋಪ: ವರದಿಯಲ್ಲಿ ಹುರುಳಿಲ್ಲವೆಂದ ಕೆನಡಾ

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಮತ್ತು ಮಗುವಿನ ತಾಯಿ ಮತ್ತು ಇತರ ಸಂಬಂಧಿಕರನ್ನು ವಿಚಾರಣೆಗಾಗಿ ಕರೆಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ತೀವ್ರ ವಿಚಾರಣೆಯ ಸಮಯದಲ್ಲಿ ತಾಯಿ ತನ್ನ ಸ್ವಂತ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ

ಆಕೆಯ ಮೊದಲ ಪತಿ ಅವಳನ್ನು ತೊರೆದ ನಂತರ, ಮಹಿಳೆ ಇನ್​ಸ್ಟಾಗ್ರಾಂನಲ್ಲಿ ರಾಹುಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಿ ಸ್ನೇಹ ಬೆಳೆಸಿದ್ದಳು. ಇದರ ನಂತರ, ಮಹಿಳೆ ತನ್ನ ಇನ್​ಸ್ಟಾಗ್ರಾಂ ಸ್ನೇಹಿತನನ್ನು ಮದುವೆಯಾಗಲು ದೆಹಲಿಗೆ ತೆರಳಲು ನಿರ್ಧರಿಸಿದಳು. ಆದರೆ ಆ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮಗುವನ್ನು ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಹತಾಶಳಾದ ಮಹಿಳೆ ತನ್ನ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ