AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ: ಪ್ರಮುಖ ಆರೋಪಿ ಸೈಯದ್ ಅಬ್ಬಾಸ್ ಬಂಧಿಸಿದ ಎನ್​ಐಎ

ಈಗಾಗಲೇ ಪ್ರಕರಣ ಸಂಬಂಧ 138 ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ದಾಖಲು ಮಾಡಲಾಗಿದೆ. ಎನ್​ಐಎ ಸ್ಪೆಷಲ್ ಕೋರ್ಟ್ ಮುಂದೆ ಆರೋಪಿಯನ್ನು ಹಾಜರು ಪಡಿಸಿದ ಎನ್​ಐಎ, 6 ದಿನಗಳ ಕಾಲ ಎನ್ಐಎ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆ.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ: ಪ್ರಮುಖ ಆರೋಪಿ ಸೈಯದ್ ಅಬ್ಬಾಸ್ ಬಂಧಿಸಿದ ಎನ್​ಐಎ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 30, 2021 | 10:53 PM

Share

ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್​ಐಎ ಬಂಧಿಸಿದೆ. ಗಲಭೆ ಬಳಿಕ ನಾಪತ್ತೆಯಾಗಿದ್ದ ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್ ಬಂಧನವಾಗಿದೆ. 2020 ರ ಆಗಸ್ಟ್ 11 ರಂದು ಗಲಭೆ ಕೇಸ್ ನಡೆದಿತ್ತು. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯನ್ನು ಸೈಯದ್ ಅಬ್ಬಾಸ್ ಧ್ವಂಸ ಮಾಡಿದ್ದ.

ಈ ಪ್ರಕರಣ ಸಂಬಂಧ 2020 ರ ಆಗಸ್ಟ್ 12 ರಂದು ಎಫ್​ಐಆರ್ ದಾಖಲಾಗಿತ್ತು. ಎಫ್​ಐಆರ್ ದಾಖಲಾದ ಬಳಿಕ ಪ್ರಕರಣವನ್ನು ಎನ್​ಐಎಗೆ ವರ್ಗಾವಣೆ ಮಾಡಲಾಗಿತ್ತು. ಸೈಯದ್ ಅಬ್ಬಾಸ್ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ಠಾಣೆಗೆ ಬೆಂಕಿ ಇಟ್ಟಿದ್ದು ಸಹ‌ ಇದೇ ಸೈಯದ್ ಅಬ್ಬಾಸ್ ಎಂದು ತಿಳಿದುಬಂದಿತ್ತು.

ಈಗಾಗಲೇ ಪ್ರಕರಣ ಸಂಬಂಧ 138 ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ದಾಖಲು ಮಾಡಲಾಗಿದೆ. ಎನ್​ಐಎ ಸ್ಪೆಷಲ್ ಕೋರ್ಟ್ ಮುಂದೆ ಆರೋಪಿಯನ್ನು ಹಾಜರು ಪಡಿಸಿದ ಎನ್​ಐಎ, 6 ದಿನಗಳ ಕಾಲ ಎನ್ಐಎ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆ. ಸೈಯದ್ ಅಬ್ಬಾಸ್ ನಾಗವಾರ ಎಸ್​ಡಿಪಿಐ ಅಧ್ಯಕ್ಷನೂ ಆಗಿದ್ದ ಎಂದು ತಿಳಿದುಬಂದಿದೆ.

ಘಟನೆಯ ಹಿನ್ನೆಲೆ ‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!

ಡಿಜೆ ಹಳ್ಳಿ ಗಲಭೆ: ಸರ್ಕಾರದ ಕೈ ಸೇರಿದ ಘಟನೆಯ ಸತ್ಯಶೋಧನಾ ವರದಿ

Published On - 9:50 pm, Wed, 30 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ