ಸಾವರ್ಕರ್ ವಿಚಾರದಲ್ಲಿ ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಸ್​ಡಿಪಿಐ ಮುಖಂಡ ಅರೆಸ್ಟ್

| Updated By: Rakesh Nayak Manchi

Updated on: Dec 12, 2023 | 10:06 PM

ಸುವರ್ಣ ವಿಧಾನಸೌಧದಲ್ಲಿರುವ ವೀರ ಸಾವರ್ಕರ್ ಫೋಟೋ ತೆರವು ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದ ಸ್ಪೀಕರ್ ಯುಟಿ ಖಾದರ್, ನನ್ನ ಕೆಲಸ ಜೋಡಿಸುವುದು, ಕಿತ್ತು ಬಿಸಾಕುವುದಲ್ಲ ಎಂದಿದ್ದರು. ಈ ವಿಚಾರವಾಗಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕಾರಿಯಾಗಿ ಪೋಸ್ಟ್ ಮಾಡಿದ್ದ ಎಸ್​​ಡಿಪಿಐ ಮುಖಂಡನನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಸಾವರ್ಕರ್ ವಿಚಾರದಲ್ಲಿ ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಸ್​ಡಿಪಿಐ ಮುಖಂಡ ಅರೆಸ್ಟ್
ಸ್ಪೀಕರ್ ಯುಟಿ ಖಾದರ್
Follow us on

ಮಂಗಳೂರು, ಡಿ.12: ಬೆಳಗಾವಿ ಸುವರ್ಣ ಸೌಧದಲ್ಲಿರುವ ವೀರ ಸಾವರ್ಕರ್ (Veer Savarkar) ಫೋಟೋ ತೆರವು ವಿಚಾರವಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ (UT Khader) ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಎಸ್​​ಡಿಪಿಐ ಮುಖಂಡನನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ರಿಯಾಜ್ ಕಡಂಬು ಬಂಧಿತ ಆರೋಪಿಯಾಗಿದ್ದಾನೆ. ಸುವರ್ಣ ಸೌಧದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿದ್ದ ವೀರ ಸಾವರ್ಕರ್ ಫೋಟೋ ತೆರವು ಮಾಡುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದ ಸ್ಪೀಕರ್ ಯುಟಿ ಖಾದರ್, ನನ್ನ ಕೆಲಸ ಜೋಡಿಸುವುದು, ಕಿತ್ತು ಬಿಸಾಕುವುದಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದಕ್ಕೆ ವಿರುದ್ಧವಾಗಿ ಫೇಸ್ ಬುಕ್​​ನಲ್ಲಿ ಖಾದರ್ ವಿರುದ್ಧ ರಿಯಾಜ್ ಪೋಸ್ಟ್ ಹಾಕಿದ್ದನು. “ಇಷ್ಟೇ… ಅದ್ಯಾವ ಪರಿಸರ ಹೇಳಿ, ಚಪ್ಪಲಿ ನೆಕ್ಕಿ ಸಾವರ್ಕರ್​ನ ಫೋಟೋವನ್ನು ಇಟ್ಟು ಜೋಡಿಸುತ್ತಿದ್ದ ಪರಿಸರ. ಈ ವ್ಯಕ್ತಿಯಿಂದ ಆರ್​ಎಸ್​ಎಸ್​ ವಿರುದ್ಧ ನಿಲ್ಲಲು ಈ ಆಯಸ್ಸು ಪೂರ್ತಿ ಅಧಿಕಾರದಲ್ಲಿದ್ದರೂ ಸಾಧ್ಯವಿಲ್ಲ” ಎಂದು ಬರೆದಿದ್ದನು.

ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ: ಸ್ಪೀಕರ್ ಯುಟಿ ಖಾದರ್​ ನಿಲುವಿಗೆ ಪ್ರಲ್ಹಾದ್​ ಜೋಶಿ ಅಭಿನಂದನೆ

ಅಲ್ಲದೆ, “ಚುನಾವಣೆಯಲ್ಲಿ ಕೇಳ್ತಿದ್ರಲ್ಲಾ ಎಸ್​ಡಿಪಿಐ ಯಾಕೆ ಒಬ್ಬ ಮುಸ್ಲಿಂ ಶಾಸಕನ ವಿರುದ್ಧ ಸ್ಪರ್ಧೆ ಮಾಡುವುದು ಅಂತ. ನೋಡಿ ಉತ್ತರ ಸ್ಪಷ್ಟವಿದೆ. ದೇಶದ್ರೋಹಿ, ಸಂವಿಧಾನ ವಿರೋಧಿ, ಜಾತ್ಯತೀತ ವಿರೋಧಿ, ಕೋಮುವಾದಿ RSS ಜೊತೆ ಹೊಂದಾಣಿಕೆ ಮಾಡಿಕೊಂಡು ಈ ರೀತಿ ಜೋಡಿಸಲು ಹೊರಟಿರುವುದಕ್ಕೆ ಎಂದಿದ್ದಾನೆ.

“ಎಂದಾದರೂ ಒಂದು ದಿನ SDPI ಅದೊರಳಗೆ ಲಗ್ಗೆ ಇಟ್ಟರೆ, ಕಿತ್ತು ಬಿಸಾಕಿಯೇ ಬಿಸಾಕಲು ಸದನದಲ್ಲಿ ಹೋರಾಟ ಮಾಡಿಯೇ ಮಾಡುತ್ತೇವೆ. ಅದ್ಯಾವ ವ್ಯಕ್ತಿ ಸಭಾಧ್ಯಕ್ಷ ಆಗಿದ್ದರೂ ಕೂಡ. ಈ ಸಭಾಧ್ಯಕ್ಷರಿಗೆ ಚಾಲೆಂಜ್, ಕಿತ್ತು ಬಿಸಾಕಿ, ಟಿಪ್ಪು ಭಾವಚಿತ್ರ ಧಮ್ಮಿದ್ದರೆ ಅಳವಡಿಸಿ” ಎಂದು ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದನು. ಸದ್ಯ ಮಂಗಳೂರಿನ ಉರ್ವ ಠಾಣೆಯಲ್ಲಿ ಆರೋಪಿ ರಿಯಾಜ್​ನನ್ನು ವಿಚಾರಣೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ