AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ, ಅಜ್ಜು, ನವಾಜ್‌ ಅರೆಸ್ಟ್,: 2.47 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಸಿಲಿಕಾನ್​ ಸಿಟಿಯಲ್ಲಿ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಡಿ.ಜೆ.ಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ, ಅಜ್ಜು, ನವಾಜ್‌ ಅರೆಸ್ಟ್,: 2.47 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ಬಂಧಿತ ಆರೋಪಿಗಳು
ರಮೇಶ್ ಬಿ. ಜವಳಗೇರಾ
|

Updated on: Mar 05, 2023 | 8:03 AM

Share

ಬೆಂಗಳೂರು(ಮಾ.05): ರಾಜಧಾನಿಯಲ್ಲಿನ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 2.47 ಕೋಟಿ ರೂ. ಮೌಲ್ಯದ ನಾಲ್ಕು ಕ್ವಿಂಟಾಲ್‌ ಗಾಂಜಾ ಜಪ್ತಿ ಮಾಡಿದ್ದಾರೆ. ಲಿಂಗರಾಜಪುರದ ಅಬ್ದುಲ್‌ ರೆಹಮಾನ್‌ ಅಲಿಯಾಸ್‌ ಅಜ್ಜು ಹಾಗೂ ನವಾಜ್‌ ಬಂಧಿತರಾಗಿದ್ದು, ಆರೋಪಿಗಳಿಂದ 2.47 ಕೋಟಿ ಮೌಲ್ಯದ 410 ಕೇಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ವೇಳೆ ತಪ್ಪಿಸಿಕೊಂಡಿರುವ ಪ್ರಮುಖ ಗಾಂಜಾ ಪೂರೈಕೆದಾರರಾದ ಆಂಧ್ರಪ್ರದೇಶ ಮೂಲದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಪತ್ತೆಗೆ ಬಲೆ ಬೀಸಿದ್ದಾರೆ.

ಇತ್ತೀಚೆಗೆ ಟ್ಯಾನರಿ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಿ .3 ಲಕ್ಷ ಮೌಲ್ಯದ 3 ಕೇಜಿ ಗಾಂಜಾ ಜಪ್ತಿ ಮಾಡಲಾಯತು. ವಿಚಾರಣೆ ವೇಳೆ ಆತ ನೀಡಿದ ಸುಳಿವು ಆಧರಿಸಿ ಮತ್ತೆ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ಬಂಧಿಸಿ .2.43 ಕೋಟಿ ಮೌಲ್ಯದ ಗಾಂಜಾವನ್ನು ಡಿ.ಜೆ.ಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಆರ್‌.ಪ್ರಕಾಶ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ನಾಗದೇವ್‌ ತಂಡ ಜಪ್ತಿ ಮಾಡಿದೆ ಎಂದು ಪೂರ್ವ ಹೆಚ್ಚುವರಿ ಪೊಲೀಸ್‌ ಆಯುಕ್ತ ಆರ್‌.ಚಂದ್ರಶೇಖರ್‌ ತಿಳಿಸಿದ್ದಾರೆ.

ಅಬ್ದುಲ್‌ ಹಾಗೂ ನವಾಜ್‌ ವೃತ್ತಿಪರ ಪೆಡ್ಲರ್‌ಗಳಾಗಿದ್ದು, ಅಬ್ದುಲ್‌ ರೆಹಮಾನ್‌ ವಿರುದ್ಧ ಬಾಣಸವಾಡಿ, ವೈಯಾಲಿಕಾವಲ್‌ ಹಾಗೂ ಡಿ.ಜೆ.ಹಳ್ಳಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರಿಗೆ ಆಂಧ್ರಪ್ರದೇಶದ ಕುಖ್ಯಾತ ಗಾಂಜಾ ಪೂರೈಕೆದಾರರಾದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಜತೆ ಸಂಪರ್ಕವಿತ್ತು. ಈ ಬಗ್ಗೆ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಲಾಯಿತು. ನಂತರ ಆತನ ನೀಡಿದ ಸುಳಿವಿನಿಂದ ರೆಹಮಾನ್‌ನನ್ನು ಬಂಧಿಸಲಾಯಿತು. ಈ ವೇಳೆ ಫೈರೋಜ್‌ ಹಾಗೂ ಪ್ರಸಾದ್‌ ತಪ್ಪಿಸಿಕೊಂಡಿದ್ದಾರೆ.

ಆಂಧ್ರ ಪೆಡ್ಲರ್‌ಗಳು ರೈಲು, ಬಸ್‌ ಹಾಗೂ ಕಾರುಗಳ ಮೂಲಕ ಬೆಂಗಳೂರಿಗೆ ಗಾಂಜಾ ಸಾಗಿಸಿ ಬಳಿಕ ಸಬ್‌ ಪೆಡ್ಲರ್‌ಗಳ ಮುಖಾಂತರ ಗ್ರಾಹಕರಿಗೆ ತಲುಪಿಸುತ್ತಿದ್ದರು. ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರದಲ್ಲಿ ದುಬಾರಿ ಬೆಲೆ ಮಾರುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ನಗರದಲ್ಲಿ ಚಿಕ್ಕ ಚಿಕ್ಕ ಪೊಟ್ಟಣಗಳಲ್ಲಿ ತುಂಬಿ ಗ್ರಾಹಕರಿಗೆ ಅಬ್ದುಲ್‌ ಹಾಗೂ ನವಾಜ್‌ ಗಾಂಜಾ ಮಾರುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ