AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್: ತಂದೆ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಮಗ!

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ವಿಭಾಗದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2ಲಕ್ಷ ಮೌಲ್ಯದ ಮಾದಕವಸ್ತುವನ್ನು ವಶಕ್ಕೆ ಪಡೆಯಲಾಗಿದೆ.

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್: ತಂದೆ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಮಗ!
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:May 20, 2022 | 1:07 PM

Share

ಬೆಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್(Drugs) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ(CCB) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಮಾದಕ ವ್ಯಸನಗಳನ್ನು ಮಾರಾಟ ಮಾಡುವ ಜಾಲ ಬೆಳೆಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು, ನೌಕರರು, ಶ್ರೀಮಂತರನ್ನೇ ಟಾರ್ಗಟ್ ಮಾಡಿ ಡ್ರಗ್ಸ್ ಸಪ್ಲೈ ಮಾಡಲಾಗುತ್ತಿದೆ. ಅದರಂತೆ, ನಗರ ಪೊಲೀಸ್ ಇಲಾಖೆ ಡ್ರಗ್ ಜಾಲವನ್ನ ಮಟ್ಟಹಾಕಲು ಪಣತೊಟ್ಟಿದೆ. ನಗರದ ಜೀವನ್ ಭೀಮಾನಗರದ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಡ್ರಗ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಬಂಧಿತ ಆರೋಪಿಗಳಾದ ಸುಜಿತ್ ಕುಮಾರ್ ಹಾಗು ಪಿಯೂಷ್ ಕುಮಾರ್ ಎಂಬವರಿಂದ 2 ಲಕ್ಷ ರೂ. ಮೌಲ್ಯದ 1 ಕೆ.ಜಿ. 100 ಗ್ರಾಂ MDMA ಅನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಜೀವನ್ ಭಿಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಂದೆಯನ್ನು ಹಲ್ಲೆಗೈದು ಆತ್ಮಹತ್ಯೆ ಮಾಡಿಕೊಂಡ ಪುತ್ರ

ತುಮಕೂರು: ತನ್ನನ್ನು ಹುಟ್ಟಿಸಿದ ತಂದೆ ಮೇಲೆಯೇ ಪುತ್ರನೊಬ್ಬ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ತಾಲೂಕಿನ ಲಿಂಗನಹಳ್ಳಿಯಲ್ಲಿ ನಡೆದಿದೆ. ತಂದೆಯ ಜೊತೆ ಪುತ್ರ ಗೋವಿಂದ (28) ಜಗಳಕ್ಕೆ ನಿಂತು ಹಲ್ಲೆ ನಡೆಸುತ್ತಿದ್ದ. ಇದನ್ನು ನೋಡಿದ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಕೋರಾ ಠಾನೆಯ ಇಬ್ಬರು ಇಬ್ಬಂದಿಗಳು (ಹೊಯ್ಸಳ ವಾಹನದ ಸಿಬ್ಬಂದಿ) ಹಲ್ಲೆಯನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಗೋವಿಂದ ಪೊಲೀಸರನ್ನು ಕಂಡ ಮನೆಯೊಳಗೆ ಓಡಿಹೋಗಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಪೋಷಕರು ನೀಡುತ್ತಿದ್ದ ಪಾಕೆಟ್​ ಮನಿಯಿಂದ ಡ್ರಗ್ಸ್ ದಂಧೆ: ಕೇರಳ ಮೂಲದ ಆರು ವಿದ್ಯಾರ್ಥಿಗಳ ಬಂಧನ

ಈ ವೇಳೆ ಕಿಟಕಿಯಿಂದ ನೋಡಿದ ಹೊಯ್ಸಳ ವಾಹನದ ಸಿಬ್ಬಂದಿಗಳಾದ ಗುಣಗಾನಪ್ಪ ಮತ್ತು ಗವಿರಂಗಯ್ಯ ಎಂಬವರ ಮುಖ ಹಾಗೂ ಕೈಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ತಂದೆ ಮೇಲೆ ಹಲ್ಲೆ ನಡೆಸಿದ ಗೋವಿಂದ ಸಾವನ್ನಪ್ಪಿದ್ದು, ಗಾಯಗೊಂಡ ಹೊಯ್ಸಳ ವಾಹನದ ಸಿಬ್ಬಂದಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಖ್ಯಾತ ಖದೀಮ ಅನ್ಸರ್ ಅರೆಸ್ಟ್

ಬೆಂಗಳೂರು: ಮನೆಗಳಿಗೆ ಕಣ್ಣ ಹಾಕುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ನಗರದ ಬ್ಯಾಟರಾಯನಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅನ್ಸರ್ ಪಾಷಾ ಬಂಧಿತ ಆರೋಪಿಯಾಗಿದ್ದು, ಈತನಿಂದ 29 ಲಕ್ಷ ಮೌಲ್ಯದ 583 ಗ್ರಾಂ ಚಿನ್ನದ ಆಭರಣ ವಶಕ್ಕೆ ಪಡೆಯಲಾಗಿದೆ. ಹಲವರ ಮನೆಗಳಿಗೆ ನುಗ್ಗಿದ್ದ ಖದೀಮ ಅನ್ಸರ್ ಪಾಷಾ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ. ಸದ್ಯ ಈತನ ಬಂಧನದಿಂದ ಹಲವು ಪ್ರಕರಣಗಳು ಬೆಳಕಿಗೆ ಬರಲಿದ್ದು, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 1:07 pm, Fri, 20 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ