Crime News: ಪ್ರೇಮ ಸಮಸ್ಯೆಯಿಂದ 17 ವರ್ಷದ ಯುವತಿ ಮೇಲೆ ಯುವಕನಿಂದ ಗುಂಡಿನ ದಾಳಿ

ಮಧುರೈನ ಮೇಲೂರು ಜಿಲ್ಲೆಯ ಯುವಕ ಸೆಲ್ವಂ ಎಂಬಾತ ದಿಂಡಿಗಲ್ ಸಮೀಪದ ನಟ್ಟಂ ಪ್ರದೇಶದ 17 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಆಗಾಗ ಭೇಟಿಯಾಗಿ ಮಾತನಾಡುತ್ತಿದ್ದರು. ಈ ವೇಳೆ 2 ದಿನಗಳ ಹಿಂದೆ ಸೆಲ್ವಂ ಸಂಬಂಧಿಕರ ಮದುವೆಗೆ ತೆರಳಿದ್ದ. ಅಲ್ಲಿ ಅವನು ತನ್ನ ಪ್ರೇಯಸಿಯಾದ 17 ವರ್ಷದ ಹುಡುಗಿಯನ್ನು ಮನೆಗೆ ಕರೆದಿದ್ದ.

Crime News: ಪ್ರೇಮ ಸಮಸ್ಯೆಯಿಂದ 17 ವರ್ಷದ ಯುವತಿ ಮೇಲೆ ಯುವಕನಿಂದ ಗುಂಡಿನ ದಾಳಿ
ಸಾಂದರ್ಭಿಕ ಚಿತ್ರ
Follow us
|

Updated on: Sep 09, 2024 | 7:09 PM

ಮಧುರೈ: ಯುವಕನೊಬ್ಬ ಪಿಸ್ತೂಲ್​ನಿಂದ ಬಾಲಕಿಗೆ ಗುಂಡು ಹಾರಿಸಿದ ಘಟನೆ ದಿಂಡಿಗಲ್ ಜಿಲ್ಲೆಯ ನಥಂ ಬಳಿ ನಡೆದಿದೆ. ಈತ 17 ವರ್ಷದ ಬಾಲಕಿಯ ಮೇಲೆ ಕಂಟ್ರಿ ಗನ್ ನಿಂದ ಹಲ್ಲೆ ನಡೆಸಿರುವ ಘಟನೆ ಭಾರೀ ಆಘಾತಕ್ಕೆ ಕಾರಣವಾಗಿದೆ. ಮಧುರೈನ ಮೇಲೂರು ಜಿಲ್ಲೆಯ ಯುವಕ ಸೆಲ್ವಂ ದಿಂಡಿಗಲ್ ಸಮೀಪದ ನಟ್ಟಂ ಪ್ರದೇಶದ 17 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಆಗಾಗ ಭೇಟಿಯಾಗಿ ಮಾತನಾಡುತ್ತಿದ್ದರು. ಈ ವೇಳೆ 2 ದಿನಗಳ ಹಿಂದೆ ಸೆಲ್ವಂ ಸಂಬಂಧಿಕರ ಮದುವೆಗೆ ತೆರಳಿದ್ದ. ಅಲ್ಲಿ ತನ್ನ ಪ್ರೇಯಸಿಯಾದ 17 ವರ್ಷದ ಹುಡುಗಿಯನ್ನು ಕರೆದು ಮಾತನಾಡಿಸಿದ್ದ. ಆಗ ಸೆಲ್ವಂ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಇಬ್ಬರ ನಡುವೆ ವಾಗ್ವಾದ ಶುರುವಾಗಿತ್ತು.

ಇದರಿಂದ ಕುಪಿತಗೊಂಡ ಸೆಲ್ವಂ ತನ್ನ ಸಂಬಂಧಿಕರ ಮನೆಯಲ್ಲಿದ್ದ ಕಂಟ್ರಿ ಗನ್ ತೆಗೆದುಕೊಂಡು ಆಕೆಯನ್ನು ನೋಡಲು ಹೋಗಿದ್ದ. ನಂತರ ಆ ಹುಡುಗಿಯನ್ನು ಕಂಟ್ರಿ ಗನ್ ನಿಂದ ಶೂಟ್ ಮಾಡಿದ್ದಾನೆ. ಇದರಿಂದ ಗಾಯಗೊಂಡ ಬಾಲಕಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾಳೆ. ಇದನ್ನು ನೋಡಿದ ಸೆಲ್ವಂ ಆಘಾತಕ್ಕೊಳಗಾಗಿ, ಕೋಪದಲ್ಲಿ ತಾನು ತಪ್ಪು ಮಾಡಿದೆ ಎಂದು ಪಶ್ಚಾತ್ತಾಪ ಪಟ್ಟಿದ್ದಾನೆ. ನಂತರ ಭಯದಿಂದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: Crime News: ಟಿವಿ ವಾಲ್ಯೂಮ್ ಯಾಕಿಷ್ಟು ಜೋರಾಗಿದೆ? ಎಂದ ವ್ಯಕ್ತಿಯ ಕತ್ತು ಕತ್ತರಿಸಿ ಕೊಲೆ

ಇದನ್ನು ಕಂಡ ಅಕ್ಕಪಕ್ಕದ ಮನೆಯವರು ಕೂಡಲೇ ಇಬ್ಬರನ್ನೂ ರಕ್ಷಿಸಿ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರನ್ನೂ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ