AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಅಂಗಡಿಯಿಂದ ₹5 ಕೋಟಿಗೂ ಅಧಿಕ ಮೌಲ್ಯದ ವಜ್ರ ಕಳವು: ಮೂವರ ಬಂಧನ

ಇಲ್ಲಿನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಭಾರತ್ ಡೈಮಂಡ್ ಬೋರ್ಸ್‌ನಲ್ಲಿ (Bharat Diamond Bourse) ಮಳಿಗೆ ಹೊಂದಿರುವ ಜೆಬಿ ಅಂಡ್ ಬ್ರದರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಸಂಜಯ್ ಶಾ ಅವರು ತಮ್ಮ ಸ್ಟಾಕ್‌ನಿಂದ ₹ 5.62 ಕೋಟಿ ಮೌಲ್ಯದ ವಜ್ರಗಳು ಕಾಣೆಯಾಗಿದೆ.

ಮುಂಬೈನ ಅಂಗಡಿಯಿಂದ ₹5 ಕೋಟಿಗೂ ಅಧಿಕ ಮೌಲ್ಯದ ವಜ್ರ ಕಳವು: ಮೂವರ ಬಂಧನ
ಮುಂಬೈ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on: Nov 01, 2023 | 5:06 PM

Share

ಮುಂಬೈ ನವೆಂಬರ್  01: ಆರು ತಿಂಗಳ ಅವಧಿಯಲ್ಲಿ ಮುಂಬೈನ (Mumbai) ಜೆಮ್ಸ್ ಕಂಪನಿಯ ಅಂಗಡಿಯಿಂದ ₹ 5.62 ಕೋಟಿ ಮೌಲ್ಯದ ವಜ್ರಗಳನ್ನು (Diamond) ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಸಂಸ್ಥೆಯ ಇಬ್ಬರು ಉದ್ಯೋಗಿಗಳು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಇಲ್ಲಿನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಭಾರತ್ ಡೈಮಂಡ್ ಬೋರ್ಸ್‌ನಲ್ಲಿ (Bharat Diamond Bourse) ಮಳಿಗೆ ಹೊಂದಿರುವ ಜೆಬಿ ಅಂಡ್ ಬ್ರದರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಸಂಜಯ್ ಶಾ ಅವರು ತಮ್ಮ ಸ್ಟಾಕ್‌ನಿಂದ ₹ 5.62 ಕೋಟಿ ಮೌಲ್ಯದ ವಜ್ರಗಳು ಕಾಣೆಯಾಗಿದೆ ಎಂದು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಬಿಕೆಸಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಸಂಸ್ಥೆಯ ಉದ್ಯೋಗಿಗಳಾದ ಕಾಂದಿವಲಿಯ ಪ್ರಶಾಂತ್ ಶಾ ಮತ್ತು ವಿಶಾಲ್ ಶಾ ಅವರು ಏಪ್ರಿಲ್‌ನಿಂದ ತಮ್ಮ ಅಂಗಡಿಯಿಂದ ವಜ್ರಗಳನ್ನು ಕದಿಯುತ್ತಿದ್ದಾರೆ ಎಂದು ದೂರುದಾರರು ಶಂಕಿಸಿದ್ದಾರೆ ಎಂದು ಅವರು ಹೇಳಿದರು.

ಸಂಸ್ಥೆಯ ಮಾಜಿ ಉದ್ಯೋಗಿ ನೀಲೇಶ್ ಶಾ, ಕದ್ದ ವಜ್ರಗಳನ್ನು ಮಾರಾಟ ಮಾಡಲು ಇಬ್ಬರಿಗೆ ಸಹಾಯ ಮಾಡಿದ್ದಾರೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿವಿದೇಶದಿಂದ ಪಂಜಾಬ್​ಗೆ ಬಂದು ಪತ್ನಿಯನ್ನು ಹೊಡೆದು ಕೊಂದ ಪತಿ

ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ 420 (ವಂಚನೆ) ಸೇರಿದಂತೆ ಸಂಬಂಧಿತ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!