ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿಯನ್ನು ಹೊಡೆದು ಹತ್ಯೆ ಮಾಡಿದ ಪತಿ

ವರದಕ್ಷಿಣೆ ಕೊಡಲಿಲ್ಲ ಎಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆಯಾಗಿ 2 ವರ್ಷಗಳು ಕಳೆದಿದ್ದವು. ವರದಕ್ಷಿಣೆಗಾಗಿ ಸದಾ ಪೀಡಿಸುತ್ತಿದ್ದ, ರಕ್ಷಾ ಬಂಧನವೆಂದು ತವರಿಗೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದು ಹತ್ಯೆ ಮಾಡಿದ್ದಾನೆ.

ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿಯನ್ನು ಹೊಡೆದು ಹತ್ಯೆ ಮಾಡಿದ ಪತಿ
ಸಂಬಂಧ
Image Credit source: Medium.com

Updated on: Sep 16, 2024 | 2:01 PM

ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಪೋಷಕರ ಮನೆಯಿಂದ ಕರೆತಂದು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಆಮ್ರೋಹಾದಲ್ಲಿ ನಡೆದಿದೆ.
ಆತ ಟಿವಿಎಸ್ ಅಪಾಚೆ ಹಾಗೂ 3 ಲಕ್ಷ ರೂ. ನಗದು ನೀಡುವಂತೆ ಬೇಡಿಕೆ ಇಟ್ಟಿದ್ದ, ಹೆಣ್ಣಿನ ಮನೆಯವರು ಇದೆಲ್ಲವನ್ನೂ ಕೊಡಲು ವಿಫಲವಾದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.

ಬೈಖೇಡ ಗ್ರಾಮದ ಸುಂದರ್ ಎಂಬಾತ ಎರಡು ವರ್ಷಗಳ ಹಿಂದೆ ಮೀನಾ ಎಂಬಾಕೆಯನ್ನು ಮದುವೆಯಾಗಿದ್ದು, ಅಂದಿನಿಂದ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದ. ಈ ವಿಚಾರವಾಗಿ ಆತ ಕಿರುಕುಳ ನೀಡುತ್ತಿದ್ದ ಎಂದು ತಂದೆಗೆ ತಿಳಿಸಿದ್ದಳು.

ರಕ್ಷಾಬಂಧನದಿಂದ ಮೀನಾ ಸೋಹರ್ಕಾದಲ್ಲಿರುವ ತನ್ನ ತಂದೆಯ ಮನೆಯಲ್ಲಿಯೇ ಇದ್ದಳು. ಸುಂದರ್ ಪ್ರತಿದಿನ ಅವಳನ್ನು ಭೇಟಿಯಾಗುತ್ತಿದ್ದ. ಭಾನುವಾರ ರಾತ್ರಿಯೂ ಅವರನ್ನು ಭೇಟಿ ಮಾಡಿ ತನ್ನ ಮನೆಗೆ ಕರೆತಂದಿದ್ದಾನೆ.

ಮತ್ತಷ್ಟು ಓದಿ: ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ವೈದ್ಯನ ಖಾಸಗಿ ಅಂಗವನ್ನೇ ಕತ್ತರಿಸಿದ ನರ್ಸ್​

ವರದಕ್ಷಿಣೆ ಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಕೆಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯರು ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಮಹಿಳೆಯ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಬಂದು ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದರು.

ನಂತರ ಆಕೆಯ ತಂದೆ ವಿಜಯ್ ಖಡಕ್ ಬನ್ಶಿ ಪತಿ, ಆತನ ತಾಯಿ, ಸಹೋದರಿ ಮತ್ತು ಇತರ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಆಕೆಯ ಕುಟುಂಬದವರ ದೂರಿನ ಆಧಾರದ ಮೇಲೆ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಾಗಿ ಶೋಧ ನಡೆಯುತ್ತಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us