AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿದ್ದ ಬಾಲಕನಿಂದ ಗುಪ್ತಾಂಗ ಮುಟ್ಟಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡ ಅರ್ಚಕ

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಅರ್ಚಕರೊಬ್ಬರು ಆ ದೇವಸ್ಥಾನದಲ್ಲಿ ಕೆಲಸಕ್ಕೆ ಬರುತ್ತಿದ್ದ ಬಾಲಕನ ಬಳಿ ತನ್ನ ಖಾಸಗಿ ಅಂಗಗಳನ್ನು ಮುಟ್ಟುವಂತೆ ಒತ್ತಾಯಿಸಿ, ಲೈಂಗಿಕವಾಗಿ ಬಳಸಿಕೊಂಡ ಘಟನೆ ನಡೆದಿದೆ. ಆ ಅರ್ಚಕನಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ದೇವಸ್ಥಾನದಲ್ಲಿದ್ದ ಬಾಲಕನಿಂದ ಗುಪ್ತಾಂಗ ಮುಟ್ಟಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡ ಅರ್ಚಕ
ಕಿರುಕುಳ
ಸುಷ್ಮಾ ಚಕ್ರೆ
|

Updated on: Aug 09, 2024 | 8:57 PM

Share

ನವದೆಹಲಿ: ದೆಹಲಿಯಲ್ಲಿ ಬಾಲಕನೊಬ್ಬ ಸ್ವಯಂಪ್ರೇರಣೆಯಿಂದ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿದ್ದ. ಆ ದೇವಾಲಯದ ಅರ್ಚಕ ಆತನ ಬಳಿ ತನ್ನ ಖಾಸಗಿ ಅಂಗಗಳನ್ನು ಮುಟ್ಟುವಂತೆ ಬಲವಂತಪಡಿಸಿದ್ದಾನೆ. ಬಾಲಕನನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ನ್ಯಾಯಾಲಯ ಆ ಆರೋಪಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ 2016ರಲ್ಲಿ ಈ ಘಟನೆ ನಡೆದಿದೆ. ಬಾಲಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಕ್ಕೆ ಅವರಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೇವಸ್ಥಾನದಲ್ಲಿ ಸಾಮಾನ್ಯ ಸ್ವಯಂಸೇವಕನಾಗಿ ಕೆಲಸ ಮಾಡುತ್ತಿದ್ದ 15 ವರ್ಷದ ಯುವಕನನ್ನು ಅರ್ಚಕ ಲೈಂಗಿಕವಾಗಿ ಶೋಷಿಸಿದ ಕಾರಣ ಅಪರಾಧದ ಗಂಭೀರತೆ ಉಲ್ಬಣಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Crime News: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ಶವ ತುಂಬಿ ರೈಲಿನಲ್ಲಿ ಸಾಗಿಸಿದ ಹಂತಕರು

ಸುಮಾರು ಎರಡು ತಿಂಗಳ ಕಾಲ ಅರ್ಚಕನಿಂದ ಆ ಬಾಲಕನಿಗೆ ದೈಹಿಕ ಕಿರುಕುಳ ಮುಂದುವರೆದಿತ್ತು. ನಂತರ ಆ ಬಾಲಕ ಪೊಲೀಸರನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸಿದ್ದಾನೆ. ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಅಪರಾಧಿಗೆ 43 ವರ್ಷ ವಯಸ್ಸಾಗಿತ್ತು. ಆ ಬಾಲಕನಿಗೆ 15 ವರ್ಷ ವಯಸ್ಸಾಗಿತ್ತು. ಇದಲ್ಲದೆ, ಅಪರಾಧಿ ದೇವಾಲಯದ ಅರ್ಚಕನಾಗಿದ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದೇವಾಲಯದಲ್ಲಿ ಸಾಮಾನ್ಯ ಸ್ವಯಂಸೇವಕನಾಗಿದ್ದ ಅಪ್ರಾಪ್ತ ಬಾಲಕನನ್ನು ಶೋಷಣೆ ಮಾಡುವುದು ಅಪರಾಧದ ತೀವ್ರತೆಯನ್ನು ಹೆಚ್ಚಿಸುತ್ತದೆ ಎಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ