AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಗೆ ಸಮರ್ಪಕ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ಮಗ

ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ವ್ಯಕ್ತಿಯೊಬ್ಬ ವೈದ್ಯರಿರಿಗೆ ಚಾಕುವಿನಿಂದ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಏಳು ಬಾರಿ ವೈದ್ಯರಿಗೆ ಇರಿದಿದ್ದಾನೆ, ವೈದ್ಯರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಗಂಭೀರವಾಗಿದೆ. ಪೊಲೀಸರ ಪ್ರಕಾರ ದಾಳಿಕೋರ ವಿಘ್ನೇಶ್ ಮತ್ತು ಆತನ ಸಹಚರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ತಾಯಿಗೆ ಸಮರ್ಪಕ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ಮಗ
ವೈದ್ಯImage Credit source: India TV
Follow us
ನಯನಾ ರಾಜೀವ್
|

Updated on: Nov 13, 2024 | 2:05 PM

ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ವ್ಯಕ್ತಿಯೊಬ್ಬ ವೈದ್ಯರಿಗೆ ಚಾಕುವಿನಿಂದ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಏಳು ಬಾರಿ ವೈದ್ಯರಿಗೆ ಇರಿದಿದ್ದಾನೆ, ವೈದ್ಯರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಗಂಭೀರವಾಗಿದೆ. ಪೊಲೀಸರ ಪ್ರಕಾರ ದಾಳಿಕೋರ ವಿಘ್ನೇಶ್ ಮತ್ತು ಆತನ ಸಹಚರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಘಟನೆ ಏನು? ಪೆರುಂಗಲತ್ತೂರಿನ ವಿಘ್ನೇಶ್ ಎಂದು ಗುರುತಿಸಲಾದ ಶಂಕಿತ ವ್ಯಕ್ತಿ ಹೊರರೋಗಿ ಪ್ರವೇಶ ಪಾಸ್ ತೆಗೆದುಕೊಂಡು ಆಂಕೊಲಾಜಿ ವಿಭಾಗಕ್ಕೆ ಪ್ರವೇಶಿಸಿದ್ದ, ಡಾ ಬಾಲಾಜಿ ಜಗನ್ನಾಥ್ ಅವರು ಕರ್ತವ್ಯದಲ್ಲಿದ್ದರು.

ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಿದೆ, ಆರೋಪಿ ವಿಘ್ನೇಶ್ ಜೊತೆಗೆ ಇನ್ನೂ ಕೆಲವರು ಇದ್ದರು. ವರದಿಗಳ ಪ್ರಕಾರ, ವಿಘ್ನೇಶ್ ಅವರ ತಾಯಿ ಪ್ರೇಮಾ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಫಹೀಮ್ ಉತ್ತರ ಪ್ರದೇಶದಲ್ಲಿ ಬಂಧನ: ಮನೆ ಬುಲ್ಡೋಜರ್​ನಿಂದ ನೆಲಸಮ

ಚಿಕಿತ್ಸೆಯ ಬಗ್ಗೆ ವೈದ್ಯರೊಂದಿಗೆ ತೀವ್ರ ವಾಗ್ವಾದ ನಡೆಸಿದರು ಮತ್ತು ಪ್ರೇಮಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆರೋಪಿಸಿದರು. ಕೆಲ ಕಾಲ ವಾಗ್ವಾದದ ನಂತರ ಕೋಪಗೊಂಡ ವಿಘ್ನೇಶ್ ಚಾಕು ತೆಗೆದು ವೈದ್ಯರ ಕುತ್ತಿಗೆಗೆ ಇರಿದಿದ್ದಾನೆ. ಅಲ್ಲಿದ್ದ ಜನರು ಕೂಡಲೇ ವೈದ್ಯರಿಗೆ ಸಹಾಯ ಮಾಡಲು ಓಡಿ ಬಂದರು, ಅವರನ್ನು ಐಸಿಯುಗೆ ಕರೆದೊಯ್ದರು. ದಾಳಿಯ ನಂತರ ಆರೋಪಿ ಪರಾರಿಯಾಗಲು ಯತ್ನಿಸಿದ್ದು ಭದ್ರತಾ ಸಿಬ್ಬಂದಿ ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಲೈಂಜರ್ ಸೆಂಟಿನರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಆಘಾತಕಾರಿ ಸಂಗತಿಯಾಗಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಅಗತ್ಯ ಚಿಕಿತ್ಸೆಗೆ ಆದೇಶಿಸಿದ್ದೇನೆ ಎಂದರು.

ನಿಸ್ವಾರ್ಥ ಸೇವೆ ಮಾಡುವ ನಮ್ಮ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ