AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ, ಅಜ್ಜು, ನವಾಜ್‌ ಅರೆಸ್ಟ್,: 2.47 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಸಿಲಿಕಾನ್​ ಸಿಟಿಯಲ್ಲಿ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಡಿ.ಜೆ.ಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ, ಅಜ್ಜು, ನವಾಜ್‌ ಅರೆಸ್ಟ್,: 2.47 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ಬಂಧಿತ ಆರೋಪಿಗಳು
ರಮೇಶ್ ಬಿ. ಜವಳಗೇರಾ
|

Updated on: Mar 05, 2023 | 8:03 AM

Share

ಬೆಂಗಳೂರು(ಮಾ.05): ರಾಜಧಾನಿಯಲ್ಲಿನ ಡ್ರಗ್ಸ್‌ ಮಾಫಿಯಾದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 2.47 ಕೋಟಿ ರೂ. ಮೌಲ್ಯದ ನಾಲ್ಕು ಕ್ವಿಂಟಾಲ್‌ ಗಾಂಜಾ ಜಪ್ತಿ ಮಾಡಿದ್ದಾರೆ. ಲಿಂಗರಾಜಪುರದ ಅಬ್ದುಲ್‌ ರೆಹಮಾನ್‌ ಅಲಿಯಾಸ್‌ ಅಜ್ಜು ಹಾಗೂ ನವಾಜ್‌ ಬಂಧಿತರಾಗಿದ್ದು, ಆರೋಪಿಗಳಿಂದ 2.47 ಕೋಟಿ ಮೌಲ್ಯದ 410 ಕೇಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ವೇಳೆ ತಪ್ಪಿಸಿಕೊಂಡಿರುವ ಪ್ರಮುಖ ಗಾಂಜಾ ಪೂರೈಕೆದಾರರಾದ ಆಂಧ್ರಪ್ರದೇಶ ಮೂಲದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಪತ್ತೆಗೆ ಬಲೆ ಬೀಸಿದ್ದಾರೆ.

ಇತ್ತೀಚೆಗೆ ಟ್ಯಾನರಿ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಿ .3 ಲಕ್ಷ ಮೌಲ್ಯದ 3 ಕೇಜಿ ಗಾಂಜಾ ಜಪ್ತಿ ಮಾಡಲಾಯತು. ವಿಚಾರಣೆ ವೇಳೆ ಆತ ನೀಡಿದ ಸುಳಿವು ಆಧರಿಸಿ ಮತ್ತೆ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ಬಂಧಿಸಿ .2.43 ಕೋಟಿ ಮೌಲ್ಯದ ಗಾಂಜಾವನ್ನು ಡಿ.ಜೆ.ಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಆರ್‌.ಪ್ರಕಾಶ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ನಾಗದೇವ್‌ ತಂಡ ಜಪ್ತಿ ಮಾಡಿದೆ ಎಂದು ಪೂರ್ವ ಹೆಚ್ಚುವರಿ ಪೊಲೀಸ್‌ ಆಯುಕ್ತ ಆರ್‌.ಚಂದ್ರಶೇಖರ್‌ ತಿಳಿಸಿದ್ದಾರೆ.

ಅಬ್ದುಲ್‌ ಹಾಗೂ ನವಾಜ್‌ ವೃತ್ತಿಪರ ಪೆಡ್ಲರ್‌ಗಳಾಗಿದ್ದು, ಅಬ್ದುಲ್‌ ರೆಹಮಾನ್‌ ವಿರುದ್ಧ ಬಾಣಸವಾಡಿ, ವೈಯಾಲಿಕಾವಲ್‌ ಹಾಗೂ ಡಿ.ಜೆ.ಹಳ್ಳಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರಿಗೆ ಆಂಧ್ರಪ್ರದೇಶದ ಕುಖ್ಯಾತ ಗಾಂಜಾ ಪೂರೈಕೆದಾರರಾದ ಫೈರೋಜ್‌ ಖಾನ್‌ ಹಾಗೂ ಪ್ರಸಾದ್‌ ಜತೆ ಸಂಪರ್ಕವಿತ್ತು. ಈ ಬಗ್ಗೆ ಮಾಹಿತಿ ಪಡೆದು ನವಾಜ್‌ನನ್ನು ಬಂಧಿಸಲಾಯಿತು. ನಂತರ ಆತನ ನೀಡಿದ ಸುಳಿವಿನಿಂದ ರೆಹಮಾನ್‌ನನ್ನು ಬಂಧಿಸಲಾಯಿತು. ಈ ವೇಳೆ ಫೈರೋಜ್‌ ಹಾಗೂ ಪ್ರಸಾದ್‌ ತಪ್ಪಿಸಿಕೊಂಡಿದ್ದಾರೆ.

ಆಂಧ್ರ ಪೆಡ್ಲರ್‌ಗಳು ರೈಲು, ಬಸ್‌ ಹಾಗೂ ಕಾರುಗಳ ಮೂಲಕ ಬೆಂಗಳೂರಿಗೆ ಗಾಂಜಾ ಸಾಗಿಸಿ ಬಳಿಕ ಸಬ್‌ ಪೆಡ್ಲರ್‌ಗಳ ಮುಖಾಂತರ ಗ್ರಾಹಕರಿಗೆ ತಲುಪಿಸುತ್ತಿದ್ದರು. ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರದಲ್ಲಿ ದುಬಾರಿ ಬೆಲೆ ಮಾರುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ನಗರದಲ್ಲಿ ಚಿಕ್ಕ ಚಿಕ್ಕ ಪೊಟ್ಟಣಗಳಲ್ಲಿ ತುಂಬಿ ಗ್ರಾಹಕರಿಗೆ ಅಬ್ದುಲ್‌ ಹಾಗೂ ನವಾಜ್‌ ಗಾಂಜಾ ಮಾರುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್