AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20,000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ? ದಂಪತಿ ನಡುವೆ ಏನಾಯಿತು?

ಎರಡು ಮಕ್ಕಳ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಹಾರ್ಟ್ ಅಟ್ಯಾಕ್ ಅಂತ ಹೇಳಿ ಗಂಡ ಅಲ್ಲಿಂದ ಎಸ್ಕೇಪ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಇನ್ನೊಂದು ಕಡೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದು ನಿಜಕ್ಕೂ ಕೊಲೆ ಮಾಡಿದ್ರಾ ಅಥವಾ ಗಂಡನ ಕಿರುಕುಳಕ್ಕೆ ಹೆಂಡತಿಯೇ ಆತ್ಮಹತ್ಯೆ ಮಾಡಿಕೊಂಡ್ಲಾ ಅನ್ನೋ ಆಯಾಮದಲ್ಲಿ ತನಿಖೆ ಶುರು ಮಾಡಿದ್ದಾರೆ. ಆದ್ರೇ ಅಮ್ಮನ ಕಳೆದುಕೊಂಡ ಮಕ್ಕಳು ಮಾತ್ರ ಅನಾಥವಾಗಿದ್ದು ವಿಪರ್ಯಾಸದ ಸಂಗತಿ.

20,000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ? ದಂಪತಿ ನಡುವೆ ಏನಾಯಿತು?
20000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ? ದಂಪತಿ ನಡುವೆ ಏನಾಯಿತು?
Sahadev Mane
| Edited By: |

Updated on:Mar 14, 2024 | 5:22 PM

Share

ಅವರದ್ದು ಏಳು ವರ್ಷದ ದಾಂಪತ್ಯ ಜೀವನ, ಲಾರಿ ಓಡಿಸಿಕೊಂಡು ಜೀವನ ಮಾಡ್ತಿದ್ದ ಆತ (husband) ಕೇವಲ 20,000 ರೂ.ಗಾಗಿ ಹೆಂಡತಿಯನ್ನೇ ಕೊಲೆ ಮಾಡಿದ್ದಾನೆ. ಇಬ್ಬರು ಮಕ್ಕಳಿದ್ರೂ ಹಣಕ್ಕಾಗಿ ಹೆಂಡತಿ (wife) ಹಾಗೂ ಅವರ ತವರು ಮನೆಯವರನ್ನ ಪೀಡಿಸುತ್ತಿದ್ದ. ದುಡ್ಡು ಕೊಡಲ್ಲಾ ಅಂದಿದ್ದಕ್ಕೆ ಮಾಡಬಾರದ ಕೆಲಸ ಮಾಡಿ (murder) ಇದೀಗ ಊರು ಬಿಟ್ಟಿದ್ದಾನೆ. ಅಷ್ಟಕ್ಕೂ ಆ ದಂಪತಿ ನಡುವೆ ಆಗಿದ್ದೇನೂ? ಈ ಕುರಿತು ಮೃತ ಮಹಿಳೆಯ ತವರು ಮನೆಯವರ ಆರೋಪ ಎನೂ ಅಂತೀರಾ ಈ ಸ್ಟೋರಿ ನೋಡಿ. ಈ ಫೋಟೊದಲ್ಲಿರುವ ಮಹಿಳೆಯ ಹೆಸರು ಜುವೇರಿಯಾ ಮುಲ್ಲಾ ಅಂತಾ. 28 ವರ್ಷದ ಈಕೆ ಎರಡು ಮಕ್ಕಳ ತಾಯಿ. ಆದ್ರೇ ವರದಕ್ಷಿಣೆ ಅನ್ನೋ ಪೆಡಂಭೂತಕ್ಕೆ ಇದೀಗ ಜೀವವನ್ನೇ ಬಲಿಕೊಟ್ಟಿದ್ದಾಳೆ. ಏಳು ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (chikodi) ತಾಲೂಕಿನ ಕರೋಶಿ ಗ್ರಾಮದ ಜಾವೇದ್ ಮುಲ್ಲಾ ಅನ್ನೋರ ಜತೆಗೆ ಮದುವೆ ಆಗಿದೆ. ಮದುವೆ ಸಂದರ್ಭದಲ್ಲಿ ವರದಕ್ಷಿಣೆ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು.

ಈ ದಂಪತಿಗೆ ಎರಡು ಮುದ್ದಾದ ಮಕ್ಕಳು ಕೂಡ ಇದ್ದು ಹೇಗೋ ಜೀವನ ನಡೆಯುತ್ತಿತ್ತು. ಲಾರಿ ಓಡಿಸಿಕೊಂಡಿದ್ದ ಜಾವೇದ್ ಕೆಲ ದಿನಗಳಿಂದ ಹಣಕ್ಕಾಗಿ ಹೆಂಡತಿಯನ್ನ ಪೀಡಿಸಲಾರಂಭಿಸಿದ್ದ. 10 ದಿನಗಳ ಹಿಂದೆ ಹೆಂಡತಿ ಜುವೇರಿಯಾ ತವರು ಮನೆಗೆ ಹೋಗಿದ್ದಳು. ಅಲ್ಲಿಗೆ ಹೋದ ಜಾವೇದ್ ಅಂದು ರಾತ್ರಿ ಕುಡಿದು ಹಣಕ್ಕಾಗಿ ಜಗಳ ಮಾಡಿದ್ದ, 20,000 ಹಣ ಬೇಕು ಅಂತಾ ಕೇಳಿದ್ದ. ಈಗ ಹಣವಿಲ್ಲ ಅಂತಾ ಹೇಳಿದ್ದಕ್ಕೆ ಅಂದು ರಾತ್ರಿಯೇ ಜಗಳವಾಡಿಕೊಂಡು ಹೆಂಡತಿಯನ್ನ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಹೀಗೆ ಬಂದ ಹತ್ತೇ ದಿನದಲ್ಲಿ ಮಗಳು ಸಾವನ್ನಪ್ಪಿದ್ದು ಸಾಕಷ್ಟು ಅನುಮಾನ ಹುಟ್ಟುವಂತೆ ಮಾಡಿದೆ. ಗಂಡ ಜಾವೇದ್ ಮತ್ತು ಆತನ ತಂದೆ ಸೇರಿಕೊಂಡು ಮಗಳನ್ನ ಹೊಡೆದು ಕೊಂದಿದ್ದಾರೆ ಅಂತಾ ಜುವೇರಿಯಾ ಕುಟುಂಬಸ್ಥರು ಆರೋಪ ಮಾಡ್ತಿದ್ದು ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದಾರೆ.

ಇಲ್ಲಿ ಜಾವೇದ್ ಡ್ರೈವರ್ ಅಂದಾಗಲೇ ಜುವೇರಿಯಾ ದೊಡ್ಡಪ್ಪ ಅಂದು ಮದುವೆಗೆ ವಿರೋಧ ಮಾಡಿದ್ದರು. ಆದ್ರೇ ಎರಡು ಎಕರೆ ಜಮೀನಿದೆ ಅನ್ನೋ ಕಾರಣಕ್ಕೆ ಜುವೇರಿಯಾ ತಂದೆ ಮನೆಯವರ ವಿರೋಧದ ನಡುವೆ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದ ಮೇಲೆ ಕುಡಿದು ಬಂದು ಆಗಾಗ ಹೆಂಡತಿ ಜತೆಗೆ ಗಲಾಟೆ ಮಾಡಿಕೊಳ್ತಿದ್ದ. ಮೊನ್ನೆ ಊರಿಂದ ಬಂದ ಬಳಿಕ ಗಂಡನ ಕಿರುಕುಳ ಜಾಸ್ತಿಯಾಗಿದೆ. ಮೊನ್ನೆ ರಾತ್ರಿ ಆಸ್ಪತ್ರೆಯಿಂದ ಜಾವೇದ್ ಪೋನ್ ಕರೆ ಮಾಡಿ ನಿಮ್ಮ ಮಗಳಿಗೆ ಹಾರ್ಟ್ ಅಟ್ಯಾಕ್ ಆಗಿದೆ ಅಂತಾ ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ

ಓಡೋಡಿ ಬಂದು ನೋಡುವಷ್ಟರಲ್ಲಿ ವೈದ್ಯರು ಸಾವನ್ನಪ್ಪಿದ್ದಾಳೆ ಅಂತಾ ಹೇಳಿದ್ದಾರೆ. ಶಾಕ್ ಆದ ಜುವೇರಿಯಾ ಕುಟುಂಬಸ್ಥರು ಶವದ ಬಳಿ ಹೋಗಿ ನೋಡಿ ಕತ್ತಿನ ಬಳಿ ಹಾಗೂ ಹೊಟ್ಟೆ ಭಾಗದ ಬಳಿ ಕಪ್ಪು ಕಲೆಗಳು ಮೂಡಿದ್ದನ್ನ ಗಮನಿಸಿದ್ದಾರೆ. ಇದು ಸಹಜ ಸಾವು ಅಲ್ಲ, ಬದಲಿಗೆ ಗಂಡ ಮತ್ತು ಮಾವ ಹೊಡೆದು ಕೊಲೆ ಮಾಡಿದ್ದಾರೆ ಅಂತಾ ಸಂಶಯ ಬಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಅಷ್ಟೊತ್ತಿಗಾಗಲೇ ಗಂಡ ಜಾವೇದ್ ಮತ್ತು ಆತನ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ. ಇತ್ತ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಇನ್ನೊಂದು ಕಡೆ ಮರಣೋತ್ತರ ಪರೀಕ್ಷೆ ವರದಿ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಒಟ್ಟಿನಲ್ಲಿ ಎರಡು ಮಕ್ಕಳ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಹಾರ್ಟ್ ಅಟ್ಯಾಕ್ ಆಗಿದೆ ಅಂತಾ ಕರೆದ ಗಂಡ ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಇನ್ನೊಂದು ಕಡೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದು ನಿಜಕ್ಕೂ ಕೊಲೆ ಮಾಡಿದ್ರಾ ಅಥವಾ ಗಂಡನ ಕಿರುಕುಳಕ್ಕೆ ಹೆಂಡತಿಯೇ ಆತ್ಮಹತ್ಯೆ ಮಾಡಿಕೊಂಡ್ಲಾ ಅನ್ನೋ ಆಯಾಮದಲ್ಲಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಆದ್ರೇ ಅಮ್ಮನ ಕಳೆದುಕೊಂಡ ಮಕ್ಕಳು ಮಾತ್ರ ಅನಾಥವಾಗಿದ್ದು ವಿಪರ್ಯಾಸದ ಸಂಗತಿ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:22 pm, Thu, 14 March 24

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ