AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯನ ಕಾರು ಗುದ್ದಿದ ರಭಸಕ್ಕೆ 200 ಮೀಟರ್ ದೂರ ಬಿದ್ದ ತಾಯಿ-ಮಗ

ಶಿವಮೊಗ್ಗದಲ್ಲಿ ಮದ್ಯಪಾನ ಮಾಡಿದ ದಂತ ವೈದ್ಯರು ಕಾರು ಚಾಲನೆ ಮಾಡುವಾಗ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದ ತಾಯಿ ಮತ್ತು ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿನೋಬ ನಗರದಲ್ಲಿ ಘಟನೆ ನಡೆದಿದೆ. ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಚಿತ್ರದುರ್ಗದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವಂತಹ ಘಟನೆ ನಡೆದಿದೆ.

ವೈದ್ಯನ ಕಾರು ಗುದ್ದಿದ ರಭಸಕ್ಕೆ 200 ಮೀಟರ್ ದೂರ ಬಿದ್ದ ತಾಯಿ-ಮಗ
ವೈದ್ಯನ ಕಾರು ಗುದ್ದಿದ ರಭಸಕ್ಕೆ 200 ಮೀಟರ್ ದೂರ ಬಿದ್ದ ತಾಯಿ-ಮಗ
Basavaraj Yaraganavi
| Edited By: |

Updated on: Nov 10, 2024 | 5:46 PM

Share

ಶಿವಮೊಗ್ಗ, ನವೆಂಬರ್​ 10: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ವಿನೋಬ ನಗರದ ಸವಿ ಬೇಕರಿ ಬಳಿ ನಡೆದಿದೆ. ತಾಯಿ ಉಮಾ ಹಾಗೂ ಮಗ ಶ್ರೇಯಸ್‌ಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ದಂತ ವೈದ್ಯರ ಕ್ರಿಕೆಟ್ ಪಂದ್ಯಾವಳಿ ನಡೆದಿತ್ತು. ಪಂದ್ಯಾವಳಿಯಲ್ಲಿ ರಾಜ್ಯಾದ್ಯಂತ 18 ದಂತ ವೈದ್ಯರ ತಂಡಗಳು ಭಾಗಿಯಾಗಿದ್ದರು. ಕ್ರಿಕೆಟ್ ಪಂದ್ಯಾವಳಿ ಬಳಿಕ ಕಾಸ್ಮೋ ಕ್ಲಬ್‌ನಲ್ಲಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿ ಮುಗಿಸಿ ತೆರಳುವಾಗ ಮದ್ಯದ ಅಮಲಿನಲ್ಲಿ ಕಾರು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಉಡುಪಿ: ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಡಾ.ಅಲ್ವಿನ್ ಅಂಥೋನಿ ಸವಿ ಬೇಕರಿ ಎದುರು ಅಪಘಾತವೆಸಗಿ ಪರಾರಿಯಾಗುತ್ತಿದ್ದು, ಸ್ಥಳೀಯರು ಅಡ್ಡ ಹಾಕಿ ನಿಲ್ಲಿಸಿದ್ದಾರೆ. ಬಳಿಕ ಕಾರಿನಲ್ಲಿ ಗಾಯಾಳುಗಳನ್ನು ಡಾ.ಅಲ್ವಿನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಖಾಸಗಿ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ದಂಪತಿ ಅರೆಸ್ಟ್

ಚಾಲಕನ ಅಜಾಗರೂಕತೆಯಿಂದ ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ಗಾಯಾಳುಗಳಿಗೆ ಚಳ್ಳಕೆರೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರೇಯಸಿ ಮನೆಗೆ ಬಂದಿದ್ದ ಯುವಕನನ್ನ ಕಟ್ಟಿಹಾಕಿ ಹಲ್ಲೆ

ಮಂಗಳೂರು: ಪ್ರೇಯಸಿ ಮನೆಗೆ ಬಂದಿದ್ದ ಯುವಕನನ್ನ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ 2 ದಿನದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಬೆಂಗರೆ ನಿವಾಸಿ ಮುಸ್ತಫಾ ಮೇಲೆ ಹಲ್ಲೆ ಮಾಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!