AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಗೆ ಸಮರ್ಪಕ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ಮಗ

ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ವ್ಯಕ್ತಿಯೊಬ್ಬ ವೈದ್ಯರಿರಿಗೆ ಚಾಕುವಿನಿಂದ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಏಳು ಬಾರಿ ವೈದ್ಯರಿಗೆ ಇರಿದಿದ್ದಾನೆ, ವೈದ್ಯರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಗಂಭೀರವಾಗಿದೆ. ಪೊಲೀಸರ ಪ್ರಕಾರ ದಾಳಿಕೋರ ವಿಘ್ನೇಶ್ ಮತ್ತು ಆತನ ಸಹಚರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ತಾಯಿಗೆ ಸಮರ್ಪಕ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ಮಗ
ವೈದ್ಯImage Credit source: India TV
ನಯನಾ ರಾಜೀವ್
|

Updated on: Nov 13, 2024 | 2:05 PM

Share

ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ವ್ಯಕ್ತಿಯೊಬ್ಬ ವೈದ್ಯರಿಗೆ ಚಾಕುವಿನಿಂದ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಏಳು ಬಾರಿ ವೈದ್ಯರಿಗೆ ಇರಿದಿದ್ದಾನೆ, ವೈದ್ಯರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಗಂಭೀರವಾಗಿದೆ. ಪೊಲೀಸರ ಪ್ರಕಾರ ದಾಳಿಕೋರ ವಿಘ್ನೇಶ್ ಮತ್ತು ಆತನ ಸಹಚರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಘಟನೆ ಏನು? ಪೆರುಂಗಲತ್ತೂರಿನ ವಿಘ್ನೇಶ್ ಎಂದು ಗುರುತಿಸಲಾದ ಶಂಕಿತ ವ್ಯಕ್ತಿ ಹೊರರೋಗಿ ಪ್ರವೇಶ ಪಾಸ್ ತೆಗೆದುಕೊಂಡು ಆಂಕೊಲಾಜಿ ವಿಭಾಗಕ್ಕೆ ಪ್ರವೇಶಿಸಿದ್ದ, ಡಾ ಬಾಲಾಜಿ ಜಗನ್ನಾಥ್ ಅವರು ಕರ್ತವ್ಯದಲ್ಲಿದ್ದರು.

ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಿದೆ, ಆರೋಪಿ ವಿಘ್ನೇಶ್ ಜೊತೆಗೆ ಇನ್ನೂ ಕೆಲವರು ಇದ್ದರು. ವರದಿಗಳ ಪ್ರಕಾರ, ವಿಘ್ನೇಶ್ ಅವರ ತಾಯಿ ಪ್ರೇಮಾ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಫಹೀಮ್ ಉತ್ತರ ಪ್ರದೇಶದಲ್ಲಿ ಬಂಧನ: ಮನೆ ಬುಲ್ಡೋಜರ್​ನಿಂದ ನೆಲಸಮ

ಚಿಕಿತ್ಸೆಯ ಬಗ್ಗೆ ವೈದ್ಯರೊಂದಿಗೆ ತೀವ್ರ ವಾಗ್ವಾದ ನಡೆಸಿದರು ಮತ್ತು ಪ್ರೇಮಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆರೋಪಿಸಿದರು. ಕೆಲ ಕಾಲ ವಾಗ್ವಾದದ ನಂತರ ಕೋಪಗೊಂಡ ವಿಘ್ನೇಶ್ ಚಾಕು ತೆಗೆದು ವೈದ್ಯರ ಕುತ್ತಿಗೆಗೆ ಇರಿದಿದ್ದಾನೆ. ಅಲ್ಲಿದ್ದ ಜನರು ಕೂಡಲೇ ವೈದ್ಯರಿಗೆ ಸಹಾಯ ಮಾಡಲು ಓಡಿ ಬಂದರು, ಅವರನ್ನು ಐಸಿಯುಗೆ ಕರೆದೊಯ್ದರು. ದಾಳಿಯ ನಂತರ ಆರೋಪಿ ಪರಾರಿಯಾಗಲು ಯತ್ನಿಸಿದ್ದು ಭದ್ರತಾ ಸಿಬ್ಬಂದಿ ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಲೈಂಜರ್ ಸೆಂಟಿನರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಆಘಾತಕಾರಿ ಸಂಗತಿಯಾಗಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಅಗತ್ಯ ಚಿಕಿತ್ಸೆಗೆ ಆದೇಶಿಸಿದ್ದೇನೆ ಎಂದರು.

ನಿಸ್ವಾರ್ಥ ಸೇವೆ ಮಾಡುವ ನಮ್ಮ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್