AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​​

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.

ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​​
ಮೃತ ದಂಪತಿ, ಬಂಧಿತ ಮಗ
ನವೀನ್ ಕುಮಾರ್ ಟಿ
| Edited By: |

Updated on: Dec 11, 2023 | 7:06 PM

Share

ದೇವನಹಳ್ಳಿ, ಡಿಸೆಂಬರ್​​ 11: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಹೆತ್ತ ತಂದೆ-ತಾಯಿ (parents) ಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ. ಡಿಸೆಂಬರ್ 9ರಂದು ಸಂಜೆ ರಾಡ್​ನಿಂದ ಹೊಡೆದು ಬರ್ಬರವಾಗಿ ಕೊಂದಿದ್ದ. ತಂದೆ ರಾಮಕೃಷ್ಣಪ್ಪ(70), ತಾಯಿ ಮುನಿರಾಮಕ್ಕ(65)ಳನ್ನು ಹತ್ಯೆಗೈದಿದ್ದ.

ಹೆಣ್ಣುಮಕ್ಕಳಿಗೆ ಆಸ್ತಿ ಕೊಡುವುದಾಗಿ ಹೇಳಿದ್ದಕ್ಕೆ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಅನುಮಾನ ಬಾರದಂತೆ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದ. ಬಳಿಕ ಏನು ನಡೆದಿಲ್ಲ ಎಂಬಂತೆ ವರ್ತಿಸಿದ್ದ. ಪೊಲೀಸರ ಮುಂದೆಯೂ ಕೊಲೆ ಮಾಡಿಲ್ಲವೆಂದು ನಾಟಕವಾಡಿದ್ದ ಆರೋಪಿ, ನಿರಂತರ ವಿಚಾರಣೆಯಿಂದ ಕೊಲೆ ರಹಸ್ಯ ಬಯಲಾಗಿದೆ.

ಇದನ್ನೂ ಓದಿ: ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?

ಮೃತ ದಂಪತಿಗೆ ಓರ್ವ ಗಂಡು ಮಗು, ನಾಲ್ಕು ಹೆಣ್ಣು ಮಕ್ಕಳಿದ್ದು ಎಲ್ಲರಿಗೂ ಮದುವೆ ಮಾಡಿ ಇಳಿ ವಯಸ್ಸಿನಲ್ಲಿ ಇಬ್ಬರೇ ಪ್ರತ್ಯೇಕವಾಗಿ ವಾಸವಾಗಿದ್ದರು. ಜೊತೆಗೆ ಕೈಲಾದ ಕೆಲಸ ಮಾಡಿಕೊಂಡಿದ್ದ ದಂಪತಿಗೆ ನಿತ್ಯ ಹೆಣ್ಣು ಮಕ್ಕಳು ಕರೆ ಮಾಡಿ ಮಾತನಾಡ್ತಿದ್ದು ಎಂದಿನಂತೆ ನಿನ್ನೆ ರಾತ್ರಿಯು ಕರೆ ಮಾಡಿದ್ದರು. ಆದರೆ ಎಷ್ಟೇ ಕರೆ ಮಾಡಿದರು ಯಾರೊಬ್ಬರು ಕರೆ ಸ್ವೀಕರಿಸದಿದ್ದು ಅನುಮಾನಗೊಂಡ ಮಗಳು ಇಂದು ಸಂಜೆ ಸೂಲಿಬೆಲೆಯ ಮನೆ ಬಳಿಗೆ ಬಂದು ನೋಡಿದ್ದಾಳೆ.

ಈ ವೇಳೆ ಮನೆ ಮುಂದೆ ವೃದ್ದರಿಬ್ಬರ ಚಪ್ಪಲಿ ಹಾಗೆ ಇದ್ದು ಮನೆ ಬಾಗಿಲು ಮಾತ್ರ ಬೀಗ ಹಾಕಿರುವುದು ಕಂಡು ಬಂದಿದೆ. ಹೀಗಾಗಿ ಅನುಮಾನಗೊಂಡ ಮಗಳು ಮನೆ ಕಿಟಕಿ ತೆಗೆದು ನೋಡಿದಾಗ ಮನೆಯ ಒಳಗೆ ವೃದ್ದ ದಂಪತಿ ಬರ್ಬರವಾಗಿ ಕೊಲೆಯಾಗಿರುವ ಭೀಕರ ದೃಶ್ಯ ಕಂಡು ಬಂದಿತ್ತು.

ಇದನ್ನೂ ಓದಿ: ರಿಕವರಿ ಹಣ ದುರುಪಯೋಗ ಆರೋಪ: ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು

ದಂಪತಿ ಇದ್ದ 2 ಎಕರೆ ಜಮೀನಿನಲ್ಲಿ ಹೆಣ್ಣು ಮಕ್ಕಳಿಗೂ ಪಾಲು ಕೊಡುತ್ತೇವೆ ಅಂತಿದ್ದು ಇದೇ ವಿಚಾರಕ್ಕೆ ಸಹೋದರ ಕಡೆಯವರೆ ಕೊಲೆ ನಡೆಸಿರಬಹುದು ಅಂತ ಸಹೋದರಿಯರು ಆರೋಪಿಸಿದ್ದರು. ಅಲ್ಲದೇ ಸಹೋದರ ವಿರುದ್ದ ಮನೆ ಮುಂದೆ ನುಗ್ಗಿ ಆಕ್ರೋಶ ಹೊರ ಹಾಕಿದ್ದು, ಎಲ್ಲರೂ ಗರಂ ಆಗ್ತಿದ್ದಂತೆ ದಂಪತಿಯ ಮಗ ನರಸಿಂಹನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದರು. ಪೊಲೀಸರ ನಿರಂತರ ವಿಚಾರಣೆಯಿಂದ ಕೊಲೆ ಮಾಡಿರುವುದಾಗಿ ನರಸಿಂಹಮೂರ್ತಿ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ