ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆ

ಮಂಡ್ಯ: ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಮಹದೇಶ್ವರಪುರದಲ್ಲಿ ನಡೆದಿದೆ. ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಎಂಬುವವರಿಗೆ ಇದೇ ಗ್ರಾಮದ ರೌಡಿ ಶೀಟರ್ ಕೃಷ್ಣ ಹಾಗೂ ಸಹಚರರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕೊಲೆಗೆ ಪ್ರೇಮ‌ ಪ್ರಕರಣ ಹಾಗೂ ಹಣಕಾಸು ವ್ಯವಹಾರ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಕೋಳಿ ಸುರೇಶ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದ. ಹಾಗೂ ನಾಗರಾಜು ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. […]

ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆ
ಸಾಧು ಶ್ರೀನಾಥ್​

Updated on: Feb 22, 2020 | 11:17 AM

ಮಂಡ್ಯ: ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಮಹದೇಶ್ವರಪುರದಲ್ಲಿ ನಡೆದಿದೆ. ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಎಂಬುವವರಿಗೆ ಇದೇ ಗ್ರಾಮದ ರೌಡಿ ಶೀಟರ್ ಕೃಷ್ಣ ಹಾಗೂ ಸಹಚರರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಕೊಲೆಗೆ ಪ್ರೇಮ‌ ಪ್ರಕರಣ ಹಾಗೂ ಹಣಕಾಸು ವ್ಯವಹಾರ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಕೋಳಿ ಸುರೇಶ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದ. ಹಾಗೂ ನಾಗರಾಜು ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಪ್ರಕರಣ ಸಂಬಂಧಿಸಿ ರೌಡಿ ಶೀಟರ್ ಕೃಷ್ಣನನ್ನು ಪಾಂಡವಪುರ ಪೊಲೀಸರು ಬಂಧಿಸಿದ್ದಾರೆ.

Published On - 11:15 am, Sat, 22 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us