AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಗ್ರಾಮ ಪಂಚಾಯತ್ ಎಲೆಕ್ಷನ್ ದ್ವೇಷ; ಕಾಲು ಕತ್ತರಿಸಿ ವ್ಯಕ್ತಿಯ ಭೀಕರ ಕೊಲೆ!

ಬಿಸಿಲುನಾಡು ರಾಯಚೂರಿನಲ್ಲಿ ವ್ಯಕ್ತಿಯ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಲ್ಲಿ ರಕ್ಕಸರು ಬರೀ ಕೊಚ್ಚಿ ಕೊಲೆ ಮಾಡಿಲ್ಲ. ಬದಲಾಗಿ ಅದಕ್ಕೂ ಮೊದಲು ಬೈಕ್​ನಲ್ಲಿ ಹೋಗುತ್ತಿದ್ದವನಿಗೆ ಟ್ರಾಕ್ಟರ್​ನಿಂದ ಗುದ್ದಿಸಿ, ನೆಲಕ್ಕೆ ಬಿದ್ದ ಮೇಲೆ ಬರೋಬ್ಬರಿ ಒಂಬತ್ತು ಜನ ಸೇರಿ ಹತ್ಯೆ ಮಾಡಿದ್ದಾರೆ ಎನ್ನುವುದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.ಅಷ್ಟಕ್ಕು ಅಲ್ಲಿ ಹತ್ಯೆಗೆ ಕಾರಣವೇನು ಅಂತೀರಾ? ಇಲ್ಲಿದೆ.

ರಾಯಚೂರು: ಗ್ರಾಮ ಪಂಚಾಯತ್ ಎಲೆಕ್ಷನ್ ದ್ವೇಷ; ಕಾಲು ಕತ್ತರಿಸಿ ವ್ಯಕ್ತಿಯ ಭೀಕರ ಕೊಲೆ!
ಮೃತ ವ್ಯಕ್ತಿ
ಭೀಮೇಶ್​​ ಪೂಜಾರ್
| Edited By: |

Updated on: Dec 29, 2023 | 5:20 PM

Share

ರಾಯಚೂರು, ಡಿ.29: ಜಿಲ್ಲೆಯ ದೇವದುರ್ಗ(Devadurga) ತಾಲ್ಲೂಕಿನ ನಿಲವಂಜಿ ಬಳಿ ನಿನ್ನೆ(ಡಿ.28) ರಣಭೀಕರ ಘಟನೆ ನಡೆದಿತ್ತು. ಇದೇ ನಿಲವಂಜಿ ಗ್ರಾಮದ ಮಾರ್ಕಂಡಯ್ಯ ಅಲಿಯಾಸ್​ ಕಂಡೆಪ್ಪ ಎನ್ನುವ ವ್ಯಕ್ತಿಯನ್ನ ಬೀಕರವಾಗಿ ಕೊಲೆ ಮಾಡಲಾಗಿತ್ತು. ಕೂಡಲೇ ಸ್ಥಳೀಯರು ದೇವದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರಿಗೂ ಒಮ್ಮೆ ಜುಮ್​ ಅನ್ನಿಸಿತ್ತು. ‘ಬೈಕ್​ನಲ್ಲಿ ಮಾರ್ಕಂಡಯ್ಯ ತನ್ನ ಸಂಬಂಧಿ ಆದಪ್ಪ ಎಂಬಾತನನ್ನು ಕರೆದುಕೊಂಡು ನಿಲವಂಜಿ ಗ್ರಾಮದಿಂದ ದೇವದುರ್ಗ ಪಟ್ಟಣಕ್ಕೆ ಹೊರಟಿದ್ದ. ಈ ವೇಳೆ ಧುರುಳರು ಆತನ ಬರುವಿಕೆಗಾಗಿ ಕಾದು, ಬೈಕ್​ ಹಿಂಬಾಲಿಸಿ ಟ್ರಾಕ್ಟರ್​ನಿಂದ ಆತನ ಬೈಕ್​ಗೆ ಗುದ್ದಿ ನೆಲಕ್ಕೆ ಕೆಡವಿದ್ದಾರೆ. ಬಳಿಕ ಆತನ ರಸ್ತೆ ಪಕ್ಕದ ಹೊಲದಲ್ಲಿ ಬಿದ್ದ ಬಳಿಕ ಆತನ ಮೇಲೆ ಕೊಡಲಿ, ಮಚ್ಚು ಹಾಗೂ ಇತರೇ ಮಾರಕಾಸ್ತ್ರಗಳಿಂದ ಆತನನ್ನ ಮನಬಂದಂತೆ ಕೊಚ್ಚಿ ಕೊಂದಿದ್ದಾರೆ ಎನ್ನುವುದು ತನಿಖೆ ವೇಳೆ ಬಯಲಾಗಿದೆ.

ಹತ್ಯೆಗೆ ಗ್ರಾಮ ಪಂಚಾಯತಿ ಚುನಾವಣೆ ಕಾರಣನಾ?

ಇನ್ನು ಮಾರ್ಕಂಡಯ್ಯ ಹತ್ಯೆಗೆ ಸಂಬಂಧಿಸಿ ದಾಖಲಾಗಿರುವ ಒಂಬತ್ತು ಜನರ ಪೈಕಿ A-1 ಆರೋಪಿ ಹುಚ್ಚಪ್ಪ ಎನ್ನುವವನೇ ಇದಕ್ಕೆಲ್ಲ ಸೂತ್ರದಾರ ಎಂದು ಮೃತನ ಕುಟುಂಬಸ್ಥರು ದೂರು ನೀಡಿದ್ದಾರೆ. ಮೊದಲಿನಿಂದಲೂ ಮೃತ ಮಾರ್ಕಂಡಯ್ಯನ ಕುಟುಂಬಕ್ಕೂ ಹಾಗೂ ಆರೋಪಿ ಹುಚ್ಚಪ್ಪನ ಕುಟುಂಬಸ್ಥರ ನಡುವೆ ಹೊಲದ ವಿಚಾರವಾಗಿ ಈ ಹಿಂದಿನಿಂದಲೂ ಮನಸ್ತಾಪ ಇತ್ತಂತೆ. ಆಗಾಗ ಸಣ್ಣ ಪುಟ್ಟ ಗಲಾಟೆಗಳು ನಡೆದಿವೆಯಂತೆ. ಈ ಮಧ್ಯೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೃತ ಮಾರ್ಕಂಡಯ್ಯನ ಸಹೋದರ ಗೆದ್ದಿದ್ದ, ಆರೋಪಿ ಹುಚ್ಚಪ್ಪನ ಅಳಿಯ ಸೋಲು ಕಂಡಿದ್ದ. ಇವೆಲ್ಲದರ ದ್ವೇಷದಿಂದಲೇ ಮಾರ್ಕಂಡಯ್ಯನನ್ನ ಹತ್ಯೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಯುವಕನನ್ನು ಬರ್ಬರವಾಗಿ ಕೊಲೆಗೈದು, ಶವ ಸುಟ್ಟ ಆರೋಪಿಗಳ ಬಂಧನ

ಸದ್ಯ ಘಟನೆ ಸಂಬಂಧ ದೇವದುರ್ಗ ಪೊಲೀಸರು ವಿಶೇಷ ತಂಡಗಳ ಮೂಲಕ ಹಂತಕರ ಪತ್ತೆಗೆ ಶೋಧ ಕಾರ್ಯ ನಡೆಸ್ತಿದ್ದಾರೆ. ಹತ್ಯೆಗೆ ಬಳಸಲಾದ ಟ್ರಾಕ್ಟರ್ ವಶಕ್ಕೆ ಪಡೆಯಲಾಗಿದ್ದು, ಇದಷ್ಟೇ ಅಲ್ಲ, ಕೆಲ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಸಲಿಗೆ ಹತ್ಯೆಗೆ ಗ್ರಾಮ ಪಂಚಾಯತಿ ಚುನಾವಣೆ ಕಾರಣವಾ?, ಅಥವಾ ಬೇರೆ ಏನಾದರೂ ಉದ್ದೇಶ ಇದೆಯಾ ಎನ್ನುವುದರ ಬಗ್ಗೆ ತನಿಖೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ