AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿ ಮಸಣ ಸೇರಿದಳಾ ಪತ್ನಿ? ಮಹಿಳೆಯ ಪೋಷಕರು ಹೇಳುವುದೇನು?

ಕಳೆದ ಆರು ವರ್ಷಗಳ ಹಿಂದೆ ಸಾಲ ಸೋಲ ಮಾಡಿ ಮಗಳನ್ನ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದ್ರೆ, ಅಳಿಯ ಮಾತ್ರ ಇತ್ತ ಮದುವೆಯಾಗಿದ್ದ ಮುದ್ದಾದ ಹೆಂಡತಿ ಬಿಟ್ಟು ಮತ್ತೊಬ್ಬಳ ಜೊತೆ ಲವ್ವಿ ಡವ್ವಿ ಶುರುಮಾಡಿಕೊಂಡಿದ್ದ.‌ ಇದೀಗ ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಆಕೆ‌ಯೇ ಮಸಣ ಸೇರಿದ್ದಾಳೆ.

ಮೈಸೂರು: ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿ ಮಸಣ ಸೇರಿದಳಾ ಪತ್ನಿ? ಮಹಿಳೆಯ ಪೋಷಕರು ಹೇಳುವುದೇನು?
ಮೃತ ಮಹಿಳೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Aug 08, 2023 | 7:57 AM

Share

ಮೈಸೂರು, ಆ.8: ಜಿಲ್ಲೆಯ ಟಿ ನರಸೀಪುರ(T Narasipura) ತಾಲೂಕಿನ ಕುಳ್ಳನಕೊಪ್ಪಲು ನಿವಾಸಿಯಾದ ಮನುರಾಣಿ ಎಂಬ ಮಹಿಳೆಯನ್ನ, ಕಳೆದ ಐದಾರು ವರ್ಷಗಳ ಹಿಂದೆ ಪಕ್ಕದ ಹನುಮನಹಾಳು ಗ್ರಾಮದ ಮಂಜು ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಮಂಜು ಕೇಳಿದಷ್ಟು ವರದಕ್ಷಿಣೆ ಕೊಟ್ಟು ಅದ್ದೂರಿಯಾಗಿಯುವ ಮದುವೆ ಮಾಡಿದ್ದಾರೆ. ಊರಲ್ಲಿ ವ್ಯವಸಾಯ ಮಾಡಿಕೊಂಡು‌ ಮಗಳನ್ನ ಸಾಕುತ್ತಾನೆ ಎಂದು ಕೊಂಡಿದ್ದ ಮನುರಾಣಿ ಕುಟುಂಬಕ್ಕೆ‌ ಒಂದೆರಡು ವರ್ಷದಲ್ಲೆ ಮಂಜುವಿನ ನಿಜ ಬಣ್ಣ ಬಯಲಾಗಿದೆ.

ಹೌದು, ಮಂಜು ಅದೇ ಗ್ರಾಮದ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ವಿಚಾರವಾಗಿ ಮನುರಾಣಿ ಮೊದಲಿಗೆ ಗಂಡನನ್ನ ಪ್ರಶ್ನೆ ಮಾಡಿದ್ದಾಳೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಈ ವಿಚಾರವನ್ನ ಕುಟುಂಬಸ್ಥರ ಮುಂದೆಯು ಹೇಳಿಕೊಂಡಿದ್ದಾಳೆ. ಈ ವೇಳೆ ಗ್ರಾಮಸ್ಥರ ಜೊತೆ ಸೇರಿ ರಾಜೀ ಪಂಚಾಯತಿ ಮಾಡಿದ್ದಾರಂತೆ. ಆದ್ರೆ, ಇಷ್ಟೆಲ್ಲ ಆದರೂ ಮಂಜು ಮಾತ್ರ ತನ್ನ ಚಾಳಿ ಮುಂದುವರೆಸಿದ್ದಾನೆ. ಇದರಿಂದ ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗಳು ಆತ್ಮಹತ್ಯೆ ದಾರಿ ಹಿಡಿದ್ದಾಳೆ. ಆದ್ರೆ, ಇದು ಆತ್ಮಹತ್ಯೆ ಅಲ್ಲ, ಗಂಡನೆ ವಿಷ ಕುಡಿಸಿ ಸಾಯಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ:ಖುಷ್​​ ಖುಷಿಯಾಗಿದ್ದ ನವದಂಪತಿ ಬೆಳ್ಳಂಬೆಳಗ್ಗೆ ಜೋಡಿಯಾಗಿಯೇ ಶವವಾದರು: ನವದಂಪತಿಯದ್ದು ಕೊಲೆಯೋ, ಆತ್ಮಹತ್ಯೆಯೋ?

ಇನ್ನು ಇದಷ್ಟೇ ಅಲ್ಲ, ಪತ್ನಿ ಅಕ್ರಮ ಸಂಬಂಧ ಕುರಿತು ಪ್ರಶ್ನೆ ಮಾಡಿದ ಮೇಲೆ, ವರದಕ್ಷಿಣಿ ಕೇಳುವುದಕ್ಕೆ ಶುರು ಮಾಡಿದ್ದನಂತೆ. ಹಸು ಸಾಕಬೇಕು, ವ್ಯವಸಾಯಕ್ಕೆ ಬೇಕು ಎಂದು, ಆಗಾಗ ಹಣ ಕೇಳೋಕೆ ಶುರುಮಾಡಿದ್ದ ಮಂಜುವಿಗೆ, ಮಗಳು ಚೆನ್ನಾಗಿರಲಿ ಎಂದು ಕುಟುಂಬಸ್ಥರ ಹತ್ತಿರ ಫೋಷಕರು ಸಾಲ ಸೋಲ ಮಾಡಿ ಹಣವನ್ನು ಕೊಟ್ಟಿದ್ದರಂತೆ. ಆದ್ರೆ, ಇದೀಗ ಮಗಳನ್ನೆ ಕೊಂದಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಗಿಣಿಯಂತೆ ಸಾಕಿದ್ದ ಮಗಳನ್ನ, ಮದುವೆ ಮಾಡಿ ಗಿಡುಗನಿಗೆ ಕೊಟ್ಟಂತೆ ಆಯಿತು ಎಂದು ಪೋಷಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ