AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕ್ಲಿನಿಕ್​ನಲ್ಲಿ ವೈದ್ಯೆ ಮೇಲೆ ಚಾಕುವಿನಿಂದ ಹಲ್ಲೆ

ಪಶ್ಚಿಮ ದೆಹಲಿಯ ಟ್ಯಾಗೋರ್​ ಗಾರ್ಡನ್​ ಎಕ್ಸ್​ಟೆನ್ಷನ್ ಪ್ರದೇಶದಲ್ಲಿರುವ ಕ್ಲಿನಿಕ್​ನಲ್ಲಿ 40 ವರ್ಷದ ವೈದ್ಯೆ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ, ವ್ಯಕ್ತಿಯೊಬ್ಬ ಡಾ ಸಾಂಗಯ್ ಭುಟಿಯಾ ಅವರ ಕ್ಲಿನಿಕ್‌ಗೆ ಬಂದು ಕಟ್ಟಡದ ಮೆಟ್ಟಿಲಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ವಿಚಿತ್ರಾ ವೀರ್ ಹೇಳಿದ್ದಾರೆ.

ದೆಹಲಿ: ಕ್ಲಿನಿಕ್​ನಲ್ಲಿ ವೈದ್ಯೆ ಮೇಲೆ ಚಾಕುವಿನಿಂದ ಹಲ್ಲೆ
ವೈದ್ಯೆImage Credit source: NDTV
ನಯನಾ ರಾಜೀವ್
|

Updated on: Oct 01, 2023 | 10:13 AM

Share

ಪಶ್ಚಿಮ ದೆಹಲಿಯ ಟ್ಯಾಗೋರ್​ ಗಾರ್ಡನ್​ ಎಕ್ಸ್​ಟೆನ್ಷನ್ ಪ್ರದೇಶದಲ್ಲಿರುವ ಕ್ಲಿನಿಕ್​ನಲ್ಲಿ 40 ವರ್ಷದ ವೈದ್ಯೆ ಮೇಲೆ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ, ವ್ಯಕ್ತಿಯೊಬ್ಬ ಡಾ ಸಾಂಗಯ್ ಭುಟಿಯಾ ಅವರ ಕ್ಲಿನಿಕ್‌ಗೆ ಬಂದು ಕಟ್ಟಡದ ಮೆಟ್ಟಿಲಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ವಿಚಿತ್ರಾ ವೀರ್ ಹೇಳಿದ್ದಾರೆ.

ಡಾ ಭುಟಿಯಾ ಅವರು ಕಟ್ಟಡದ ನೆಲ ಮಹಡಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ ಮತ್ತು ಮೇಲಿನ ಮಹಡಿಗಳಲ್ಲಿ ವಾಸವಾಗಿದ್ದಾರೆ ಎಂದು ಅವರು ಹೇಳಿದರು. ಘಟನೆ ಬಳಿಕ ದಾಳಿಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆಗೆ ಅನೇಕ ಇರಿತ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದರು. ಮೇಲ್ನೋಟಕ್ಕೆ, ದರೋಡೆಯ ಯಾವುದೇ ಕೋನ ಪತ್ತೆಯಾಗಿಲ್ಲ ಮತ್ತು ದಾಳಿಕೋರರು ಯಾರೋ ತಿಳಿದಿರುವಂತೆ ಪರಿಚಯವಿರುವಂತೆ ತೋರುತ್ತದೆ, ಆದರೆ, ಇದು ಇನ್ನೂ ದೃಢಪಟ್ಟಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ

ಹಲ್ಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ, ವೈದ್ಯರಿಂದ ಈ ಕುರಿತು ಹೇಳಿಕೆ ಪಡೆಯಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್