AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ

ಹಣ, ಆಸ್ತಿಗಾಗಿ ಸಂಬಂಧವನ್ನೇ ಮರೆತು ಹೋಗುತ್ತಿದ್ದೇವೆ. ಅದರಂತೆ ಧಾರವಾಡ(Dharwad) ತಾಲೂಕಿನ ತಲವಾಯಿ ಗ್ರಾಮದಲ್ಲಿ ಮನೆ, ಹೊಲದ ಆಸ್ತಿಗಾಗಿ ನಡೆದ ಅಣ್ಣ-ತಮ್ಮಂದಿರು ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ.

ಧಾರವಾಡ: ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ
ಮೃತ ವ್ಯಕ್ತಿ, ಕುಟುಂಬಸ್ಥರ ಗೋಳಾಟ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Feb 21, 2024 | 6:34 PM

Share

ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆಸ್ತಿಗಾಗಿ ತಮ್ಮನನ್ನೇ ಕೊಂದು ಹಾಕಿದ ಅಣ್ಣ

ಮನೆ, ಹೊಲದ ಆಸ್ತಿಗಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಈ ಕುರಿತು ಅನೇಕ ಬಾರಿ ಸುತ್ತಮುತ್ತಲಿನ ಗ್ರಾಮಗಳ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿ-ಸಂಧಾನ ನಡೆಸಲಾಗಿತ್ತು. ಆದರೂ ವಿವಾದ ತಣ್ಣಗಾಗಿರಲಿಲ್ಲ. ಇಬ್ಬರ ನಡುವೆ ನಿರಂತರ ಜಗಳ ಆಗುತ್ತಲೇ ಇತ್ತು. ಇಂದು ಜಗಳ ವಿಕೋಪಕ್ಕೆ ಹೋಗಿ ಆಸ್ತಿಗಾಗಿ ತಮ್ಮನನ್ನೇ ಅಣ್ಣ ಕೊಂದು ಹಾಕಿದ್ದಾನೆ.

ಇದನ್ನೂ ಓದಿ:ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ

ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಬೆಸ್ಕಾಂ ಗುತ್ತಿಗೆ ನೌಕರ ಸಾವು

ಕೋಲಾರ: ಜಿಲ್ಲೆ ಬಂಗಾರಪೇಟೆ ತಾಲೂಕಿನ ಮಾಗೇರಿ ಬಳಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಬೆಸ್ಕಾಂ ಗುತ್ತಿಗೆ ನೌಕರ ಕೊನೆಯುಸಿರೆಳೆದ ಘಟನೆ ನಡೆದಿದೆ. ಮರವಳ್ಳಿ ನಿವಾಸಿ ಮಂಜುನಾಥ(45) ಮೃತ ರ್ದುದೈವಿ. ವಿದ್ಯುತ್ ಲೈನ್ ದುರಸ್ತಿ ಮಾಡಲು ಕಂಬ ಹತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Wed, 21 February 24

Follow Us
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ