AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಬೋನಸ್​ ಕೊಡೋದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನ ಕೊಂದು ಕಾರಿನೊಂದಿಗೆ ಪರಾರಿಯಾದ ನೌಕರರು

ದೀಪಾವಳಿ ಬೋನಸ್​ ಕೊಡುವುದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನನ್ನು ಇಬ್ಬರು ಕೆಲಸಗಾರರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹತ್ಯೆ ಮಾಡಿ ಬಳಿಕ ಮಾಲೀಕರ ಕಾರು ಕದ್ದು ಪರಾರಿಯಾಗಿದ್ದಾರೆ. ನಾಗಪುರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ಕುಹಿ ಫಾಟಾ ಬಳಿಯ ಢಾಬಾದಲ್ಲಿ ದೀಪಾವಳಿ ಬೋನಸ್‌ಗಾಗಿ ಕಾರ್ಮಿಕರು ಬೇಡಿಕೆ ಇಟ್ಟಿದ್ದರು, ಆದರೆ ಮಾಲೀಕ ಅದನ್ನು ನಿರಾಕರಿಸಿದ್ದರು, ಕೋಪಗೊಂಡ ಇಬ್ಬರು ಕೆಲಸಗಾರರು ಮಾಲೀಕನನ್ನು ಕತ್ತುಹಿಸುಕಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ದೀಪಾವಳಿ ಬೋನಸ್​ ಕೊಡೋದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನ ಕೊಂದು ಕಾರಿನೊಂದಿಗೆ ಪರಾರಿಯಾದ ನೌಕರರು
ಅಪರಾಧImage Credit source: Namaste Talangana
ನಯನಾ ರಾಜೀವ್
|

Updated on: Nov 12, 2023 | 3:05 PM

Share

ದೀಪಾವಳಿ ಬೋನಸ್​ ಕೊಡುವುದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನನ್ನು ಇಬ್ಬರು ಕೆಲಸಗಾರರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹತ್ಯೆ ಮಾಡಿ ಬಳಿಕ ಮಾಲೀಕರ ಕಾರು ಕದ್ದು ಪರಾರಿಯಾಗಿದ್ದಾರೆ. ನಾಗಪುರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ಕುಹಿ ಫಾಟಾ ಬಳಿಯ ಢಾಬಾದಲ್ಲಿ ದೀಪಾವಳಿ ಬೋನಸ್‌ಗಾಗಿ ಕಾರ್ಮಿಕರು ಬೇಡಿಕೆ ಇಟ್ಟಿದ್ದರು, ಆದರೆ ಮಾಲೀಕ ಅದನ್ನು ನಿರಾಕರಿಸಿದ್ದರು, ಕೋಪಗೊಂಡ ಇಬ್ಬರು ಕೆಲಸಗಾರರು ಮಾಲೀಕನನ್ನು ಕತ್ತುಹಿಸುಕಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಮಧ್ಯಪ್ರದೇಶದ ಮಾಂಡ್ಲಾ ಮೂಲದ ಛೋಟು ಮತ್ತು ಆದಿ ಇನ್ನೂ ತಲೆಮರೆಸಿಕೊಂಡಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮಧ್ಯಪ್ರದೇಶ ರಾಜ್ಯ ಬಸ್ ನಿಲ್ದಾಣದ ಬಳಿ ಕಾರ್ಮಿಕ ಗುತ್ತಿಗೆದಾರರ ಮೂಲಕ ಈ ಇಬ್ಬರು ಆರೋಪಿಗಳನ್ನು ಧೆಂಗ್ರೆ ಕೆಲಸಕ್ಕೆ ಸೇರಿಸಿಕೊಂಡಿದ್ದರು. ದೀಪಾವಳಿಗಾಗಿ ಬೋನಸ್​ ನೀಡುವಂತೆ ಕೇಳಿಕೊಂಡಿದ್ದರು, ಧೆಂಗ್ರೆ ಮತ್ತು ಛೋಟು ಒಟ್ಟಿಗೆ ಊಟ ಮಾಡುವಾಗ ಭಿನ್ನಾಭಿಪ್ರಾಯ ಮೂಡಿತ್ತು. ಆದರೆ ಧೆಂಗ್ರೆ ಅವರು ಮುಂದಿನ ದಿನಗಳಲ್ಲಿ ಪಾವತಿಸುವವರಿದ್ದರು.

ಊಟದ ನಂತರ ಧೆಂಗ್ರೆ ಮಂಚದ ಮೇಲೆ ಮಲಗಿದ್ದಾಗ ಆದಿ ಮತ್ತು ಛೋಟು ಹರಿತವಾದ ಆಯುಧದಿಂದ ತಿವಿದು, ಉಸಿರುಗಟ್ಟಿಸಿ ಧೆಂಗ್ರೆಯನ್ನು ಹತ್ಯೆ ಮಾಡಿದ್ದಾರೆ. ಧೆಂಗ್ರೆ, ಕುಹಿ ತಾಲೂಕಿನ ಸುರ್ಗಾಂವ್ ಗ್ರಾಮದ ಮಾಜಿ ಸರ್ಪಂಚ್ (ಗ್ರಾಮ ಮುಖ್ಯಸ್ಥ) ಮತ್ತು ಇತ್ತೀಚಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದಿದ್ದರು.

ಮತ್ತಷ್ಟು ಓದಿ: ಹೊಲಕ್ಕೆ ಹೋಗಿದ್ದ ವೃದ್ದೆಯ ಕೊಲೆ; ಆರೋಪಿ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?

ಪ್ರಾಥಮಿಕವಾಗಿ ಕೊಲೆಯ ಹಿಂದಿನ ಕಾರಣ ಹಣದ ಸಮಸ್ಯೆ ಎಂದು ತೋರುತ್ತದೆ ಆದರೆ ರಾಜಕೀಯ ಪೈಪೋಟಿಯ ಕೋನವನ್ನು ಸಹ ಪರಿಶೋಧಿಸಲಾಗುತ್ತಿದೆ ಎಂದು ಎಸ್ಪಿ ಹರ್ಷ್ ಎ ಪೊದ್ದಾರ್ ಹೇಳಿದ್ದಾರೆ.

ಪ್ರಕರಣವನ್ನು ವಿವಿಧ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಧೆಂಗ್ರೆ ಉತ್ತಮ ರಾಜಕೀಯ ಸಂಪರ್ಕಗಳೊಂದಿಗೆ ಉತ್ತಮ ಖ್ಯಾತಿಯನ್ನು ಹೊಂದಿದ್ದರು ಮತ್ತು ಬಿಜೆಪಿಯಿಂದ ಬೆಂಬಲಿತರಾಗಿದ್ದರು.

ಆರೋಪಿಗಳಾದ ಛೋಟು ಮತ್ತು ಆದಿ ಅವರು ತಮ್ಮ ಕಾರಿನೊಂದಿಗೆ ಪರಾರಿಯಾಗುವ ಮೊದಲು ಧೆಂಗ್ರೆ ಅವರ ದೇಹವನ್ನು ಗಾದಿಯಿಂದ ಮುಚ್ಚಿದರು ಆದರೆ ವಿಹಿರ್‌ಗಾಂವ್ ಬಳಿಯ ನಾಗ್ಪುರ-ಉಮ್ರೆಡ್ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದರು.

ಪಂಚಗಾಂವ್‌ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಕಾರಿನಿಂದ ಇಬ್ಬರು ದುಷ್ಕರ್ಮಿಗಳು ಹೊರಬಂದು ದಿಘೋರಿ ನಾಕಾ ಕಡೆಗೆ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.ದಿಘೋರಿಯಿಂದ ಇ-ರಿಕ್ಷಾವನ್ನು ಹತ್ತಿದ್ದರು ಆದರೆ ನಂತರ ಎಲ್ಲಿ ಹೋದರು ಎಂಬುದು ಯಾರಿಗೂ ಗೊತ್ತಾಗಿಲ್ಲ.

ಮತ್ತೊಂದೆಡೆ, ಧೆಂಗ್ರೆ ಅವರ ಮಗಳು ಫೋನ್ ಮೂಲಕ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಪದೇ ಪದೇ ವಿಫಲವಾದ ನಂತರ, ಅವರು ಢಾಬಾದ ಸುತ್ತಮುತ್ತಲಿನ ಪ್ಯಾನ್ ಕಿಯೋಸ್ಕ್ ಮಾಲೀಕರಿಗೆ ಡಯಲ್ ಮಾಡಿದ್ದರು, ಬಳಿಕ ಢಾಬಾಗೆ ಹೋಗಿ ನೋಡಿದಾಗ ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!