ಹೋಳಿ ಆಡಲು ಹೋಗಿದ್ದ ವ್ಯಕ್ತಿ ನಿಗೂಢ ಸಾವು; ಮ್ಯಾನೇಜರ್ ಸಾವಿನ ಸುತ್ತಾ ಅನುಮಾನದ ಹುತ್ತಾ

ಆತ ಪಧವೀಧರ, ಕೊರೊನಾ ಸಂಧರ್ಭದಲ್ಲಿ ಕೆಲಸ ಕಳೆದುಕೊಂಡು ಗ್ರಾಮಕ್ಕೆ ಬಂದಿದ್ದು, ತೋಟವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡು ಗ್ರಾಮದಲ್ಲೆ ಉಳಿದುಕೊಂಡಿದ್ದ. ಆದ್ರೆ, ಚೆನ್ನಾಗಿದ್ದ ವ್ಯಕ್ತಿ ನಿನ್ನೆ(ಮಾ.25) ಹೋಳಿ ಆಡೋಕ್ಕೆಂದು ಹೋದವರು ನಿಗೂಢವಾಗಿ ನಾಪತ್ತೆಯಾಗಿ ಶವವಾಗಿ ಸಿಕ್ಕಿದ್ದಾನೆ. ಇದೀಗ ಸಾವಿನ ಸುತ್ತಾ ಹಲವು ಅನುಮಾನಗಳು ಹುಟ್ಟಿವೆ. ಹಾಕಿವೆ.

ಹೋಳಿ ಆಡಲು ಹೋಗಿದ್ದ ವ್ಯಕ್ತಿ ನಿಗೂಢ ಸಾವು; ಮ್ಯಾನೇಜರ್ ಸಾವಿನ ಸುತ್ತಾ ಅನುಮಾನದ ಹುತ್ತಾ
ಮೃತ ವ್ಯಕ್ತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 26, 2024 | 10:00 PM

ಬೆಂಗಳೂರು ಗ್ರಾಮಾಂತರ, ಮಾ.26: ನಿನ್ನೆ(ಮಾ.25) ದೇಶದಲ್ಲೆಡೆ ಹೋಳಿಯ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪರಸ್ಪರ ಬಣ್ಣ ಹಾಕಿಕೊಳ್ಳುವ ಮೂಲಕ ಹೋಳಿ(Holi) ಆಚರಣೆ ಮಾಡಿದ್ದಾರೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ(Bangalore Rural)ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ಮ್ಯಾನೇಜರ್ ಸುನೀಲ್ ಮತ್ತು ಬಿಹಾರ ಮೂಲದ ಕಾರ್ಮಿಕರು ಹೋಳಿ ಆಡಿ ಸಂಭ್ರಮಿಸಿದ್ದರು. ಆದ್ರೆ, ಹೋಳಿ ಆಡಿದ ನಂತರ ತೋಟದ ಮ್ಯಾನೇಜರ್ ಸುನೀಲ್ ಮನೆಯತ್ತ ತೆರಳುವುದಾಗಿ ಹೇಳಿದ್ದು, ಮಧ್ಯರಾತ್ರಿ ಆದರೂ ಮನೆಗೆ ಹೋಗಿಲ್ಲ. ಹೀಗಾಗಿ ಸುನೀಲ್ ಎಷ್ಟೋತ್ತಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಶಾಕ್ ಆಗಿ, ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದ್ರೆ, ಎಲ್ಲೂ ಕಾಣದಿದ್ದಾಗ ಬೆಳಗ್ಗೆ ತೋಟದ ಕೃಷಿ ಹೊಂಡದ ದಡದ ಮೇಲೆ ಯುವಕನ ಬಟ್ಟೆ ಚಪ್ಪಲಿ ಕಾಣಿಸಿದ್ದು, ಅನುಮಾನದ ಮೇಲೆ ಕೃಷಿ ಹೊಂಡದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯುವಕನ ಮೃತದೇಹ ಕೃಷಿ ಹೊಂಡದಲ್ಲಿ ಸಿಕ್ಕಿದ್ದು, ಕುಟುಂಬಸ್ಥರ ಜೊತೆಗೆ ಗ್ರಾಮಸ್ಥರು ಸಹ ಒಂದು ಕ್ಷಣ ಶಾಕ್ ಆಗಿದ್ದಾರೆ.

ಮೃತ ಯುವಕ ಸುನೀಲ್ ಈ ಹಿಂದೆಯೇ ಈಜು ಸಹ ಕಲಿತಿದ್ದು, ಗ್ರಾಮದಲ್ಲಿ ಎಲ್ಲರ ಜೊತೆ ಸ್ನೇಹ ಸೌಹರ್ದತೆಯಿಂದ ಹೊಂದಿಕೊಂಡು ಜೀವನ ನಡೆಸುತ್ತಿದ್ದನಂತೆ. ಜೊತೆಗೆ ಕೃಷಿ ಹೊಂಡದಲ್ಲಿ ಸಿಕ್ಕ ಮೃತದೇಹದ ಮೇಲೆ ಕಲೆ ಹಾಗೂ ಮುಖದ ತುಂಬಾ ಗಾಯದ ಗುರುತುಗಳು ಪತ್ತೆಯಾಗಿದ್ದು ಇದು ಆಕಸ್ಮಿಕ ಸಾವಲ್ಲ ಯಾರೋ ದುಷ್ಕ್ರರ್ಮಿಗಳು ಕೊಲೆ ಮಾಡಿ ನೀರಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ನಿನ್ನೆ ಹೋಳಿ ಆಟ ಆಡಿದವನು ನೇರವಾಗಿ ಮನೆಗೆ ಬರಬೇಕಿತ್ತು. ಆದ್ರೆ, ತೋಟದಲ್ಲೆ ಶವವಾಗಿ ಸಿಕ್ಕಿದ್ದು. ಈ ಹಿಂದೆ ಕೆಲಸ ಮಾಡ್ತಿದ್ದ ಮ್ಯಾನೇಜರ್​ ಅಥವಾ ಬಿಹಾರ ಮೂಲದ ಕೂಲಿ ಕಾರ್ಮಿಕರು ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಆಕಸ್ಮಿಕ ಅವಘಡಕ್ಕೆ ವೃದ್ದನನ್ನು ಬೆಂಕಿಯಲ್ಲಿ ಹಾಕಿ ಕೊಲೆಗೆ ಯತ್ನ; ಮೂವರ ಬಂಧನ

ಒಟ್ಟಾರೆ ಗ್ರಾಮದಲ್ಲಿ ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಇನ್ನು ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪೊಲೀಸರ ತನಿಖೆಯ ನಂತರ ಕೊಲೆಯೋ ಆಕಸ್ಮಿಕ ಸಾವೋ ಎನ್ನುವುದು ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Tue, 26 March 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ