AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ

ಇತ್ತೀಚೆಗಷ್ಟೇ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಆರೋಪಿ ಜೊತೆ ಸ್ಯಾಂಡಲ್​ವುಡ್ ನಟ-ನಟಿಯರಿಗೆ ನಂಟು ಹೊಂದಿರುವ ವಿಚಾರ ಬಯಲಿಗೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ
ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ (ಸಾಂದರ್ಭಿಕ ಚಿತ್ರ)
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on: Dec 17, 2023 | 9:47 AM

ಬೆಂಗಳೂರು, ಡಿ.17: ಎರಡು ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ (Drugs Case) ಸ್ಯಾಂಡಲ್​ವುಡ್ (Sandalwood) ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ (CCB) ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಮತ್ತೆ ಕನ್ನಡದ ಕಿರುತೆರೆ, ಚಲನಚಿತ್ರ ನಟ ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ ನಂಟು ಹೊಂದಿರುವುದು ಸಿಸಿಬಿ ತನಿಖೆ ವೇಳೆ ಬಯಲಿಗೆ ಬಂದಿದೆ.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ತಿಳಿದುಬಂದಿದೆ. ಅದರಂತೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು, ಇತ್ತೀಚೆಗೆ 21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿ ಲಿಯೋನಾರ್ಡ್ ಎಂಬಾತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನಶೆ ಏರಿಸಲು 100 ಕೋಟಿ ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಸಪ್ಲೈ! ಸ್ಪೆಷಲ್ ಡ್ರೈವ್​​ಗೆ ಸಜ್ಜಾದ ನಗರ ಪೊಲೀಸರು

ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ನಟ, ನಟಿಯರ ನಂಟು ಬಯಲಿಗೆ ಬಂದಿದೆ. ಆದರೆ, ಡ್ರಗ್ಸ್ ಸೇವನೆ ಮಾಡುತ್ತಿರುವವರ ಪತ್ತೆಗೆ ಮುಂದಾಗದ ಪೊಲೀಸರು, ಬುಡದಿಂದಲೇ ಮಾದಕ ಜಾಲವನ್ನು ಕಿತ್ತು ಹಾಕುವ ಪ್ರಯತ್ನದಲ್ಲಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್