AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕುಡಿದ ಮತ್ತಿನಲ್ಲಿ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಯುವಕ ಸಾವು

ಕುಡಿದ ಮತ್ತಿನಲ್ಲಿ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಯುವಕ ಸಾವನ್ನಪ್ಪಿರುವಂತಹ ಘಟನೆ ನಗರದ ಡಾ.ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೇಡ್​ನಲ್ಲಿ ನಡೆದಿದೆ.

ಬೆಳಗಾವಿ: ಕುಡಿದ ಮತ್ತಿನಲ್ಲಿ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಯುವಕ ಸಾವು
ಪ್ರಾತಿನಿಧಿಕ ಚಿತ್ರ Image Credit source: indiatvnews.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 13, 2023 | 10:10 PM

Share

ಬೆಳಗಾವಿ: ಕುಡಿದ ಮತ್ತಿನಲ್ಲಿ (Drunk man) ಕಟ್ಟಡದ 3ನೇ ಮಹಡಿಯಿಂದ ಜಿಗಿದು ಯುವಕ ಸಾವನ್ನಪ್ಪಿರುವಂತಹ ಘಟನೆ ನಗರದ ಡಾ.ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೇಡ್​ನಲ್ಲಿ ನಡೆದಿದೆ. ಯೋಗೇಶ್ ಶಾನಭಾಗ್(28) ಮೃತ ಯುವಕ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಮೂಲದವರು ಎಂದು ಗುರುತಿಸಲಾಗಿದೆ. ಸಂಜೆ ಸ್ನೇಹಿತರೊಂದಿಗೆ ಬ್ರೂ59 ಪಬ್​ಗೆ ಬಂದಿದ್ದು,​ ಈ ವೇಳೆ ಪಬ್​ನ ಕಿಟಕಿ ಬಳಿ ಬಂದು ಏಕಾಏಕಿ ಕೆಳಗೆ ಜಿಗಿದ್ದಾರೆ ಎನ್ನಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರ ದುರ್ಮರಣ

ದಾವಣಗೆರೆ: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್​ನಲ್ಲಿ ನಡೆದಿದೆ. ಮೋಹನ್​ ನಾಯ್ಕ್(30), ಪೂರ್ಯಾ ನಾಯ್ಕ್(35) ಮೃತರು. ಮೃತ ಸವಾರರು ಶಿವಮೊಗ್ಗದ ವಿನೋಬನಗರದ ನಿವಾಸಿಗಳಾಗಿದ್ದಾರೆ. ಚಲಿಸುತ್ತಿದ್ದ ಬೈಕ್​ಗೆ ಹಿಂದಿನಿಂದ ಬಸ್​ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಇದನ್ನೂ ಓದಿ: ಬೆಳಗಾವಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಕೊಲೆ; ವೈದ್ಯ ಅರೆಸ್ಟ್​​

ಮಹಿಳೆಯರ ಸರ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಕಬ್ಬಾಳು ಚಂದು, ಕುಳ್ಳ ರಘು ಬಂಧಿತ ಆರೋಪಿಗಳು. ಬಂಧಿತರಿಂದ 6 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡಿ, ಬೈಕ್​ನಲ್ಲಿ ಬಂದು ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು.

ಆರೋಪಿಗಳು ಇತ್ತೀಚೆಗೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ಪಾರಿಜಾತ ಹೂ ತರಲು ಹೋಗುತ್ತಿದ್ದ 71 ವರ್ಷದ ಆದಿಲಕ್ಷ್ಮಿ ಎಂಬ ವೃದ್ಧೆಯ ಸರ ಕಸಿದು ಪರಾರಿಯಾಗಿದ್ದರು. ಆರೋಪಿಗಳು ವೃದ್ಧೆಯನ್ನು ಮೊದಲು ಹೂ ಯಾವ ದೇವರಿಗೆ ಎಂದು ಆರೋಪಿ ಕಬ್ಬಾಳು ಚಂದು ಮಾತನಾಡಿಸಿದ್ದನು. ನಂತರ ಮತ್ತೊಬ್ಬ ಆರೋಪಿ ಬಂದು ಮಹಿಳೆ ಸರ ಕಸಿದು ಪರಾರಿಯಾಗಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Accident: ಮಿನಿ ಬಸ್​ ಡಿಕ್ಕಿ: ಆಟೋದಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ದಾವಣಗೆರೆ: ಗೋಮಾಳದ ವಿಚಾರಕ್ಕೆ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ದಾವಣಗೆರೆಯ ಗಾಂಧಿನಗರದ 6ನೇ ಕ್ರಾಸ್​ನಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಮೈಲಾರಿ(28) ಹತ್ಯೆಗೊಳಗಾದ ಯುವಕ. ಮೂವರು ಯುವಕರ ತಂಡದಿಂದ ದುಷ್ಕೃತ್ಯವೆಸಗಲಾಗಿದೆ. ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ 6 ಎಕರೆ ಗೋಮಾಳದ ವಿಚಾರವಾಗಿ ಜಗಳವಾಗಿದೆ. ಮಲ್ಲ, ಮೂರ್ತಪ್ಪ, ರಕ್ಷಿತ್ ಸೇರಿ 7 ಜನರ ತಂಡದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಹತ್ಯೆಯಾಗಿರುವ ಮೈಲಾರಿ ಕುಟುಂಬಸ್ಥರಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ