ಮೈಸೂರು: ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿ ಮಸಣ ಸೇರಿದಳಾ ಪತ್ನಿ? ಮಹಿಳೆಯ ಪೋಷಕರು ಹೇಳುವುದೇನು?

ಕಳೆದ ಆರು ವರ್ಷಗಳ ಹಿಂದೆ ಸಾಲ ಸೋಲ ಮಾಡಿ ಮಗಳನ್ನ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದ್ರೆ, ಅಳಿಯ ಮಾತ್ರ ಇತ್ತ ಮದುವೆಯಾಗಿದ್ದ ಮುದ್ದಾದ ಹೆಂಡತಿ ಬಿಟ್ಟು ಮತ್ತೊಬ್ಬಳ ಜೊತೆ ಲವ್ವಿ ಡವ್ವಿ ಶುರುಮಾಡಿಕೊಂಡಿದ್ದ.‌ ಇದೀಗ ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಆಕೆ‌ಯೇ ಮಸಣ ಸೇರಿದ್ದಾಳೆ.

ಮೈಸೂರು: ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿ ಮಸಣ ಸೇರಿದಳಾ ಪತ್ನಿ? ಮಹಿಳೆಯ ಪೋಷಕರು ಹೇಳುವುದೇನು?
ಮೃತ ಮಹಿಳೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 08, 2023 | 7:57 AM

ಮೈಸೂರು, ಆ.8: ಜಿಲ್ಲೆಯ ಟಿ ನರಸೀಪುರ(T Narasipura) ತಾಲೂಕಿನ ಕುಳ್ಳನಕೊಪ್ಪಲು ನಿವಾಸಿಯಾದ ಮನುರಾಣಿ ಎಂಬ ಮಹಿಳೆಯನ್ನ, ಕಳೆದ ಐದಾರು ವರ್ಷಗಳ ಹಿಂದೆ ಪಕ್ಕದ ಹನುಮನಹಾಳು ಗ್ರಾಮದ ಮಂಜು ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಮಂಜು ಕೇಳಿದಷ್ಟು ವರದಕ್ಷಿಣೆ ಕೊಟ್ಟು ಅದ್ದೂರಿಯಾಗಿಯುವ ಮದುವೆ ಮಾಡಿದ್ದಾರೆ. ಊರಲ್ಲಿ ವ್ಯವಸಾಯ ಮಾಡಿಕೊಂಡು‌ ಮಗಳನ್ನ ಸಾಕುತ್ತಾನೆ ಎಂದು ಕೊಂಡಿದ್ದ ಮನುರಾಣಿ ಕುಟುಂಬಕ್ಕೆ‌ ಒಂದೆರಡು ವರ್ಷದಲ್ಲೆ ಮಂಜುವಿನ ನಿಜ ಬಣ್ಣ ಬಯಲಾಗಿದೆ.

ಹೌದು, ಮಂಜು ಅದೇ ಗ್ರಾಮದ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ವಿಚಾರವಾಗಿ ಮನುರಾಣಿ ಮೊದಲಿಗೆ ಗಂಡನನ್ನ ಪ್ರಶ್ನೆ ಮಾಡಿದ್ದಾಳೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಈ ವಿಚಾರವನ್ನ ಕುಟುಂಬಸ್ಥರ ಮುಂದೆಯು ಹೇಳಿಕೊಂಡಿದ್ದಾಳೆ. ಈ ವೇಳೆ ಗ್ರಾಮಸ್ಥರ ಜೊತೆ ಸೇರಿ ರಾಜೀ ಪಂಚಾಯತಿ ಮಾಡಿದ್ದಾರಂತೆ. ಆದ್ರೆ, ಇಷ್ಟೆಲ್ಲ ಆದರೂ ಮಂಜು ಮಾತ್ರ ತನ್ನ ಚಾಳಿ ಮುಂದುವರೆಸಿದ್ದಾನೆ. ಇದರಿಂದ ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗಳು ಆತ್ಮಹತ್ಯೆ ದಾರಿ ಹಿಡಿದ್ದಾಳೆ. ಆದ್ರೆ, ಇದು ಆತ್ಮಹತ್ಯೆ ಅಲ್ಲ, ಗಂಡನೆ ವಿಷ ಕುಡಿಸಿ ಸಾಯಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ:ಖುಷ್​​ ಖುಷಿಯಾಗಿದ್ದ ನವದಂಪತಿ ಬೆಳ್ಳಂಬೆಳಗ್ಗೆ ಜೋಡಿಯಾಗಿಯೇ ಶವವಾದರು: ನವದಂಪತಿಯದ್ದು ಕೊಲೆಯೋ, ಆತ್ಮಹತ್ಯೆಯೋ?

ಇನ್ನು ಇದಷ್ಟೇ ಅಲ್ಲ, ಪತ್ನಿ ಅಕ್ರಮ ಸಂಬಂಧ ಕುರಿತು ಪ್ರಶ್ನೆ ಮಾಡಿದ ಮೇಲೆ, ವರದಕ್ಷಿಣಿ ಕೇಳುವುದಕ್ಕೆ ಶುರು ಮಾಡಿದ್ದನಂತೆ. ಹಸು ಸಾಕಬೇಕು, ವ್ಯವಸಾಯಕ್ಕೆ ಬೇಕು ಎಂದು, ಆಗಾಗ ಹಣ ಕೇಳೋಕೆ ಶುರುಮಾಡಿದ್ದ ಮಂಜುವಿಗೆ, ಮಗಳು ಚೆನ್ನಾಗಿರಲಿ ಎಂದು ಕುಟುಂಬಸ್ಥರ ಹತ್ತಿರ ಫೋಷಕರು ಸಾಲ ಸೋಲ ಮಾಡಿ ಹಣವನ್ನು ಕೊಟ್ಟಿದ್ದರಂತೆ. ಆದ್ರೆ, ಇದೀಗ ಮಗಳನ್ನೆ ಕೊಂದಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಗಿಣಿಯಂತೆ ಸಾಕಿದ್ದ ಮಗಳನ್ನ, ಮದುವೆ ಮಾಡಿ ಗಿಡುಗನಿಗೆ ಕೊಟ್ಟಂತೆ ಆಯಿತು ಎಂದು ಪೋಷಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us