AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೇಮ ಸಮಸ್ಯೆಯಿಂದ 17 ವರ್ಷದ ಯುವತಿ ಮೇಲೆ ಯುವಕನಿಂದ ಗುಂಡಿನ ದಾಳಿ

ಮಧುರೈನ ಮೇಲೂರು ಜಿಲ್ಲೆಯ ಯುವಕ ಸೆಲ್ವಂ ಎಂಬಾತ ದಿಂಡಿಗಲ್ ಸಮೀಪದ ನಟ್ಟಂ ಪ್ರದೇಶದ 17 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಆಗಾಗ ಭೇಟಿಯಾಗಿ ಮಾತನಾಡುತ್ತಿದ್ದರು. ಈ ವೇಳೆ 2 ದಿನಗಳ ಹಿಂದೆ ಸೆಲ್ವಂ ಸಂಬಂಧಿಕರ ಮದುವೆಗೆ ತೆರಳಿದ್ದ. ಅಲ್ಲಿ ಅವನು ತನ್ನ ಪ್ರೇಯಸಿಯಾದ 17 ವರ್ಷದ ಹುಡುಗಿಯನ್ನು ಮನೆಗೆ ಕರೆದಿದ್ದ.

Crime News: ಪ್ರೇಮ ಸಮಸ್ಯೆಯಿಂದ 17 ವರ್ಷದ ಯುವತಿ ಮೇಲೆ ಯುವಕನಿಂದ ಗುಂಡಿನ ದಾಳಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 09, 2024 | 7:09 PM

Share

ಮಧುರೈ: ಯುವಕನೊಬ್ಬ ಪಿಸ್ತೂಲ್​ನಿಂದ ಬಾಲಕಿಗೆ ಗುಂಡು ಹಾರಿಸಿದ ಘಟನೆ ದಿಂಡಿಗಲ್ ಜಿಲ್ಲೆಯ ನಥಂ ಬಳಿ ನಡೆದಿದೆ. ಈತ 17 ವರ್ಷದ ಬಾಲಕಿಯ ಮೇಲೆ ಕಂಟ್ರಿ ಗನ್ ನಿಂದ ಹಲ್ಲೆ ನಡೆಸಿರುವ ಘಟನೆ ಭಾರೀ ಆಘಾತಕ್ಕೆ ಕಾರಣವಾಗಿದೆ. ಮಧುರೈನ ಮೇಲೂರು ಜಿಲ್ಲೆಯ ಯುವಕ ಸೆಲ್ವಂ ದಿಂಡಿಗಲ್ ಸಮೀಪದ ನಟ್ಟಂ ಪ್ರದೇಶದ 17 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಆಗಾಗ ಭೇಟಿಯಾಗಿ ಮಾತನಾಡುತ್ತಿದ್ದರು. ಈ ವೇಳೆ 2 ದಿನಗಳ ಹಿಂದೆ ಸೆಲ್ವಂ ಸಂಬಂಧಿಕರ ಮದುವೆಗೆ ತೆರಳಿದ್ದ. ಅಲ್ಲಿ ತನ್ನ ಪ್ರೇಯಸಿಯಾದ 17 ವರ್ಷದ ಹುಡುಗಿಯನ್ನು ಕರೆದು ಮಾತನಾಡಿಸಿದ್ದ. ಆಗ ಸೆಲ್ವಂ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಇಬ್ಬರ ನಡುವೆ ವಾಗ್ವಾದ ಶುರುವಾಗಿತ್ತು.

ಇದರಿಂದ ಕುಪಿತಗೊಂಡ ಸೆಲ್ವಂ ತನ್ನ ಸಂಬಂಧಿಕರ ಮನೆಯಲ್ಲಿದ್ದ ಕಂಟ್ರಿ ಗನ್ ತೆಗೆದುಕೊಂಡು ಆಕೆಯನ್ನು ನೋಡಲು ಹೋಗಿದ್ದ. ನಂತರ ಆ ಹುಡುಗಿಯನ್ನು ಕಂಟ್ರಿ ಗನ್ ನಿಂದ ಶೂಟ್ ಮಾಡಿದ್ದಾನೆ. ಇದರಿಂದ ಗಾಯಗೊಂಡ ಬಾಲಕಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾಳೆ. ಇದನ್ನು ನೋಡಿದ ಸೆಲ್ವಂ ಆಘಾತಕ್ಕೊಳಗಾಗಿ, ಕೋಪದಲ್ಲಿ ತಾನು ತಪ್ಪು ಮಾಡಿದೆ ಎಂದು ಪಶ್ಚಾತ್ತಾಪ ಪಟ್ಟಿದ್ದಾನೆ. ನಂತರ ಭಯದಿಂದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: Crime News: ಟಿವಿ ವಾಲ್ಯೂಮ್ ಯಾಕಿಷ್ಟು ಜೋರಾಗಿದೆ? ಎಂದ ವ್ಯಕ್ತಿಯ ಕತ್ತು ಕತ್ತರಿಸಿ ಕೊಲೆ

ಇದನ್ನು ಕಂಡ ಅಕ್ಕಪಕ್ಕದ ಮನೆಯವರು ಕೂಡಲೇ ಇಬ್ಬರನ್ನೂ ರಕ್ಷಿಸಿ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರನ್ನೂ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ