AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನ ಡಾಕ್ಟರ್! ಕೊಲೆ ಮಾಡಿ, ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ

ರಾಜಸ್ಥಾನದಲ್ಲಿ ಕುಖ್ಯಾತ ಸರಣಿ ಹಂತಕ 'ಡಾಕ್ಟರ್ ಡೆತ್' (ಸಾವಿನ ಡಾಕ್ಟರ್) ಎಂದೇ ಕರೆಯಲ್ಪಡುವ ಕೊಲೆಗಾರನನ್ನು ಪೊಲೀಸರು ಬಂಧಿಸಿದ್ದಾರೆ. 'ಡಾಕ್ಟರ್ ಡೆತ್' ಎಂದು ಕುಖ್ಯಾತಿ ಪಡೆದಿದ್ದ ಸರಣಿ ಹಂತಕನೊಬ್ಬ ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ. ಇದೀಗ ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾವಿನ ಡಾಕ್ಟರ್! ಕೊಲೆ ಮಾಡಿ, ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ
Crocodile
ಸುಷ್ಮಾ ಚಕ್ರೆ
|

Updated on: May 20, 2025 | 10:51 PM

Share

ನವದೆಹಲಿ, ಮೇ 20: ಸಾಲು ಸಾಲು ಕೊಲೆಗಳನ್ನು ಮಾಡಿ, ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ರಾಜಸ್ಥಾನದ ಈ ಡಾಕ್ಟರ್ ದೆಹಲಿ ಪೊಲೀಸರ ಕೈಗೆ ಸಿಕ್ಕಿದ್ದಾನೆ. “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ಕುಖ್ಯಾತ ಸರಣಿ ಹಂತಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ಆಯುರ್ವೇದ ವೈದ್ಯ ದೇವೇಂದರ್ ಶರ್ಮಾ ಎಂಬ ಸೀರಿಯಲ್ ಕಿಲ್ಲರ್ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದು, ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿರುವ ಹಜಾರ ಕಾಲುವೆಯ ಮೊಸಳೆ ತುಂಬಿದ ನೀರಿನಲ್ಲಿ ತಾನು ಕೊಂದವರ ದೇಹಗಳನ್ನು ಎಸೆಯುತ್ತಿದ್ದ. ಹೀಗಾಗಿ, ಆ ಶವಗಳ ಮಾಹಿತಿ ಪೊಲೀಸರಿಗೆ ಸಿಗುತ್ತಿರಲಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಾಜಸ್ಥಾನದ ದೌಸಾದಲ್ಲಿರುವ ಆಶ್ರಮದಿಂದ ಆತನನ್ನು ಬಂಧಿಸಲಾಯಿತು. ಅಲ್ಲಿ ಆತ ಸುಳ್ಳು ಗುರುತಿನಡಿಯಲ್ಲಿ ಅರ್ಚಕರೆಂದು ಹೇಳಿಕೊಂಡು ಬದುಕುತ್ತಿದ್ದ. ದೇವೇಂದರ್ ಶರ್ಮ ತನ್ನ ಭೀಕರ ವಿಧಾನದ ಮೂಲಕ ಕೊಲೆ ಮಾಡುವ ಮೂಲಕ ಭಯ ಸೃಷ್ಟಿಸಿದ್ದ. ಆಗಾಗ ತಾನು ಕೊಂದವರ ದೇಹಗಳನ್ನು ಕಾಸ್ಗಂಜ್‌ನ ಮೊಸಳೆಗಳಿಂದ ತುಂಬಿದ ಕೆರೆಯಲ್ಲಿ ಎಸೆಯುತ್ತಿದ್ದನು. ಸಾಕ್ಷ್ಯಗಳನ್ನು ನಾಶಮಾಡಲು ಆತ ಈ ವಿಧಾನ ಬಳಸುತ್ತಿದ್ದ. ದೆಹಲಿ, ರಾಜಸ್ಥಾನ ಮತ್ತು ಹರಿಯಾಣದಾದ್ಯಂತ 7 ಪ್ರತ್ಯೇಕ ಕೊಲೆ ಪ್ರಕರಣಗಳಿಗೆ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಅವನು ಗುರುಗ್ರಾಮ್ ನ್ಯಾಯಾಲಯದಿಂದ ಮರಣದಂಡನೆಯನ್ನು ಸಹ ಪಡೆದಿದ್ದ.

ಇದನ್ನೂ ಓದಿ: ಜನರಿಗೆ ತೊಂದರೆಯಾಗದಂತೆ ಪಾಕಿಸ್ತಾನ ಸೇನೆಯನ್ನು ಮಂಡಿಯೂರುವಂತೆ ಮಾಡಿದೆವು; ರಾಜನಾಥ್ ಸಿಂಗ್

ಬಿಎಎಂಎಸ್ ಪದವಿ ಪಡೆದ ಅಪರಾಧಿ ಶರ್ಮ, 2002 ಮತ್ತು 2004ರ ನಡುವೆ ಟ್ಯಾಕ್ಸಿ ಮತ್ತು ಟ್ರಕ್ ಚಾಲಕರ ಕ್ರೂರ ಹತ್ಯೆಗಳಿಗಾಗಿ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ. ಅವನ ಕಾರ್ಯವೈಖರಿಯು ನಕಲಿ ಪ್ರವಾಸ ವಿನಂತಿಗಳೊಂದಿಗೆ ಚಾಲಕರನ್ನು ಆಮಿಷವೊಡ್ಡುವುದು, ಅವರನ್ನು ಕೊಲೆ ಮಾಡುವುದು ಮತ್ತು ನಂತರ ಅವರ ವಾಹನಗಳನ್ನು ಬ್ಲಾಕ್ ಮಾರ್ಕೆಟ್​​ನಲ್ಲಿ ಮಾರಾಟ ಮಾಡುವುದನ್ನು ಒಳಗೊಂಡಿತ್ತು. ದೇವೇಂದರ್ ಶರ್ಮ ಕೇಸ್ ಒಟ್ಟು 27 ಕೊಲೆ, ಅಪಹರಣ ಮತ್ತು ದರೋಡೆ ಪ್ರಕರಣಗಳನ್ನು ಒಳಗೊಂಡಿದೆ. ಸರಣಿ ಹಂತಕನಾಗುವ ಮೊದಲು, ಅವನು 1998ರಿಂದ 2004ರವರೆಗೆ ಅಕ್ರಮ ಮೂತ್ರಪಿಂಡ ಕಸಿ ಜಾಲವನ್ನು ನಡೆಸುತ್ತಿದ್ದನು. 125ಕ್ಕೂ ಹೆಚ್ಚು ಅಕ್ರಮ ಮೂತ್ರಪಿಂಡ ಕಸಿಗಳನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದ.

ಇದನ್ನೂ ಓದಿ: ಬಾಂಗ್ಲಾದೇಶದ ಗಡಿ ದುರ್ಬಲವಲ್ಲ; ಭಾರತದಿಂದ ರಫೇಲ್, ಬ್ರಹ್ಮೋಸ್, ಎಸ್-400 ನಿಯೋಜನೆ

ಶರ್ಮ ಪೆರೋಲ್‌ನಲ್ಲಿದ್ದಾಗ ಪರಾರಿಯಾಗಿರುವುದು ಇದೇ ಮೊದಲಲ್ಲ. 2020ರಲ್ಲಿ 20 ದಿನಗಳ ಪೆರೋಲ್ ನಂತರ ಅವನು ಹಿಂತಿರುಗಿರಲಿಲ್ಲ. ದೆಹಲಿಯಲ್ಲಿ ಬಂಧಿಸಲ್ಪಡುವ ಮೊದಲು 7 ತಿಂಗಳುಗಳ ಕಾಲ ತಲೆಮರೆಸಿಕೊಂಡಿದ್ದ. ಜೂನ್ 2023ರಲ್ಲಿ ಅವನಿಗೆ ಎರಡು ತಿಂಗಳು ಪೆರೋಲ್ ನೀಡಲಾಯಿತು. ಆದರೆ ಆಗಸ್ಟ್ 3, 2023ರ ನಂತರ ನಾಪತ್ತೆಯಾಗಿದ್ದನು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ