ಪರೀಕ್ಷೆಯಲ್ಲಿ ಫೇಲ್; ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನಲೆ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೋರ್ವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಯ್ಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದಲ್ಲಿ ನಡೆದಿದೆ.
![ಪರೀಕ್ಷೆಯಲ್ಲಿ ಫೇಲ್; ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು](https://images.tv9kannada.com/wp-content/uploads/2023/07/bengaluru-student-suicide.jpg?w=1280)
ಬೆಂಗಳೂರು: ಕಾಲೇಜು ವಿದ್ಯಾರ್ಥಿ(College Student) ಯೋರ್ವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಯ್ಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದಲ್ಲಿ ನಡೆದಿದೆ. ಚಾರ್ಲ್ಸ್(18) ಮೃತ ವಿದ್ಯಾರ್ಥಿ. ಚಾರ್ಲ್ಸ್ ಆರು ತಿಂಗಳ ಹಿಂದೆ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದ. ನಂತರ ಮರು ಪರೀಕ್ಷೆ ಕಟ್ಟಿ ಎಕ್ಸಾಂ ಬರೆದಿದ್ದ ಚಾರ್ಲ್ಸ್, ಅದರಲ್ಲೂ ಫೇಲ್ಯಾಗಿದ್ದ. ಈ ವೇಳೆ ಕಾಲೇಜಿನವರು ಮೃತ ಬಾಲಕನ ಫೋಷಕರಿಗೆ ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದರು.
ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ
ಮೊದಲ ಬಾರಿ ಫೇಲಾಗಿದ್ದಾಗಿನಿಂದಲೂ ಮನನೊಂದಿದ್ದ ಚಾರ್ಲ್ಸ್, ಪುನಃ ಅನುತ್ತೀರ್ಣವಾದ ಹಿನ್ನಲೆ ಖಿನ್ನತೆಗೆ ಒಳಗಾಗಿ, ಸಾಯಲು ನಿರ್ಧಾರ ಮಾಡಿದ್ದ. ಅದರಂತೆ ನಿನ್ನೆ(ಜು.5) ರಾತ್ರಿ 9:30 ರ ಸುಮಾರಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಚಾರ್ಲ್ಸ್ ಮೃತದೇಹವನ್ನು ಸಿವಿ ರಾಮನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಂತಿದ್ದ ಕಾರಿಗೆ ಆಟೋ ಡಿಕ್ಕಿಯಾಗಿ ಚಾಲಕ ದುರ್ಮರಣ
ಬೆಂಗಳೂರು: ನಿಂತಿದ್ದ ಕಾರಿಗೆ ಆಟೋ ಡಿಕ್ಕಿ ಹೊಡೆದಿದ್ದು, ಗುದ್ದಿರುವ ರಭಸಕ್ಕೆ ಆಟೋ ಚಾಲಕ ರಂಗನಾಥ(40) ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಿನ್ನೆ(ಜು.5) ರಾತ್ರಿ ನಡೆದಿದೆ. ಕೆಎ 01-AH 7625 ನಂಬರಿನ ಆಟೋ ಓಡಿಸುತ್ತಿದ್ದ ಮೃತ ರಂಗನಾಥ, ನಿಯಂತ್ರಣ ತಪ್ಪಿ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದ್ದ. ಈ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ