AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ A6 ನಾಪತ್ತೆ, A5ಗೆ ಕೊರೊನಾ!

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನ ಪಡೆಯುತ್ತಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿತ್ತು. ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು! ಈ ನಡುವೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ತೆರಳಿದ CCB ತಂಡಕ್ಕೆ ಶಾಕ್​ ಎದುರಾಯಿತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. […]

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ A6 ನಾಪತ್ತೆ, A5ಗೆ ಕೊರೊನಾ!
ಆದಿತ್ಯ ಆಳ್ವಾ
KUSHAL V
|

Updated on:Sep 05, 2020 | 5:17 PM

Share

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನ ಪಡೆಯುತ್ತಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿತ್ತು.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು!

ಈ ನಡುವೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ತೆರಳಿದ CCB ತಂಡಕ್ಕೆ ಶಾಕ್​ ಎದುರಾಯಿತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ದರಿಂದ, ಆದಿತ್ಯಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೂ CCB ಅಧಿಕಾರಿಗಳು ಬಲೆ‌ ಬೀಸಿದ್ದಾರೆ.

A5 ವೈಭವ್​ ಜೈನ್​ಗೆ ಕೊರೊನಾ ಪಾಸಿಟಿವ್​ ಪ್ರಕರಣದ ಮತ್ತೊಬ್ಬ ಆರೋಪಿಗೆ ಕೊರೊನಾ ಸೋಂಕು ತಗಲಿದೆ ಎಂದು ಟಿವಿ9ಗೆ CCB ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. FIRನಲ್ಲಿ A5 ಆರೋಪಿ ಎಂದು ಉಲ್ಲೇಖಿಸಲಾಗಿರುವ ವೈಭವ್​ ಜೈನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವೈಭವ್ ಜೈನ್ ಬಂಧನಕ್ಕೆ ತೆರಳಿದ್ದ ಸಿಸಿಬಿ ಪೊಲೀಸರ ತಂಡಕ್ಕೆ ಆತನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮಾಹಿತಿ ದೊರೆತಿದೆ. ಹೀಗಾಗಿ, ವೈಭವ್ ಜೈನ್ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಆತನನ್ನ CCB ಅಧಿಕಾರಿಗಳು ಬಂಧಿಸಲಿದ್ದಾರೆ.

Published On - 5:00 pm, Sat, 5 September 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ