AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪಾರ್ಟಿಯಲ್ಲಿ ಗಲಾಟೆ: 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ

ಬೆಂಗಳೂರಿನ ಪೀಣ್ಯದಲ್ಲಿ ಮದ್ಯಪಾನ ಮಾಡಿದ ಅಮಲಿನಲ್ಲಿ ಕಲ್ಲಿನಿಂದ ಸ್ನೇಹಿತನ ತಲೆಗೆ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಂಗನಾಥ್ ಎಂಬುವರನ್ನು ಆನಂದ್ ಎಂಬ ಸ್ನೇಹಿತ ಕೊಲೆ ಮಾಡಿದ್ದಾನೆ. ಇಬ್ಬರ ನಡುವೆ ಜಗಳ ನಡೆದು, ಆನಂದ್ 15 ನಿಮಿಷಗಳ ಕಾಲ ರಂಗನಾಥ್‌ನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ.

ಎಣ್ಣೆ ಪಾರ್ಟಿಯಲ್ಲಿ ಗಲಾಟೆ: 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ
ಕೊಲೆ ನಡೆದ ಸ್ಥಳ
ವಿವೇಕ ಬಿರಾದಾರ
|

Updated on: Jul 18, 2025 | 5:27 PM

Share

ಬೆಂಗಳೂರು, ಜುಲೈ 18: ಕುಡಿದ ಅಮಲಿನಲ್ಲಿ ಸ್ನೇಹಿತ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಪೀಣ್ಯ ಬಳಿ ನಡೆದಿದೆ. ರಂಗನಾಥ್ (44 ವರ್ಷ) ಕೊಲೆಯಾದ ವ್ಯಕ್ತಿ. ರಂಗನಾಥ್ ಮೂಲತಃ ತುಮಕೂರು (Tumakur) ಜಿಲ್ಲೆಯ ಚಿಕ್ಕನಾಯಕನಹಳ್ಳಿಯವರು. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ರಂಗನಾಥ್ ಟೆಂಪೋ ಡ್ರೈವರ್​ ಆಗಿ ಕೆಲಸ ಮಾಡಿಕೊಂಡಿದ್ದರು. ಗುರುವಾರ (ಜು.17) ರಾತ್ರಿ ರಂಗನಾಥ್, ಸ್ನೇಹಿತ ಆನಂದ್​ನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಇಬ್ಬರ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿದ್ದು, ಆನಂದ್​ ಸ್ನೇಹಿತ ರಂಗನಾಥ್​ನ ತಲೆಗೆ 15 ನಿಮಿಷಗಳ ಕಾಲ ಕಲ್ಲಿನಿಂದ ಜಜ್ಜಿದ್ದಾನೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ.

ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೋಜ್ ಕುಮಾರ್ (25) ಮೃತ ದುರ್ದೈವಿ. ಮೃತ ಮನೋಜ್ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದನು. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್​ನಿಂದ ಸಾಲ ಪಡೆದು ಬೆಟ್ಟಿಂಗ್ ಆಡುತ್ತಿದ್ದನು. ಬೆಟ್ಚಿಂಗ್​ನಲ್ಲಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದನು. ಇದರಿಂದ ಮನೋಜ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವೀಡಿಯೋ ಮಾಡಿದ್ದರು. ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವು

ನೆಲಮಂಗಲ: ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಎನ್​ಎನ್​ಟಿ ಬಡಾವಣೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮೇಘನಾ (25) ಮೃತದುರ್ದೈವಿ. ಕೆಲಸದ ನಿಮಿತ್ತ ಮೇಘನಾ ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದರು. ಸೋಮವಾರ ಸ್ನೇಹಿತ ಸತೀಶ್ ಮನೆಗೆ ಮೇಘನಾ ಬಂದಿದ್ದರು. ಮೇಘನಾ ಮತ್ತು ಸತೀಶ್ ಮದುವೆಯಾಗುವವರಿದ್ದರು. ಶುಕ್ರವಾರ ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆ ಗ್ಯಾಸ್ ಗೀಸರ್ ಲೀಕ್​ ಆಗಿ ಮೇಘನಾ ಮೃತಪಟ್ಟಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ
Image
ಸರ್ಕಾರಿ ನೌಕರಿ ಆಮಿಷವೊಡ್ಡಿ 200 ರೂ. ಪಡೆದಿದ್ದವ 30 ವರ್ಷ ನಂತರ ಅರೆಸ್ಟ್
Image
ಪತ್ನಿಯ ಕುತ್ತಿಗೆ, ಮುಖಕ್ಕೆ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಪತಿ
Image
ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅಂದರ್
Image
ಗೆಳತಿಯ ಪತಿಯನ್ನು ಕೊಲೆ ಮಾಡಿದ ಶಾಲಾ ವಾಹನ ಚಾಲಕ? ಅನೈತಿಕ ಸಂಬಂಧ ಶಂಕೆ

ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ: ಬಿಜೆಪಿ ಎಂಎಲ್​​ಎಗೆ ನೋಟಿಸ್, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಮೃತನ ತಾಯಿ

ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್

ಚಿಕ್ಕಮಗಳೂರು: ಹೊನ್ನೇಕೊಪ್ಪ ಗ್ರಾಮದಲ್ಲಿ ಟ್ರಾನ್ಸ್​ಫಾರ್ಮರ್​ ದುರಸ್ತಿ ವೇಳೆ ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್ ಪ್ರವೀಣ್(27) ಮೃತಪಟ್ಟಿದ್ದಾರೆ. ಪ್ರವೀಣ್ ಬಾಳೆಹೊನ್ನೂರು ವಿಭಾಗದಲ್ಲಿ ಲೈನ್​ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೆಸ್ಕಾ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ