AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗ್ತಿದ್ದಾನೆಂದು ಅಣ್ಣನನ್ನೇ ಕೊಂದು ಪರಾರಿಯಾದ!

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಮಂಕಳಾಲ ಗ್ರಾಮದ ಈ ಗುಡಿಸಲಿನಲ್ಲಿ ಗಂಗರಾಜು ಮತ್ತು ಭಾಗ್ಯಮ್ಮ ಅನ್ನೂ ದಂಪತಿ ಜೀವನ ಕಟ್ಟಿಕೊಂಡಿದ್ರು. ಆದ್ರೆ ಗಂಡನ ಜೊತೆ ಸಂಸಾರ ನಡೆಸುತ್ತಿದ್ದ ಭಾಗ್ಯಮ್ಮಳಿಗೆ ಮೈದ ರವಿ ಮೇಲೆ ಮನಸ್ಸಾಗಿದ್ದು ಕಳೆದ ಎರಡು ವರ್ಷದಿಂದೆ ಮೈದನ ಜೊತೆ ಗಂಡ ಹಾಗೂ ಮನೆಯನ್ನ ಬಿಟ್ಟು ಹೋಗಿದ್ಲು.

ದೊಡ್ಡಬಳ್ಳಾಪುರ: ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗ್ತಿದ್ದಾನೆಂದು ಅಣ್ಣನನ್ನೇ ಕೊಂದು ಪರಾರಿಯಾದ!
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನವೀನ್ ಕುಮಾರ್ ಟಿ
| Edited By: |

Updated on: Oct 24, 2023 | 6:55 PM

Share

ದೇವನಹಳ್ಳಿ, ಅಕ್ಟೋಬರ್ 24: ಅದು ಪುಟ್ಟ ಗುಡಿಸಲಿನಲ್ಲಿ ವಾಸ ಮಾಡುತ್ತಾ ಕೂಲಿ ಮಾಡಿಕೊಂಡೇ ನೆಮ್ಮದಿಯ ಜೀವನ ನಡೆಸುತ್ತಿದ್ದ ಕುಟುಂಬ. ಆದರೆ ಆ ಕುಟುಂಬದ ನೆಮ್ಮದಿಗೆ ತಮ್ಮನೇ ವಿಲನ್ ಆಗಿದ್ದು, ಅತ್ತಿಗೆಯನ್ನೇ ಬೇರೆಡೆಗೆ ಕರೆದುಕೊಂಡು ಹೋಗಿದ್ದ. ಜೊತೆಗೆ ಇತ್ತೀಚೆಗಷ್ಟೆ ಅತ್ತೆ ಅಣ್ಣನ ಬಳಿಗೆ ಬಂದಿದಕ್ಕೆ ಸಹೋದರ ರೊಚಿಗೆದ್ದಿದ್ದು ಸಹೋದರ ಅನ್ನೋದನ್ನೂ ನೋಡದೆ ಒಡ ಹುಟ್ಟಿದವನನ್ನೆ ಕೊಲೆ ಮಾಡಿದ್ದಾನೆ. ಈ ಘಟನೆ ನಡೆದಿದ್ದು ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಮಂಕಳಾಲದಲ್ಲಿ.

ಸಣ್ಣ ಗುಡಿಸಲು ಒಂದೆ ಕಡೆ ಅಡುಗೆ ಮನೆ ಬೆಡ್ ರೂಂ. ಎಲ್ಲಾ ಆದ್ರು ಸ್ವಾಭಿಮಾನದಿಂದ ಇದೇ ಗುಡಿಸಿಲಿನಲ್ಲಿ ಗಂಗರಾಜು ಅನ್ನೂ ವ್ಯಕ್ತಿ ಸಂಸಾರ ನಡೆಸುತ್ತಿದ್ದ. ಜೊತೆಗೆ ಕೆಲಸ ಮುಗಿಸಿ ಸಂಜೆ ಮನೆಗೆ ಬರ್ತಿದ್ದ ಗಂಗರಾಜು ನೆನ್ನೆ ರಾತ್ರಿ ಮಲಗಿದ್ದ ಕಡೆಯೇ ನೆತ್ತರು ಹರಿದು ಭೀಕರವಾಗಿ ಕೊಲೆಯಾಗಿ ಹೋಗಿದ್ದಾನೆ. ಮನೆ ಮಗನ ಕೊಲೆ ಕಂಡು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಮಂಕಳಾಲ ಗ್ರಾಮದ ಈ ಗುಡಿಸಲಿನಲ್ಲಿ ಗಂಗರಾಜು ಮತ್ತು ಭಾಗ್ಯಮ್ಮ ಅನ್ನೂ ದಂಪತಿ ಜೀವನ ಕಟ್ಟಿಕೊಂಡಿದ್ರು. ಆದ್ರೆ ಗಂಡನ ಜೊತೆ ಸಂಸಾರ ನಡೆಸುತ್ತಿದ್ದ ಭಾಗ್ಯಮ್ಮಳಿಗೆ ಮೈದ ರವಿ ಮೇಲೆ ಮನಸ್ಸಾಗಿದ್ದು ಕಳೆದ ಎರಡು ವರ್ಷದಿಂದೆ ಮೈದನ ಜೊತೆ ಗಂಡ ಹಾಗೂ ಮನೆಯನ್ನ ಬಿಟ್ಟು ಹೋಗಿದ್ಲು. ಹೀಗಾಗಿ ಪತ್ನಿ ಹೋದ್ರು ಸ್ವಾಭಿಮಾನದಿಂದ ಕೂಲಿ ಕೆಲಸ ಮಾಡಿಕೊಂಡು ಗಂಗರಾಜು ವಾಸ ಮಾಡ್ತಿದ್ದು, ಕಳೆದ ಕೆಲ ದಿನಗಳಿಂದೆ ಪತ್ನಿ ಭಾಗ್ಯಮ್ಮ ಗಂಡ ಗಂಗರಾಜು ಮನೆಗೆ ವಾಪಸ್ ಬಂದಿದ್ದಾಳೆ. ಇನ್ನು ಮನೆಗೆ ಬಂದಿದ್ದ ಪತ್ನಿ ಹಾಗೂ ಸಹೋದರ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಅಂತ ಒಡ ಹುಟ್ಟಿದ ಅಣ್ಣನನ್ನೇ ಕಲ್ಲು ಮತ್ತು ಮಚ್ಚಿನಿಂದ ಹೊಡೆದು ಕೊಲೆ ಮಾಡಿ ನಂತರ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಪ್ರತಿನಿತ್ಯ ಕೆಲಸಕ್ಕೆ ಹೋಗಿ ಗುಡಿಸಲಿಗೆ ವಾಪಸ್ ಆಗ್ತಿದ್ದ ತಾಯಿ ಜಯಮ್ಮ ಎಂದಿನಂತೆ ನೆನ್ನೆ ಸಂಜೆಯು ಮನೆಗೆ ಬಂದು ನೋಡಿದ್ದಾಳೆ. ಈ ವೇಳೆ ಮಗ ಮಲಗಿದ್ದಾನೆ ಅಂತ ಎಬ್ಬಿಸಲು ನೋಡಿದಾಗ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿದ್ದು ಕೂಡಲೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ತಮ್ಮ ಹಾಗೂ ಮೃತನ ಪತ್ನಿಯೇ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದೆ ಅಂತ ಕೊಲೆ ಮಾಡಿ ಎಸ್ಕೇಪ್ ಆಗಿರುವ ಶಂಕೆಯನ್ನ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಹೊರವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಒಟ್ಟಾರೆ ಅಣ್ಣನ ಪತ್ನಿಯನ್ನೇ ಅಕ್ರಮ ಸಂಬಂಧದ ಜೊತೆ ಕರೆದೋಗಿದ್ದು ಅಲ್ಲದೆ ಸಂಬಂಧಕ್ಕೆ ಅಣ್ಣ ಅಡ್ಡಿಯಾಗಿದ್ದಾನೆ ಅಂತ ಸ್ವಂತ ಒಡಹುಟ್ಟಿದ ಅಣ್ಣನನ್ನೆ ಕೊಲೆ ಮಾಡಿದ್ದು ಮಾತ್ರ ನಿಜಕ್ಕೂ ದುರಂತ. ಇನ್ನೂ ತಲೆಮರೆಸಿಕೊಂಡಿರುವ ಆರೋಫಿಗಳ ಬಂಧನಕ್ಕೆ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದು ಆರೋಫಿಗಳ ಬಂಧನದ ನಂತರ ಕೊಲೆ ಹಿಂದಿನ ಮತ್ತಷ್ಟು ರಹಸ್ಯ ಬೆಳಕಿಗೆ ಬರಬೇಕಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ