ಡಿ.ಜೆ.ಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ, ಅಜ್ಜು, ನವಾಜ್‌ ಅರೆಸ್ಟ್,: 2.47 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಸಿಲಿಕಾನ್​ ಸಿಟಿಯಲ್ಲಿ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಡಿ.ಜೆ.ಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ, ಅಜ್ಜು, ನವಾಜ್‌ ಅರೆಸ್ಟ್,: 2.47 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ಬಂಧಿತ ಆರೋಪಿಗಳು
Follow us
|

Updated on: Mar 05, 2023 | 8:03 AM

ಬೆಂಗಳೂರು(ಮಾ.05): ರಾಜಧಾನಿಯಲ್ಲಿನ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 2.47 ಕೋಟಿ ರೂ. ಮೌಲ್ಯದ ನಾಲ್ಕು ಕ್ವಿಂಟಾಲ್‌ ಗಾಂಜಾ ಜಪ್ತಿ ಮಾಡಿದ್ದಾರೆ. ಲಿಂಗರಾಜಪುರದ ಅಬ್ದುಲ್‌ ರೆಹಮಾನ್‌ ಅಲಿಯಾಸ್‌ ಅಜ್ಜು ಹಾಗೂ ನವಾಜ್‌ ಬಂಧಿತರಾಗಿದ್ದು, ಆರೋಪಿಗಳಿಂದ 2.47 ಕೋಟಿ ಮೌಲ್ಯದ 410 ಕೇಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ವೇಳೆ ತಪ್ಪಿಸಿಕೊಂಡಿರುವ ಪ್ರಮುಖ ಗಾಂಜಾ ಪೂರೈಕೆದಾರರಾದ ಆಂಧ್ರಪ್ರದೇಶ ಮೂಲದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಪತ್ತೆಗೆ ಬಲೆ ಬೀಸಿದ್ದಾರೆ.

ಇತ್ತೀಚೆಗೆ ಟ್ಯಾನರಿ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಿ .3 ಲಕ್ಷ ಮೌಲ್ಯದ 3 ಕೇಜಿ ಗಾಂಜಾ ಜಪ್ತಿ ಮಾಡಲಾಯತು. ವಿಚಾರಣೆ ವೇಳೆ ಆತ ನೀಡಿದ ಸುಳಿವು ಆಧರಿಸಿ ಮತ್ತೆ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ಬಂಧಿಸಿ .2.43 ಕೋಟಿ ಮೌಲ್ಯದ ಗಾಂಜಾವನ್ನು ಡಿ.ಜೆ.ಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಆರ್‌.ಪ್ರಕಾಶ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ನಾಗದೇವ್‌ ತಂಡ ಜಪ್ತಿ ಮಾಡಿದೆ ಎಂದು ಪೂರ್ವ ಹೆಚ್ಚುವರಿ ಪೊಲೀಸ್‌ ಆಯುಕ್ತ ಆರ್‌.ಚಂದ್ರಶೇಖರ್‌ ತಿಳಿಸಿದ್ದಾರೆ.

ಅಬ್ದುಲ್‌ ಹಾಗೂ ನವಾಜ್‌ ವೃತ್ತಿಪರ ಪೆಡ್ಲರ್‌ಗಳಾಗಿದ್ದು, ಅಬ್ದುಲ್‌ ರೆಹಮಾನ್‌ ವಿರುದ್ಧ ಬಾಣಸವಾಡಿ, ವೈಯಾಲಿಕಾವಲ್‌ ಹಾಗೂ ಡಿ.ಜೆ.ಹಳ್ಳಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರಿಗೆ ಆಂಧ್ರಪ್ರದೇಶದ ಕುಖ್ಯಾತ ಗಾಂಜಾ ಪೂರೈಕೆದಾರರಾದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಜತೆ ಸಂಪರ್ಕವಿತ್ತು. ಈ ಬಗ್ಗೆ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಲಾಯಿತು. ನಂತರ ಆತನ ನೀಡಿದ ಸುಳಿವಿನಿಂದ ರೆಹಮಾನ್‌ನನ್ನು ಬಂಧಿಸಲಾಯಿತು. ಈ ವೇಳೆ ಫೈರೋಜ್‌ ಹಾಗೂ ಪ್ರಸಾದ್‌ ತಪ್ಪಿಸಿಕೊಂಡಿದ್ದಾರೆ.

ಆಂಧ್ರ ಪೆಡ್ಲರ್‌ಗಳು ರೈಲು, ಬಸ್‌ ಹಾಗೂ ಕಾರುಗಳ ಮೂಲಕ ಬೆಂಗಳೂರಿಗೆ ಗಾಂಜಾ ಸಾಗಿಸಿ ಬಳಿಕ ಸಬ್‌ ಪೆಡ್ಲರ್‌ಗಳ ಮುಖಾಂತರ ಗ್ರಾಹಕರಿಗೆ ತಲುಪಿಸುತ್ತಿದ್ದರು. ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರದಲ್ಲಿ ದುಬಾರಿ ಬೆಲೆ ಮಾರುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ನಗರದಲ್ಲಿ ಚಿಕ್ಕ ಚಿಕ್ಕ ಪೊಟ್ಟಣಗಳಲ್ಲಿ ತುಂಬಿ ಗ್ರಾಹಕರಿಗೆ ಅಬ್ದುಲ್‌ ಹಾಗೂ ನವಾಜ್‌ ಗಾಂಜಾ ಮಾರುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ